ಬಾಗಲಕೋಟ ಜಿಲ್ಲೆಯ ಮುಧೋಳ ತಾಲೂಕಿನ ರನ್ನಬೆಳಗಲಿ ಪಟ್ಟಣದ ಅದೃಶಿ ತೋಟದ ವಸ್ತಿ ನಿವಾಸಿ ಹನಮಂತ ಶಿರೋಳ ಎಂಬ ರೈತ ತನ್ನ ಸ್ವತಂತ್ರ ಒಕ್ಕಲುತನದ 8 ವರ್ಷಗಳ ಅನುಭವವನ್ನು ಧಾರೆಯೆರೆದು ಲಾಭ, ನಷ್ಟ, ಮಾರುಕಟ್ಟೆಯ ಏರು-ಪೇರುಗಳನ್ನು ಮನಗಂಡು ತಮ್ಮ 19 ಎಕರೆ ಜಮೀನಿನಲ್ಲಿ ಸಮವಾಗಿ ಕಬ್ಬು, ಬಾಳೆ, ಅರಿಷಿಣ, ಗೋವಿನಜೋಳದಂಥ ವೈವಿಧ್ಯಮಯ ಬೆಳೆ ಬೆಳೆದು ಪೂರಕವಾಗಿ 20 ಜಾನುವಾರುಗಳ ಸಾಕಣೆ ಮಾಡಿ ಹೈನೋದ್ಯಮವನ್ನೂ ನಡೆಸುತ್ತಿದ್ದಾರೆ.