ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ಬಳಿಕ ಸಂಭ್ರಮಾಚರಣೆಯಲ್ಲಿ ಸಿದ್ದರಾಮಯ್ಯ - ಡಿಕೆ ಶಿವಕುಮಾರ್ 
ವಿಶ್ಲೇಷಣೆ

ಹಳೆ ಮೈಸೂರು ಭಾಗದಲ್ಲಿ ಒಕ್ಕಲಿಗ ಮತಗಳ ಒಡಕು; ಅಹಿಂದ ಒಗ್ಗಟ್ಟಿನಿಂದ ಕಾಂಗ್ರೆಸ್‌‌ಗೆ ಭರ್ಜರಿ ಬಹುಮತ!

ಒಕ್ಕಲಿಗ ಸಮುದಾಯದ ಮತಬ್ಯಾಂಕ್‌ ಅನ್ನು ಹಿಡಿತಕ್ಕೆ ತೆಗೆದುಕೊಳ್ಳಲು ಮೂರು ಪಕ್ಷಗಳಿಂದ ರಣಾಂಗಣವಾಗಿ ಮಾರ್ಪಟ್ಟಿದ್ದ ಹಳೇ ಮೈಸೂರು ಭಾಗದಲ್ಲಿ ನಡೆದ ಪೈಪೋಟಿಯಲ್ಲಿ ಕಾಂಗ್ರೆಸ್‌ ಅನಾಯಾಸವಾಗಿ ಗೆಲುವು ಸಾಧಿಸಿದೆ. 2013 ಮತ್ತು 1999 ರಲ್ಲಿ ಆಗಿನ ಕೆಪಿಸಿಸಿ ಮುಖ್ಯಸ್ಥ ಎಸ್‌ಎಂ ಕೃಷ್ಣ ನೇತೃತ್ವದಲ್ಲಿ ಪಕ್ಷ ಮಾಡಿದ ಸಾಧನೆಯನ್ನು ಇದೀಗ ಪುನರಾವರ್ತಿಸಿದೆ.

ಮೈಸೂರು: ಒಕ್ಕಲಿಗ ಸಮುದಾಯದ ಮತಬ್ಯಾಂಕ್‌ ಅನ್ನು ಹಿಡಿತಕ್ಕೆ ತೆಗೆದುಕೊಳ್ಳಲು ಮೂರು ಪಕ್ಷಗಳಿಂದ ರಣಾಂಗಣವಾಗಿ ಮಾರ್ಪಟ್ಟಿದ್ದ ಹಳೇ ಮೈಸೂರು ಭಾಗದಲ್ಲಿ ನಡೆದ ಪೈಪೋಟಿಯಲ್ಲಿ ಕಾಂಗ್ರೆಸ್‌ ಅನಾಯಾಸವಾಗಿ ಗೆಲುವು ಸಾಧಿಸಿದೆ. 2013 ಮತ್ತು 1999 ರಲ್ಲಿ ಆಗಿನ ಕೆಪಿಸಿಸಿ ಮುಖ್ಯಸ್ಥ ಎಸ್‌ಎಂ ಕೃಷ್ಣ ನೇತೃತ್ವದಲ್ಲಿ ಪಕ್ಷ ಮಾಡಿದ ಸಾಧನೆಯನ್ನು ಇದೀಗ ಪುನರಾವರ್ತಿಸಿದೆ.

ಕಾಂಗ್ರೆಸ್ ಮೇಕೆದಾಟು ಯಾತ್ರೆ, ಫ್ರೀಡಂ ಮಾರ್ಚ್ ನಡೆಸಿತು ಮತ್ತು ಕೋಲಾರದಿಂದ ಚುನಾವಣಾ ಪ್ರಚಾರ ಆರಂಭಿಸಿತು. ಇದು ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಲಾಭವನ್ನು ಪಡೆದುಕೊಂಡಿತು ಮತ್ತು ವಿಜಯಸಂಕಲ್ಪ ಯಾತ್ರೆಯ ಸಮಯದಲ್ಲಿ ಎಲ್ಲಾ ವಿಧಾನಸಭಾ ಕ್ಷೇತ್ರಗಳನ್ನು ತಲುಪಿತು.

ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರು ಇಲ್ಲಿನ ಎಲ್ಲಾ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಂಡಿದ್ದು, ಉನ್ನತ ಹುದ್ದೆಗೆ (ಮುಖ್ಯಮಂತ್ರಿ ಹುದ್ದೆ) ಅವಕಾಶ ನೀಡುವಂತೆ ಡಿಕೆ ಶಿವಕುಮಾರ್‌ ತಮ್ಮ ಒಕ್ಕಲಿಗ ಸಮುದಾಯದವರಿಗೂ ಮನವಿ ಮಾಡಿದ್ದಾರೆ. 

ಹಿಂದಿನ ಚುನಾವಣೆಯಲ್ಲಿ ಜೆಡಿಎಸ್ ಪಾಲಾಗಿದ್ದ ಸಮುದಾಯದ ಮತಗಳಿಗೆ ಕತ್ತರಿ ಹಾಕಲು ಒಕ್ಕಲಿಗರನ್ನು ಬಿಜೆಪಿ ಕಣಕ್ಕಿಳಿಸಿದೆ. ಹಲವು ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಮೈಸೂರು, ಮಂಡ್ಯ, ಹಾಸನ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿದೆ. ಬಿಜೆಪಿಯ ಹೆಚ್ಚಿದ ಮತಗಳಿಕೆ ಮತ್ತು ಒಕ್ಕಲಿಗ ಮತಗಳ ತಳಹದಿಯ ಅಲ್ಪ ಪ್ರಮಾಣದ ಒಳಹರಿವು ಕಾಂಗ್ರೆಸ್‌ಗೆ ಹಲವು ಸ್ಥಾನಗಳನ್ನು ಗೆಲ್ಲಲು ಸಹಾಯ ಮಾಡಿತು.

ಜೆಡಿಎಸ್‌ನಿಂದ ನಡೆಸಿದ ಪಂಚರತ್ನ ಯಾತ್ರೆಯು ಹೆಚ್ಚಿನ ಜನರನ್ನು ಆಕರ್ಷಿಸಿದರೂ, ಅದು ಮತಗಳಾಗಿ ಪರಿವರ್ತನೆಯಾಗಲಿಲ್ಲ. ಹೀಗಾಗಿ ಜೆಡಿಎಸ್ ಗಳಿಸಿದ ಮತ ಪ್ರಮಾಣವು ಶೇ 18 ರಿಂದ 14ಕ್ಕೆ ಇಳಿದಿದೆ. ಈ ಪ್ರದೇಶವು ಎಸ್‌ಸಿ ಮತಗಳಲ್ಲಿ ವಿಭಜನೆಯನ್ನು ಕಂಡಿದ್ದರಿಂದ ಬಲ ಮತ್ತು ಎಡ ದಲಿತರು ಮತ್ತು ಸೂಕ್ಷ್ಮ ಸಮುದಾಯಗಳನ್ನು ಕಾಂಗ್ರೆಸ್ ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಯಿತು. ಎಸ್‌ಸಿ/ಎಸ್‌ಟಿಗಳು, ಒಕ್ಕಲಿಗರು ಮತ್ತು ಲಿಂಗಾಯತರಿಗೆ ಹೆಚ್ಚಿನ ಮೀಸಲಾತಿ ನೀಡುವುದರ ಮೇಲೆ ಕೇಂದ್ರೀಕರಿಸಿದ ಬಿಜೆಪಿಯ ಪ್ರಚಾರವೂ ಪ್ರಯೋಜನವಾಗಲಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT