ಬೆಂಗಳೂರು: ನೈಋತ್ಯ ಮುಂಗಾರಿಗೆ ಅನುಕೂಲಕರ ವಾತಾವರಣ ಸೃಷ್ಟಿಯಾಗಿದ್ದು ಮುಂದಿನ ಎರಡು ದಿನಗಳಲ್ಲಿ ಕರ್ನಾಟಕದತ್ತ ಮುನ್ನುಗ್ಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಕರ್ನಾಟಕದ ಬಹುತೇಕ ಕರಾವಾಳಿ ಪ್ರದೇಶಗಳಲ್ಲಿ ಹಾಗು ರಾಜ್ಯದ ಒಳ ಭಾಗದ ಕೆಲವು ಪ್ರದೇಶಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರದಲ್ಲಿ ಸೋಮವಾರ ಮೋಡ ಕವಿದ ವಾತಾವರಣ ಇರಲಿದ್ದು ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಕೂಡ ಹವಾಮಾನ ಇಲಾಖೆ ತಿಳಿಸಿದೆ.
ಜೂನ್ ೧ ರಿಂದ ಬೆಂಗಳೂರಿನಲ್ಲಿ ೩೬ ಮಿಲಿ ಮೀಟರ್ ಮಳೆಯಾಗಿದೆ. ಎಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ೫೦ ಎಂಎಂ ಮತ್ತು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ೮ ಎಂಎಂ ಮಳೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರುನಲ್ಲಿ ಗರಿಷ್ಠ ಉಷ್ಣಾಂಶ ೩೧ ಡಿಗ್ರೀ ಸೆಲ್ಸಿಯಸ್ ಇರಲಿದ್ದು ಕನಿಷ್ಠ ಉಷ್ಣಾಂಶ ೨೧ ಡಿಗ್ರಿ ಸೆಲ್ಷಿಯಸ್ ಇರಲಿದೆ ಎಂದಿದ್ದಾರೆ.
Advertisement