ಫೇಸ್ ಬುಕ್ನಲ್ಲಿ ಸ್ಟೇಟಸ್ ಅಪ್ಡೇಟ್ ಮಾಡುವುದರಿಂದ ದೇಶ ಉದ್ದಾರ ಆಗುತ್ತಾ? ಎಂದು ಪ್ರಶ್ನೆ ಕೇಳುವವರಿಗೆ ಇಲ್ಲಿದೆ ಉತ್ತರ. ಸಾಮಾಜಿಕ ತಾಣವನ್ನು ಜನರ ಉದ್ಧಾರಕ್ಕಾಗಿ ಹೇಗೆ ಬಳಸಿಕೊಳ್ಳಬಹುದು. ಯಾವುದೇ ಮಾಧ್ಯಮವನ್ನು ಸಮರ್ಪಕವಾಗಿ ಬಳಸಿದರೆ, ಅದರಿಂದ ಉದ್ಧಾರ ಖಂಡಿತ ಸಾಧ್ಯವಾಗುತ್ತದೆ. ಹೀಗಂತ ಜನರಿಗೆ ತೋರಿಸಿಕೊಟ್ಟು, ಮಾದರಿಯಾದ ವ್ಯಕ್ತಿ ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಜಿಲ್ಲಾಧಿಕಾರಿ ಪ್ರಶಾಂತ್ ನಾಯರ್.