ಖನಿಜ ಸಂಪತ್ತು 
ಕೃಷಿ-ಪರಿಸರ

ಭಾರತದ ಸಾಗರದಾಳದಲ್ಲಿ ಅಪಾರ ಪ್ರಮಾಣದ ಖನಿಜ ಸಂಪತ್ತು ಪತ್ತೆ!

ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ ಇಲಾಖೆಯ ವಿಜ್ಞಾನಿಗಳು ಭಾರತದ ಸಾಗರಾಳದಲ್ಲಿ ಅಪಾರ ಪ್ರಮಾಣದ ಖನಿಜ ಸಂಪತ್ತು ಇರುವುದನ್ನು ಪತ್ತೆ ಹಚ್ಚಿದ್ದಾರೆ.

ಕೋಲ್ಕತ್ತಾ: ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ ಇಲಾಖೆಯ ವಿಜ್ಞಾನಿಗಳು ಭಾರತದ ಸಾಗರಾಳದಲ್ಲಿ ಅಪಾರ ಪ್ರಮಾಣದ ಖನಿಜ ಸಂಪತ್ತು ಇರುವುದನ್ನು ಪತ್ತೆ ಹಚ್ಚಿದ್ದಾರೆ. 
ಮಂಗಳೂರು, ಚೆನ್ನೈ, ಮನ್ನಾರ್ ಜಲಾನಯನ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಮತ್ತು ಲಕ್ಷದ್ವೀಪದ ಸುತ್ತಲೂ ಸಮುದ್ರ ಸಂಪನ್ಮೂಲಗಳ ಇರುವಿಕೆ 2014 ರಲ್ಲಿ ಮೊದಲ ಬಾರಿಗೆ ಪತ್ತೆಯಾಗಿತ್ತು. 
ಫಾಸ್ಫೇಟ್, ಹೈಡ್ರೋಕಾರ್ಬನ್ ಗಳು, ಮೆಟಾಲಿಫರಸ್ ನಿಕ್ಷೇಪಗಳು ಸೇರಿದಂತೆ ಅಪಾರ ಪ್ರಮಾಣದ ಖನಿಜ ಸಂಪತ್ತು ಸಮುದ್ರದಾಳದಲ್ಲಿ ಪತ್ತೆಯಾಗಿದ್ದು, ಆಳಕ್ಕೆ ಹೋದಷ್ಟೂ ಮತ್ತಷ್ಟು ಸಂಪನ್ಮೂಲಗಳು ಪತ್ತೆಯಾಗಲಿವೆ ಎಂದು  ವಿಜ್ಞಾನಿಗಳು ಹೇಳಿದ್ದಾರೆ. ಕಳೆದ ಮೂರು ವರ್ಷಗಳಿಂದ ಇದಕ್ಕೆ ಸಂಬಂಧಿಸಿದಂತೆ ಅಧ್ಯಯನ, ಸಂಶೋಧನೆಗಳು ನಡೆಯುತ್ತಿದ್ದು, ಭಾರತದ ವಿಶೇಷ ಆರ್ಥಿಕ ವಲಯದ ವ್ಯಾಪ್ತಿಯಲ್ಲಿ 10,000 ಮಿಲಿಯನ್ ಟನ್ ಗಿಂತಲೂ ಹೆಚ್ಚು ಪ್ರಮಾಣದ ಪ್ರದೇಶದಲ್ಲಿ ಲೈಮ್ ಮಡ್ ಇರುವಿಕೆಯನ್ನು ಪತ್ತೆ ಮಾಡಿದ್ದಾರೆ. 
ಇನ್ನು ಕಾರ್ವಾರ, ಮಂಗಳೂರು, ಚೆನ್ನೈ ಪ್ರದೇಶಗಳಲ್ಲಿ ಫಾಸ್ಫೇಟ್ ಸೆಡಿಮೆಂಟ್, ಅಂಡಮಾನ್ ಸಮುದ್ರದಲ್ಲಿ ಫೆರೊಮ್ಯಾಂಗನೀಸ್ ಕ್ರಸ್ಟ್ ಸೇರಿದಂತೆ ಮೌಲ್ಯಯುತ ಖನಿಜ ಸಂಪತ್ತು ಪತ್ತೆಯಾಗಿದೆ ಎಂದು ಜಿಎಸ್ ಐ ತಿಳಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

ಬಕ್ರೀದ್ ಮೇಕೆ ವಿಷಯವಾಗಿ ಮುಂಬೈ ಸೊಸೈಟಿಯಲ್ಲಿ ಭಾರಿ ವಿವಾದ; VHP ಕಾರ್ಯಕರ್ತರ ಮೇಲೆ ಬ್ಲೇಡ್ ನಿಂದ ಹಲ್ಲೆ!

SCROLL FOR NEXT