ಭಾರತೀಯ ರೈತರ ಬೆಳೆ ಇಳುವರಿ ಹೆಚ್ಚಿಸಲು ಮೈಕ್ರೋಸಾಫ್ಟ್ ಕೃತಕ ಬುದ್ಧಿಮತ್ತೆ ನೆರವು 
ಕೃಷಿ-ಪರಿಸರ

ಭಾರತೀಯ ರೈತರ ಬೆಳೆ ಇಳುವರಿ ಹೆಚ್ಚಿಸಲು ಮೈಕ್ರೋಸಾಫ್ಟ್ ಕೃತಕ ಬುದ್ಧಿಮತ್ತೆ ನೆರವು

ಹೊಸ ತಂತ್ರಜ್ಞಾನಗಳು ಭಾರತೀಯ ರೈತರ ಬೆಳೆ ಇಳುವರಿ ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಬೆಳೆ ಇಳುವರಿಯನ್ನು ಹೆಚ್ಚಿಸಲು ಮೈಕ್ರೋಸಾಫ್ಟ್ ಕೃತಕ ಬುದ್ಧಿಮತ್ತೆಯ ನೆರವು ನೀಡಲಿದೆ.

ನವದೆಹಲಿ: ಹೊಸ ತಂತ್ರಜ್ಞಾನಗಳು ಭಾರತೀಯ ರೈತರ ಬೆಳೆ ಇಳುವರಿ ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಬೆಳೆ ಇಳುವರಿಯನ್ನು ಹೆಚ್ಚಿಸಲು ಮೈಕ್ರೋಸಾಫ್ಟ್ ಕೃತಕ ಬುದ್ಧಿಮತ್ತೆಯ ನೆರವು ನೀಡಲಿದೆ. 
ಕೃತಕ ಬುದ್ಧಿಮತ್ತೆ (ಎಐ), ಕ್ಲೌಡ್ ಮಷಿನ್, ಸ್ಯಾಟಲೈಟ್ ಚಿತ್ರಣ ಹಾಗೂ ಅಡ್ವಾನ್ಸ್ಡ್ ಅನಾಲಿಸಿಸ್ ಮೂಲಕ ಸಣ್ಣ ಪ್ರಮಾಣದ ರೈತರ ಆದಾಯವನ್ನು ಹೆಚ್ಚಿಸಬಹುದಾಗಿದೆ ಎಂದು ಮೈಕ್ರೋ ಸಾಫ್ಟ್ ತಿಳಿಸಿದೆ. ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶಗಳಲ್ಲಿ ರೈತರಿಗೆ ತಾವು ಬೆಳೆದಿರುವ ಹತ್ತಿಯ ಬೆಳೆ ಕೀಟಗಳ ದಾಳಿಗೆ ಒಳಗಾಗಿದೆಯೇ ಅಥವಾ ಸಮಸ್ಯೆಗೆ ಸಿಲುಕಿದೆಯೇ, ಬೆಳೆಯ ಸ್ಥಿತಿ ಹೇಗಿದೆ ಎಂಬುದರ ಬಗ್ಗೆ ಆಟೋಮೆಟೆಡ್ ವಾಯ್ಸ್ ಕರೆ ಬರುತ್ತದೆ. ಕರ್ನಾಟಕದಲ್ಲಿ ಸರ್ಕಾರಕ್ಕೆ ಅಗತ್ಯ ಸಾಮಗ್ರಿಗಳ ಬೆಲೆಯ ಕುರಿತು ಮುನ್ನೋಟವನ್ನು ಮೂರು ತಿಂಗಳ ಮುನ್ನವೇ ಪಡೆಯಬಹುದಾಗಿದ್ದು, ಗರಿಷ್ಠ ಬೆಂಬಲ ಬೆಲೆಯನ್ನು ನಿಗದಿಪಡಿಸಲು ಸಾಧ್ಯವಾಗಲಿದೆ ಎಂದು ಮೈಕ್ರೋಸಾಫ್ಟ್ ಹೇಳಿದೆ. 
ಉತ್ತಮ ಇಳುವರಿ ಪಡೆಯಬೇಕಾದರೆ ಬಿತ್ತನೆ ಸಮಯವನ್ನು ಕರಾರುವಕ್ಕಾಗಿ ತಿಳಿದುಕೊಳ್ಳುವುದಕ್ಕೆ ಕೃತಕ ಬುದ್ಧಿಮತ್ತೆ ಸಹಕಾರಿಯಾಗಲಿದೆ ಎಂದು (ಐಸಿಆರ್ಐಎಸ್ಎಟಿ) ಯ ಏಷ್ಯಾ ವಿಭಾಗದ ನಿರ್ದೇಶಕ ಸುಹಾಸ್ ಪಿ ವಾನಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

SCROLL FOR NEXT