ಸಾಂದರ್ಭಿಕ ಚಿತ್ರ 
ಕೃಷಿ-ಪರಿಸರ

ಕರ್ನಾಟಕದತ್ತ ಧಾವಿಸುತ್ತಿರುವ ನೈಋತ್ಯ ಮುಂಗಾರು

ನೈಋತ್ಯ ಮುಂಗಾರಿಗೆ ಅನುಕೂಲಕರ ವಾತಾವರಣ ಸೃಷ್ಟಿಯಾಗಿದ್ದು ಮುಂದಿನ ಎರಡು ದಿನಗಳಲ್ಲಿ ಕರ್ನಾಟಕದತ್ತ ಮುನ್ನುಗ್ಗಲಿದೆ ಎಂದು ಹವಾಮಾನ ಇಲಾಖೆ

ಬೆಂಗಳೂರು: ನೈಋತ್ಯ ಮುಂಗಾರಿಗೆ ಅನುಕೂಲಕರ ವಾತಾವರಣ ಸೃಷ್ಟಿಯಾಗಿದ್ದು ಮುಂದಿನ ಎರಡು ದಿನಗಳಲ್ಲಿ ಕರ್ನಾಟಕದತ್ತ ಮುನ್ನುಗ್ಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಕರ್ನಾಟಕದ ಬಹುತೇಕ ಕರಾವಾಳಿ ಪ್ರದೇಶಗಳಲ್ಲಿ ಹಾಗು ರಾಜ್ಯದ ಒಳ ಭಾಗದ ಕೆಲವು ಪ್ರದೇಶಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರದಲ್ಲಿ ಸೋಮವಾರ ಮೋಡ ಕವಿದ ವಾತಾವರಣ ಇರಲಿದ್ದು ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಕೂಡ ಹವಾಮಾನ ಇಲಾಖೆ ತಿಳಿಸಿದೆ.

ಜೂನ್ ೧ ರಿಂದ ಬೆಂಗಳೂರಿನಲ್ಲಿ ೩೬ ಮಿಲಿ ಮೀಟರ್ ಮಳೆಯಾಗಿದೆ. ಎಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ೫೦ ಎಂಎಂ ಮತ್ತು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ೮ ಎಂಎಂ ಮಳೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರುನಲ್ಲಿ ಗರಿಷ್ಠ ಉಷ್ಣಾಂಶ ೩೧ ಡಿಗ್ರೀ ಸೆಲ್ಸಿಯಸ್ ಇರಲಿದ್ದು ಕನಿಷ್ಠ ಉಷ್ಣಾಂಶ ೨೧ ಡಿಗ್ರಿ ಸೆಲ್ಷಿಯಸ್ ಇರಲಿದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT