ಷ. ಶೆಟ್ಟರ್, ಡಾ.ಬಿ.ಎನ್. ಸುಮಿತ್ರಾಬಾಯಿ, ಡಾ.ನಾ.ಮೊಗಸಾಲೆ 
ಸಾಧನೆ

ಷ.ಶೆಟ್ಟರ್, ಸುಮಿತ್ರಾಬಾಯಿ, ಮೊಗಸಾಲೆಗೆ ಮಾಸ್ತಿ ಪ್ರಶಸ್ತಿ

ಹಿರಿಯ ಲೇಖಕ ಪ್ರೊ.ಷ. ಶೆಟ್ಟರ್, ಡಾ.ಬಿ.ಎನ್. ಸುಮಿತ್ರಾಬಾಯಿ ಮತ್ತು ಡಾ.ನಾ.ಮೊಗಸಾಲೆ ಅವರಿಗೆ...

ಹಿರಿಯ ಲೇಖಕ ಪ್ರೊ.ಷ. ಶೆಟ್ಟರ್, ಡಾ.ಬಿ.ಎನ್. ಸುಮಿತ್ರಾಬಾಯಿ ಮತ್ತು ಡಾ.ನಾ.ಮೊಗಸಾಲೆ ಅವರಿಗೆ 2015ನೇ ಸಾಲಿನ ಕನ್ನಡ ಸಾಹಿತ್ಯ ಕ್ಷೇತ್ರದ ಪ್ರತಿಷ್ಠಿತ 'ಮಾಸ್ತಿ ಪ್ರಶಸ್ತಿ' ಸಂದಿದೆ.

ಜೂನ್‌ನಲ್ಲಿ ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಪುರಸ್ಕೃತರಿಗೆ 25 ಸಾವಿರ ರುಪಾಯಿ ನಗದು, ಮಾಸ್ತಿ ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುವುದು.

ಪ್ರೊ.ಷ.ಶೆಟ್ಟರ್ ಅವರಿಗೆ ಕನ್ನಡ ಭಾಷಾ ಅಧ್ಯಯನ ಮತ್ತು ಸಂಶೋಧನೆ ವಿಭಾಗದಲ್ಲಿ ಪ್ರಶಸ್ತಿ ಸಂದಿದೆ. ಡಾ.ಬಿ.ಎನ್. ಸುಮಿತ್ರಾ ಬಾಯಿ ಅವರಿಗೆ ವಿಮರ್ಶೆ ವಿಭಾಗದಲ್ಲಿ ಪ್ರಶಸ್ತಿ ಸಂದಿದೆ. ಅವರು ಸಂಸ್ಕೃತ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಜೈನ ಶಾಸ್ತ್ರ ಮತ್ತು ಪ್ರಾಕೃತದಲ್ಲಿ ಪಿ.ಎಚ್.ಡಿ ಮಾಡಿದ್ದಾರೆ.

ಡಾ.ನಾ.ಮೊಗಸಾಲೆ ಅವರಿಗೆ ಸೃಜನಶೀಲ ವಿಭಾಗದಲ್ಲಿ ಪ್ರಶಸ್ತಿ ಸಂದಿದ್ದು, ಅವರು ಕತೆ, ಕಾದಂಬರಿ, ಕವನ ಲೇಖನ ಸಂಕಲನ, ಸಂಪಾದನಾ ಕೃತಿಗಳು ವೈದ್ಯಕೀಯ ಬರಹಗಳೂ ಸೇರಿ 65 ಪುಸ್ತಕಗಳನ್ನು ಹೊರತಂದಿದ್ದಾರೆ. ಕೇರಳ ಹುಟ್ಟೂರಾದರೂ, ಕಾರ್ಕಳದ ಸಮೀಪದ ಕಾಂತಾವರದಲ್ಲಿ ನೆಲೆಸಿ, ಬಹುಸಂಸ್ಕೃತಿ ಹಾಗೂ ಜೀವ ವೈವಿದ್ಯತೆ ಉಳಿಸಲು ಶ್ರಮಿಸಿದ್ದಾರೆ. ಇವರ ಹಲವು ಕತೆ, ಕವನ, ಕಾದಂಬರಿಗಳು ಹಿಂದಿ, ಇಂಗ್ಲಿಷ್, ತೆಲುಗು ಭಾಷೆಗೆ ಅನುವಾದವಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT