ಕೃಷಿ-ಪರಿಸರ

ಹಣ್ಣು-ತರಕಾರಿಗಳಲ್ಲಿ ಹೆಚ್ಚು ಕೀಟನಾಶಕ ಅಂಶ ಪತ್ತೆ: ಸರ್ಕಾರ ವರದಿ

ತರಕಾರಿ, ಹಣ್ಣು, ಅಕ್ಕಿ, ಗೋಧಿ ಸೇರಿದಂತೆ ಇತರೆ ಆಹಾರ ಪದಾರ್ಥಗಳಲ್ಲಿ ಹೆಚ್ಚಿನ ಮಟ್ಟದ ಕೀಟನಾಶಕ ಅಂಶ...

ನವದೆಹಲಿ: ತರಕಾರಿ, ಹಣ್ಣು, ಅಕ್ಕಿ, ಗೋಧಿ ಸೇರಿದಂತೆ ಇತರೆ ಆಹಾರ ಪದಾರ್ಥಗಳಲ್ಲಿ ಹೆಚ್ಚಿನ ಮಟ್ಟದ ಕೀಟನಾಶಕ ಅಂಶ ಪತ್ತೆಯಾಗಿದೆ ಎಂದು ಸರ್ಕಾರದ ವರದಿ ಹೇಳಿದೆ.

16,790ರಷ್ಟು ಆಹಾರ ಪದಾರ್ಥಗಳನ್ನು ಪರೀಕ್ಷೆಗೆ ಒಳಪಡಿಸಿದಾಗ ಅದರಲ್ಲಿ 509 ಆಹಾರಗಳಲ್ಲಿ ಹೆಚ್ಚಿನ ಕೀಟನಾಶಕ ಅಂಶವಿರುವುದು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಹಾಲು, ಮಾಂಸ, ಮತ್ತು ನೀರಿನಲ್ಲಿ ಯಾವುದೇ ರೀತಿಯ ಕೀಟನಾಶಕ ಪತ್ತೆಯಾಗಿಲ್ಲ.

ರಾಷ್ಟ್ರಮಟ್ಟದಲ್ಲಿ ಕೀಟನಾಶಕಗಳ ಬಳಕೆ ಕಡಿತ ಯೋಜನೆಯಡಿಯಲ್ಲಿ ನಡೆಸಿದ ಅಧ್ಯಯನದಲ್ಲಿ ಈ ವಿಷಯ ತಿಳಿದು ಬಂದಿದೆ. ತರಕಾರಿ ಮತ್ತು ಹಣ್ಣುಗಳಿಗೆ ಹೆಚ್ಚಿನ ಮಟ್ಟದಲ್ಲಿ ಕೀಟನಾಶಕಗಳನ್ನು ಸಿಂಪಡಿಸಲಾಗುತ್ತಿದೆ ಎಂದು ಈ ವರದಿ ಹೇಳುತ್ತಿದೆ.

ಸಗಟು ಮಾರಾಟ ಮಳಿಗೆಗಳಲ್ಲಿ ಮತ್ತು ಚಿಲ್ಲರೆ ಮಾರುಕಟ್ಟೆಗಳಲ್ಲಿ ಸಂಗ್ರಹಿಸಲಾದ ಆಹಾರಗಳನ್ನು ಸಂಗ್ರಹಿಸಿ ದೇಶದ ವಿವಿಧ ಲ್ಯಾಬ್‌ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ವರದಿಯ ಪ್ರಕಾರ, 7,591 ತರಾಕಾರಿಗಳಲ್ಲಿ 221 ತರಕಾರಿಗಳಲ್ಲಿ ಹೆಚ್ಚಿನ ಮಟ್ಟದ ಕ್ರಿಮಿನಾಶಕಗಳು ಪತ್ತೆಯಾಗಿದೆ.

ಎಲೆಕೋಸು, ಬದನೆ, ಟೊಮೆಟೋ, ಬೆಂಡಕಾಯಿ, ಬೆಂಡೆಕಾಯಿ, ಸೌತೆಕಾಯಿ, ಹಸಿರು ಬಟಾಣಿಗೆ ಹೋಲಿಸಿದರೆ, ಕೋಸು, ಕ್ಯಾಪ್ಸಿಕಂ, ಹಸಿರು ಮೆಣಸಿಕಾಯಿ, ಹೂಕೋಸುಗಳಲ್ಲಿ ಹೆಚ್ಚಿನ ಮಟ್ಟದ ಕೀಟನಾಶಕ ಪತ್ತೆಯಾಗಿದೆ.

ಇನ್ನು ಹಣ್ಣುಗಳಲ್ಲಿ 2,235ಕ್ಕೆ 36 ಹಣ್ಣುಗಳು ಹೆಚ್ಚಿನ ಕೀಟನಾಶಕ ಅಂಶ ಹೊಂದಿದೆ. ಅದರಲ್ಲೂ ದ್ರಾಕ್ಷಿಗಳಿಗೆ ಹೆಚ್ಚಿನ ಮಟ್ಟದ ಕೀಟನಾಶಕ ಬಳಸಲಾಗುತ್ತಿದೆ ಎಂಬುದು ಈ ಪರೀಕ್ಷೆಯಿಂದ ತಿಳಿದು ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT