ಬಾಳೆಹಣ್ಣು ಮತ್ತು ಪಪ್ಪಾಯಿ ಬೆಳೆಯೊಂದಿಗೆ ರೈತ ಧನಪಾಲ 
ಕೃಷಿ-ಪರಿಸರ

ಬಾಳೆಯಲ್ಲಿ ಮಿಶ್ರ ಬೆಳೆಯಾಗಿ ಪಪ್ಪಾಯ

ಬಾಗಲಕೋಟ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ರಬಕವಿ-ಬನಹಟ್ಟಿ ಜಮೀಪದ ಹಳಿಂಗಳಿಯ ಧನಪಾಲ ಯಲ್ಲಟ್ಟಿ ಮತ್ತು ಸಹೋದರರು ತಮ್ಮ ತೋಟಗಳಲ್ಲಿ...

ಬಾಗಲಕೋಟ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ರಬಕವಿ-ಬನಹಟ್ಟಿ ಜಮೀಪದ ಹಳಿಂಗಳಿಯ ಧನಪಾಲ ಯಲ್ಲಟ್ಟಿ ಮತ್ತು ಸಹೋದರರು ತಮ್ಮ ತೋಟಗಳಲ್ಲಿ ಒಂದಿಲ್ಲ ಒಂದು ವಿಶೇಷ ಬೆಳೆಯನ್ನು ಬೆಳೆದು ಇತರರರಿಗೆ ಮಾದರಿಯಾಗಿದ್ದಾರೆ. 
ತಮ್ಮ 1 ಎಕರೆ 30 ಗುಂಟೆ ಜಾಗೆಯಲ್ಲಿ ಬಾಳೆÉಯ ಜೊತೆ ಮಿಶ್ರ ಬೆಳೆಯಾಗಿ ಪಪ್ಪಾಯಿಯನ್ನು ಬೆಳೆದು ಲಕ್ಷಾಂತರ ರೂ ಲಾಭ ಮಾಡಿಕೊಂಡಿದ್ದಾರೆ
ಮೊದಲು ಭೂಮಿಯನ್ನು ಚೆನ್ನಾಗಿ ಹದ ಮಾಡಿಕೊಂಡು ಒಂದುವರೆ ಎಕರೆಯಲ್ಲಿ ಸಾಲಿನಿಂದ ಸಾಲಿಗೆ 6 ಅಡಿ ಸಸಿಯಿಂದ ಸಸಿಗೆ 5 ಅಡಿ ಅಂತರದಲ್ಲಿ ಅಂಗಾಂಶ ಕೃಷಿ ಜಿ-9 ಬಾಳೆ ಸಸಿಗಳನ್ನು ನಾಟಿ ಮಾಡಲಾಗಿದ್ದು, ನಾಟಿ ಮಾಡುವ ಪೂರ್ವದಲ್ಲಿ ಬೆಡ್ ನಿರ್ಮಾಣಕ್ಕೂ ಮುಂಚೆ 1 ಎಕರೆಗೆ 10 ಟನ್ ಕಾಂಪೋಸ್ಟ್ ಗೊಬ್ಬರ್, ಡಿಪಿಎ 75ಕೆಜಿ, ಅಮಿನೋ ಜಿ ಪ್ಲಸ್ 24 ಕೆಜಿ, ಎಸ್.ಎ.ಪಿ 80 ಕೆಜಿ ಹಾಗೂ  2 ಕೆಜಿಯಷ್ಟು ಮಿಕ್ಸ ಮಾಡಿ ಬೋದನಲ್ಲಿ ಹಾಕಿಕೊಂಡು ಹನಿ ನಿರಾವರಿ ಅಳವಡಿಸಿ ಬಾಳೆ ಸಸಿ ಲಾವಣಿ ಮಾಡಿಕೊಂಡು ತದನಂತರ ಅದೇ ಬಾಳೆಯಲ್ಲಿ ಮಿಶ್ರ ಬೆಳೆಯಾಗಿ ಪಪ್ಪಾಯಿ ತೈವಾನ್ ರೆಡ್ ಲೇಡಿ ಬೆಳೆಯನ್ನು ಸಾಲಿನಿಂದ ಸಾಲು 12 ಅಡಿ ಹಾಗೂ ಸಸಿಯಿಂದ ಸಸಿಗೆ 8 ಅಡಿ ಅಂದರೆ 1 ಸಾಲು ಬಿಟ್ಟು 1 ಸಾಲಿನಲ್ಲಿ ಎರಡು ಬಾಳೆ ಸಸಿಯ ಮಧ್ಯ ಪಪ್ಪಾಯಿ ಸಸಿಗಳನ್ನು ನಾಟಿ ಮಾಡಿಕೊಂಡೆವು. ಕಾರಣ ಇಷ್ಟೆ ಇದರಿಂದ ಪಪ್ಪಾಯಿಯಲ್ಲಿ ಕಾಣುವ ಮುಖ್ಯ ರೋಗ ಪಿಆರ್‍ಎಸ್‍ವಿ( ಪಪ್ಪಾಯಿ ರಿಂಗ್ ಸ್ಪಾಟ್ ವೈರಸ್) ತಕ್ಕ ಮಟ್ಟಿಗೆ ಅಂದರೆ 90% ರಷ್ಟು ಹತ್ತೋಟಿ ಆಗಿದೆ. ಅಂದರೆ ಒಂದೇ ಖರ್ಚಿನಲ್ಲಿ ಎರಡು ಬೆಳೆಗಳನ್ನು ಬೆಳೆಯಲು ಸಾಧ್ಯವಾಗಿದೆ. ಅಲ್ಲದೆ ಮುಖ್ಯವಾಗಿ ಕಾಡುವ ರಸಹೀರುವ ಕೀಟ್, ಹೇನುಗಳು ಕೂಡಾ ಹತೋಟಿಯಾಗಿವೆ. ತೋಟದ ಸುತ್ತಲೂ ಚೋಗಚೆಯನ್ನು ಕೂಡಾ ಹಾಕಿದ್ದೇವೆ ಎನ್ನುತ್ತಾರೆ ರೈತ ಧನಪಾಲ ಯಲ್ಲಟ್ಟಿ.
ಪ್ರತಿ 10-12 ದಿನಕ್ಕೊಮ್ಮೆ ಡ್ರಿಪ್ ಮೂಕಾಂತರ ಎನ್.ಪಿ.ಕೆ ಜೊತೆಗೆ ಉಪಮ್, ಮಿಂಗಲ್ ಹಾಗೂ ಲಿಯೋನಾರ ನಂತಹ ಉತ್ಪನ್ನಗಳನ್ನು ಕೊಡುತ್ತೇವೆ. ಅಲ್ಲದೇ ಎಕ್ಸಿಡ್ ಮತ್ತು ಆ್ಯಂಪಲ್‍ಗಳನ್ನು ಸಿಂಪರಣೆಗಾಗಿ ಬಳಸುತ್ತಿದ್ದೇವೆ. ಒಟ್ಟಾರೆಯಾಗಿ ತೋಟಗಾರಿಕೆ ಹಾಗೂ ಕೃಷಿ ವಿಶ್ವವಿದ್ಯಾಲಯಗಳ ಅಕಾರಿಗಳ ಸಲಹೆ ಮತ್ತು ಮಾರ್ಗದರ್ಶನದ ಮೂಲಕ ಸಮತೋಲನ ಗೊಬ್ಬರ ಆಹಾರವನ್ನು ಓದಗಿಸಿ ಉತ್ತಮ ಆದಾಯ ಗಳಿಸಿದ್ದೇವೆ ಎಂದು ಯಲ್ಲಟ್ಟಿ ಹೇಳುತ್ತಾರೆ. 
ಬಾಳೆ 1550 ಸಸಿಗಳು 45 ಸರಾಸರಿ ತೂಕ ಒಟ್ಟು 45 ಟನ್ ಇಳುವರಿ ಪಡೆದು ಸುಮಾರು ರೂ. 6 ಲಕ್ಷ 7 ಸಾವಿರ 500 ಲಾಭ ಬಂದರೆ, ಪಪ್ಪಾಯಿಸಿಂದ 400 ಸಸಿಗಳು, ಪ್ರತಿ ಸಸಿಗೆ 50 ಹಣ್ಣುಗಳು ಒಂದು ಹಣ್ಣು ಸರಾಸರಿ 1ವರೆ ಕೆಜಿ ಬಂದಿದ್ದು ರೂ. 6 ರಂತೆ ಮಾರಾಟವಾಗಿ ಸುಮಾರು 1 ಲಕ್ಷ 80 ಸಾವಿರ ಆದಾಯ ಬಂದಿದ್ದು, ಒಟ್ಟು ಅಂದಾಜು 80 ಸಾವಿರ ಖರ್ಚು ಬಂದಿದೆ. ಆದ್ದರಿಂದ ಒಟ್ಟು ಖರ್ಚು ತೆಗೆದು ಒಂದು ವರ್ಷಕ್ಕೆ 7 ಲಕ್ಷಕ್ಕಿಂತಲೂ ಹೆಚ್ಚು ಆದಾಯ ಬಂದಿದೆ. 
ಹೀಗೆ ಮೀಶ್ರ ಬೆಳೆ ಬೆಳೆಯುವುದರಿಂದÀ ಒಂದು ಬೆಳೆ ಕೈಕೊಟ್ಟರು ಇನ್ನೊಂದು ಬೆಳೆಯಲ್ಲಿ ನಾವು ಆದಾಯವನ್ನು ಪಡೆಯಬಹುದು ಅಂತ ಮನಗಂಡು ಮಿಶ್ರಬೆಳೆಗಳಿಗೆ ಹೆಚ್ಚಿನ ಪ್ರಾಧಾನ್ಯತೆ ಕೊಡುತ್ತಿದ್ದೇವೆ. ಅಲ್ಲದೇ ಬಾಳೆ ಬೆಳೆಯಲ್ಲಿ ಪಪ್ಪಾಯಿ ಬೆಳೆ ಬೆಳೆದಿರುವುದರಿಂದ ಪಪ್ಪಾಯಿಗೆ ಯಾವುದೇ ರೀತಿಯ ಹೆಚ್ಚಿನ ಖರ್ಚು ಆಗಿಲ್ಲ ಎನ್ನುತ್ತಾರೆ ಧನಪಾಲ. 
ಹೆಚ್ಚಿನ ಮಾಹಿತಿಗಾಗಿ ಧನಪಾಲ ಎನ್. ಯಲ್ಲಟ್ಟಿ, ಹಳಿಂಗಳಿ ಗ್ರಾಮ, ತಾ. ಜಮಖಂಡಿ ಜಿ. ಬಾಗಲಕೋಟ ಮೊ: 9900030678ಗೆ ಸಂಪರ್ಕಿಸಬಹುದು. 
- ಕಿರಣ ಶ್ರೀಶೈಲ ಆಳಗಿ
ಮೊ : 7899277700

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT