ಹೂ ಬೇಸಾಯಗಾರ ದಾವಲ್ ಸಾಬ್ 
ಕೃಷಿ-ಪರಿಸರ

ಬರಕ್ಕೆ ಸೆಡ್ಡು ಹೊಡೆದ ಕೊಪ್ಪಳದ ಹೂ ಬೇಸಾಯಗಾರ

ಕೊಪ್ಪಳದ ಹೂ ಬೇಸಾಯ ಮಾಡುವ ರೈತನೊಬ್ಬ ಬರಕ್ಕೆ ಸೆಡ್ಡು ಹೊಡೆದು ತನ್ನ ಅರ್ಧ ಎಕರೆ ಜಮೀನಿನಲ್ಲಿ ಹೂವು ಬೆಳೆದು ಲಾಭ ...

ಕೊಪ್ಪಳ: ರಾಜ್ಯದೆಲ್ಲೆಡೆ ಬರ ತಾಂಡವವಾಡುತ್ತಿದೆ. ನೀರಿಲ್ಲದೇ ಬಿತ್ತಿದ ಬೆಳೆಗಳು ಒಣಗಿ ಹೋಗಿ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಆದರೆ ಕೊಪ್ಪಳದ ಹೂ ಬೇಸಾಯ ಮಾಡುವ ರೈತನೊಬ್ಬ ಬರಕ್ಕೆ ಸೆಡ್ಡು ಹೊಡೆದು ತನ್ನ ಅರ್ಧ ಎಕರೆ ಜಮೀನಿನಲ್ಲಿ ಹೂವು ಬೆಳೆದು ಲಾಭ ಗಳಿಸುತ್ತಿದ್ದಾನೆ.

ಕೊಪ್ಪಳದ ಬೆಲೂರ್ ಗ್ರಾಮದ ದಾವಲ್ ಸಾಬ್ ಎಂಬಾತ ಅರ್ಧ ಎಕರೆ ಜಮೀನಿನಲ್ಲಿ ಸುಗಂಧರಾಜ ಹೂ ಬೇಸಾಯ ಮಾಡಿದ್ದಾನೆ. ಈ ಹೂವಿಗೆ ದಾವಣಗೆರೆ ಮತ್ತು ತುಮಕೂರಿನ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇದೆ.

ಪ್ರತಿದಿನ ಸುಮಾರು 15 ರಿಂದ 20 ಕೆಜಿ ಹೂ ಸಿಗುತ್ತದೆ. ಮಾರುಕಟ್ಟೆಯಲ್ಲಿ ಕೆಜಿಗೆ 50 ರಿಂದ 60 ರುಪಾಯಿ ಬೆಲೆ ಇರುತ್ತದೆ. ಹಬ್ಬದ ಸಮಯದಲ್ಲಿ ಪ್ರತಿ ಕೆಜಿಗೆ 150 ರು ಬೆಲೆ ಇರುತ್ತದೆ. ಸುಮಾರು 3 ದಿನಗಳ ಕಾಲ ಈ ಹೂವನ್ನು ಸಂಗ್ರಹಿಸಿಡಬಹುದಾಗಿದೆ. ಶ್ರಾವಣ ತಿಂಗಳಲ್ಲಿ ಈ ಹೂವಿಗೆ ಭಾರೀ ಬೇಡಿಕೆ ಇರುತ್ತದೆ. ವ್ಯವಸಾಯಕ್ಕೆ ಮಾಡಿದ ಖರ್ಚು ತೆಗೆದರೇ ವಾರ್ಷಿಕವಾಗಿ ಸುಮಾರು ಎರಡೂವರೆ ಲಕ್ಷ ರು ಆದಾಯ ಸಿಗುತ್ತದೆ ಎಂದು ಹೂ ಬೆಳೆದು ಬದುಕು ಕಟ್ಟಿಕೊಂಡ ದಾವಲ್ ಸಾಬ್  ಹೇಳುತ್ತಾರೆ.

ಪದವಿ ಮುಗಿದ ನಂತರ ಯಾವುದೇ ಸರ್ಕಾರಿ ಅಥವಾ ಖಾಸಗಿ ಉದ್ಯೋಗಕ್ಕೆ ಸೇರದೇ ಕೃಷಿಯನ್ನು ಆಯ್ಕೆ ಮಾಡಿಕೊಂಡೆ. ತೋಟಗಾರಿಕೆ ಇಲಾಖೆಯ ಸಹಾಯ ಪಡೆದು ಹೂ ಬೆಳೆಯಲು ಆರಂಭಿಸಿದೆ. ಇದರಿಂದ ನಾನು ಸಂತೋಷವಾಗಿ ಬದುಕುತ್ತಿದ್ದೇನೆ ಎಂದು ದಾವಲ್ ಸಾಬ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಏ.10 ಕ್ಕೆ ರಾಜ್ಯಸಭಾ ಸದಸ್ಯರಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ! ಸಿಎಂ ಸ್ಥಾನಕ್ಕೆ ರಾಜೀನಾಮೆ?

ಅಕ್ರಮ ಬಾಂಗ್ಲಾ ವಲಸಿಗರಿಗೆ ಹೊಸ ತಲೆನೋವು; ಗಡಿಗಳಲ್ಲಿ ಹಾವು. ಮೊಸಳೆಗಳ ನಿಯೋಜನೆ: BSF ಗಂಭೀರ ಚಿಂತನೆ!

ಇರಾನ್ ವಿರುದ್ಧದ ಯುದ್ಧ ಅಮೆರಿಕಾಗೆ ತಿರುಗುಬಾಣ!: ಇಂಧನ, ಸಾರಿಗೆ ದರ ದುಪ್ಪಟ್ಟು, ಜನಸಾಮಾನ್ಯರು ಹೈರಾಣ; ಟ್ರಂಪ್ ಗೆ ಹಿಡಿಶಾಪ!

IPL 2026: B***s Of Steel" ರವಿಶಾಸ್ತ್ರಿ ಹೇಳಿಕೆ ಕುರಿತು ನೆಟ್ಟಿಗರಿಂದ ತೀವ್ರ ಚರ್ಚೆ!

ಇರಾನ್ ನಲ್ಲಿ ಬೃಹತ್ ಸೇನಾ ಕಾರ್ಯಾಚರಣೆ: ಹಲವು ಮಿಲಿಟರಿ ನಾಯಕರ ಹತ್ಯೆ- ಡೊನಾಲ್ಡ್ ಟ್ರಂಪ್! Video

SCROLL FOR NEXT