ಷ. ಶೆಟ್ಟರ್, ಡಾ.ಬಿ.ಎನ್. ಸುಮಿತ್ರಾಬಾಯಿ, ಡಾ.ನಾ.ಮೊಗಸಾಲೆ 
ಸಾಧನೆ

ಷ.ಶೆಟ್ಟರ್, ಸುಮಿತ್ರಾಬಾಯಿ, ಮೊಗಸಾಲೆಗೆ ಮಾಸ್ತಿ ಪ್ರಶಸ್ತಿ

ಹಿರಿಯ ಲೇಖಕ ಪ್ರೊ.ಷ. ಶೆಟ್ಟರ್, ಡಾ.ಬಿ.ಎನ್. ಸುಮಿತ್ರಾಬಾಯಿ ಮತ್ತು ಡಾ.ನಾ.ಮೊಗಸಾಲೆ ಅವರಿಗೆ...

ಹಿರಿಯ ಲೇಖಕ ಪ್ರೊ.ಷ. ಶೆಟ್ಟರ್, ಡಾ.ಬಿ.ಎನ್. ಸುಮಿತ್ರಾಬಾಯಿ ಮತ್ತು ಡಾ.ನಾ.ಮೊಗಸಾಲೆ ಅವರಿಗೆ 2015ನೇ ಸಾಲಿನ ಕನ್ನಡ ಸಾಹಿತ್ಯ ಕ್ಷೇತ್ರದ ಪ್ರತಿಷ್ಠಿತ 'ಮಾಸ್ತಿ ಪ್ರಶಸ್ತಿ' ಸಂದಿದೆ.

ಜೂನ್‌ನಲ್ಲಿ ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಪುರಸ್ಕೃತರಿಗೆ 25 ಸಾವಿರ ರುಪಾಯಿ ನಗದು, ಮಾಸ್ತಿ ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುವುದು.

ಪ್ರೊ.ಷ.ಶೆಟ್ಟರ್ ಅವರಿಗೆ ಕನ್ನಡ ಭಾಷಾ ಅಧ್ಯಯನ ಮತ್ತು ಸಂಶೋಧನೆ ವಿಭಾಗದಲ್ಲಿ ಪ್ರಶಸ್ತಿ ಸಂದಿದೆ. ಡಾ.ಬಿ.ಎನ್. ಸುಮಿತ್ರಾ ಬಾಯಿ ಅವರಿಗೆ ವಿಮರ್ಶೆ ವಿಭಾಗದಲ್ಲಿ ಪ್ರಶಸ್ತಿ ಸಂದಿದೆ. ಅವರು ಸಂಸ್ಕೃತ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಜೈನ ಶಾಸ್ತ್ರ ಮತ್ತು ಪ್ರಾಕೃತದಲ್ಲಿ ಪಿ.ಎಚ್.ಡಿ ಮಾಡಿದ್ದಾರೆ.

ಡಾ.ನಾ.ಮೊಗಸಾಲೆ ಅವರಿಗೆ ಸೃಜನಶೀಲ ವಿಭಾಗದಲ್ಲಿ ಪ್ರಶಸ್ತಿ ಸಂದಿದ್ದು, ಅವರು ಕತೆ, ಕಾದಂಬರಿ, ಕವನ ಲೇಖನ ಸಂಕಲನ, ಸಂಪಾದನಾ ಕೃತಿಗಳು ವೈದ್ಯಕೀಯ ಬರಹಗಳೂ ಸೇರಿ 65 ಪುಸ್ತಕಗಳನ್ನು ಹೊರತಂದಿದ್ದಾರೆ. ಕೇರಳ ಹುಟ್ಟೂರಾದರೂ, ಕಾರ್ಕಳದ ಸಮೀಪದ ಕಾಂತಾವರದಲ್ಲಿ ನೆಲೆಸಿ, ಬಹುಸಂಸ್ಕೃತಿ ಹಾಗೂ ಜೀವ ವೈವಿದ್ಯತೆ ಉಳಿಸಲು ಶ್ರಮಿಸಿದ್ದಾರೆ. ಇವರ ಹಲವು ಕತೆ, ಕವನ, ಕಾದಂಬರಿಗಳು ಹಿಂದಿ, ಇಂಗ್ಲಿಷ್, ತೆಲುಗು ಭಾಷೆಗೆ ಅನುವಾದವಾಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT