ಬದುಕಿನಲ್ಲಿ ಅನಿರೀಕ್ಷಿತವಾಗಿ ಏನಾದರೂ ಒಂದು ಆಘಾತವಾದರೆ ಸಾಕು ಈ ಬದುಕೇ ಸಾಕೆಂದು ಗೋಳಿಡುತ್ತೇವೆ, ನನ್ನ ಬದುಕು ಹೀಗಾಯ್ತಲ್ಲ ಎಂದು ಕಣ್ಣೀರಿಡುತ್ತೇವೆ. ಅದೇ ವೇಳೆ ಕೃತಕ ಕಾಲುಗಳನ್ನು ಕಟ್ಟಿಕೊಂಡು ನೃತ್ಯ ಮಾಡುವ ಸುಧಾ ಚಂದ್ರನ್, ಬ್ಲೇಡ್ ರನ್ನರ್ ಮೇಜರ್ ದೇವೇಂದ್ರ ಪಾಲ್, ಅಂಧರ ಕ್ರಿಕೆಟ್ ತಂಡದ ನಾಯಕ ಶೇಖರ್ ನಾಯ್ಕ್ ಮುಂತಾದವರು ವೈಫಲ್ಯಗಳನ್ನು ಮೆಟ್ಟಿ ನಿಂತು ಸಾಧನೆಗೈದವರು ನಮಗೆ ಸ್ಪೂರ್ತಿ ನೀಡುತ್ತಾರೆ. ಇಂಥಾ ಸಾಧಕರ ಪಟ್ಟಿಯಲ್ಲೀಗ ಅಮೀರ್ ಹುಸೈನ್ ಲೋನ್ ಎಂಬ ಈ ಯುವಕ ಸ್ಥಾನಗಿಟ್ಟಿಸಿದ್ದಾನೆ.