ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ಬಳಿಕ ಸಂಭ್ರಮಾಚರಣೆಯಲ್ಲಿ ಸಿದ್ದರಾಮಯ್ಯ - ಡಿಕೆ ಶಿವಕುಮಾರ್ 
ವಿಶ್ಲೇಷಣೆ

ಹಳೆ ಮೈಸೂರು ಭಾಗದಲ್ಲಿ ಒಕ್ಕಲಿಗ ಮತಗಳ ಒಡಕು; ಅಹಿಂದ ಒಗ್ಗಟ್ಟಿನಿಂದ ಕಾಂಗ್ರೆಸ್‌‌ಗೆ ಭರ್ಜರಿ ಬಹುಮತ!

ಒಕ್ಕಲಿಗ ಸಮುದಾಯದ ಮತಬ್ಯಾಂಕ್‌ ಅನ್ನು ಹಿಡಿತಕ್ಕೆ ತೆಗೆದುಕೊಳ್ಳಲು ಮೂರು ಪಕ್ಷಗಳಿಂದ ರಣಾಂಗಣವಾಗಿ ಮಾರ್ಪಟ್ಟಿದ್ದ ಹಳೇ ಮೈಸೂರು ಭಾಗದಲ್ಲಿ ನಡೆದ ಪೈಪೋಟಿಯಲ್ಲಿ ಕಾಂಗ್ರೆಸ್‌ ಅನಾಯಾಸವಾಗಿ ಗೆಲುವು ಸಾಧಿಸಿದೆ. 2013 ಮತ್ತು 1999 ರಲ್ಲಿ ಆಗಿನ ಕೆಪಿಸಿಸಿ ಮುಖ್ಯಸ್ಥ ಎಸ್‌ಎಂ ಕೃಷ್ಣ ನೇತೃತ್ವದಲ್ಲಿ ಪಕ್ಷ ಮಾಡಿದ ಸಾಧನೆಯನ್ನು ಇದೀಗ ಪುನರಾವರ್ತಿಸಿದೆ.

ಮೈಸೂರು: ಒಕ್ಕಲಿಗ ಸಮುದಾಯದ ಮತಬ್ಯಾಂಕ್‌ ಅನ್ನು ಹಿಡಿತಕ್ಕೆ ತೆಗೆದುಕೊಳ್ಳಲು ಮೂರು ಪಕ್ಷಗಳಿಂದ ರಣಾಂಗಣವಾಗಿ ಮಾರ್ಪಟ್ಟಿದ್ದ ಹಳೇ ಮೈಸೂರು ಭಾಗದಲ್ಲಿ ನಡೆದ ಪೈಪೋಟಿಯಲ್ಲಿ ಕಾಂಗ್ರೆಸ್‌ ಅನಾಯಾಸವಾಗಿ ಗೆಲುವು ಸಾಧಿಸಿದೆ. 2013 ಮತ್ತು 1999 ರಲ್ಲಿ ಆಗಿನ ಕೆಪಿಸಿಸಿ ಮುಖ್ಯಸ್ಥ ಎಸ್‌ಎಂ ಕೃಷ್ಣ ನೇತೃತ್ವದಲ್ಲಿ ಪಕ್ಷ ಮಾಡಿದ ಸಾಧನೆಯನ್ನು ಇದೀಗ ಪುನರಾವರ್ತಿಸಿದೆ.

ಕಾಂಗ್ರೆಸ್ ಮೇಕೆದಾಟು ಯಾತ್ರೆ, ಫ್ರೀಡಂ ಮಾರ್ಚ್ ನಡೆಸಿತು ಮತ್ತು ಕೋಲಾರದಿಂದ ಚುನಾವಣಾ ಪ್ರಚಾರ ಆರಂಭಿಸಿತು. ಇದು ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಲಾಭವನ್ನು ಪಡೆದುಕೊಂಡಿತು ಮತ್ತು ವಿಜಯಸಂಕಲ್ಪ ಯಾತ್ರೆಯ ಸಮಯದಲ್ಲಿ ಎಲ್ಲಾ ವಿಧಾನಸಭಾ ಕ್ಷೇತ್ರಗಳನ್ನು ತಲುಪಿತು.

ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರು ಇಲ್ಲಿನ ಎಲ್ಲಾ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಂಡಿದ್ದು, ಉನ್ನತ ಹುದ್ದೆಗೆ (ಮುಖ್ಯಮಂತ್ರಿ ಹುದ್ದೆ) ಅವಕಾಶ ನೀಡುವಂತೆ ಡಿಕೆ ಶಿವಕುಮಾರ್‌ ತಮ್ಮ ಒಕ್ಕಲಿಗ ಸಮುದಾಯದವರಿಗೂ ಮನವಿ ಮಾಡಿದ್ದಾರೆ. 

ಹಿಂದಿನ ಚುನಾವಣೆಯಲ್ಲಿ ಜೆಡಿಎಸ್ ಪಾಲಾಗಿದ್ದ ಸಮುದಾಯದ ಮತಗಳಿಗೆ ಕತ್ತರಿ ಹಾಕಲು ಒಕ್ಕಲಿಗರನ್ನು ಬಿಜೆಪಿ ಕಣಕ್ಕಿಳಿಸಿದೆ. ಹಲವು ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಮೈಸೂರು, ಮಂಡ್ಯ, ಹಾಸನ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿದೆ. ಬಿಜೆಪಿಯ ಹೆಚ್ಚಿದ ಮತಗಳಿಕೆ ಮತ್ತು ಒಕ್ಕಲಿಗ ಮತಗಳ ತಳಹದಿಯ ಅಲ್ಪ ಪ್ರಮಾಣದ ಒಳಹರಿವು ಕಾಂಗ್ರೆಸ್‌ಗೆ ಹಲವು ಸ್ಥಾನಗಳನ್ನು ಗೆಲ್ಲಲು ಸಹಾಯ ಮಾಡಿತು.

ಜೆಡಿಎಸ್‌ನಿಂದ ನಡೆಸಿದ ಪಂಚರತ್ನ ಯಾತ್ರೆಯು ಹೆಚ್ಚಿನ ಜನರನ್ನು ಆಕರ್ಷಿಸಿದರೂ, ಅದು ಮತಗಳಾಗಿ ಪರಿವರ್ತನೆಯಾಗಲಿಲ್ಲ. ಹೀಗಾಗಿ ಜೆಡಿಎಸ್ ಗಳಿಸಿದ ಮತ ಪ್ರಮಾಣವು ಶೇ 18 ರಿಂದ 14ಕ್ಕೆ ಇಳಿದಿದೆ. ಈ ಪ್ರದೇಶವು ಎಸ್‌ಸಿ ಮತಗಳಲ್ಲಿ ವಿಭಜನೆಯನ್ನು ಕಂಡಿದ್ದರಿಂದ ಬಲ ಮತ್ತು ಎಡ ದಲಿತರು ಮತ್ತು ಸೂಕ್ಷ್ಮ ಸಮುದಾಯಗಳನ್ನು ಕಾಂಗ್ರೆಸ್ ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಯಿತು. ಎಸ್‌ಸಿ/ಎಸ್‌ಟಿಗಳು, ಒಕ್ಕಲಿಗರು ಮತ್ತು ಲಿಂಗಾಯತರಿಗೆ ಹೆಚ್ಚಿನ ಮೀಸಲಾತಿ ನೀಡುವುದರ ಮೇಲೆ ಕೇಂದ್ರೀಕರಿಸಿದ ಬಿಜೆಪಿಯ ಪ್ರಚಾರವೂ ಪ್ರಯೋಜನವಾಗಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT