ಚೌಡೇಶ್ವರಿ ದೇವಿ 
ಭಕ್ತಿ-ಜ್ಯೋತಿಷ್ಯ

ಭಕ್ತರು ಕೇಳಿದ ಪ್ರಶ್ನೆಗಳಿಗೆ ವಿಗ್ರಹದ ಮೂಲಕ ಉತ್ತರಿಸುವ ದಸರೀ ಘಟ್ಟ ಚೌಡೇಶ್ವರಿ ದೇವಿ!

ತಿಪಟೂರಿನ ದಸರಿಘಟ್ಟ ಗ್ರಾಮದಲ್ಲಿರುವ ಚೌಡೇಶ್ವರಿಯ ದೇವಸ್ಥಾನದಲ್ಲಿ ಭಕ್ತರ ಪ್ರಶ್ನೆಗಳಿಗೆ ಸ್ವತಃ ದೇವರಿಂದಲೇ ಉತ್ತರ ಬರುತ್ತದೆ.

ಭಕ್ತಾದಿಗಳು ದೇವಾಲಯಗಳಿಗೆ ಹೋದರೆ ಅಲ್ಲಿ ಕೇವಲ ಪ್ರಾರ್ಥನೆ ಸಲ್ಲಿಸಿ ಬರುವುದು ಹರಕೆ ತೀರಿಸುವುದು ಸಾಮಾನ್ಯದ ವಿಚಾರ. ಆದರೆ ತಿಪಟೂರಿನ ದಸರಿಘಟ್ಟ ಗ್ರಾಮದಲ್ಲಿರುವ ಚೌಡೇಶ್ವರಿಯ ದೇವಸ್ಥಾನದಲ್ಲಿ ಭಕ್ತರ ಪ್ರಶ್ನೆಗಳಿಗೆ ಸ್ವತಃ ದೇವರಿಂದಲೇ ಉತ್ತರ ಬರುತ್ತದೆ.  
ತುಮಕೂರು ಈ ಪ್ರಸಿದ್ಧ ಚೌಡೇಶ್ವರಿ ದೇವಿ ನೆಲೆಸಿರುವ ಜಿಲ್ಲೆ. ತುಮಕೂರಿನಿಂದ 74 ಕಿ.ಮೀ ದೂರದಲ್ಲಿರುವ ತಿಪಟೂರಿನ ದಸರಿಘಟ್ಟ ಗ್ರಾಮದಲ್ಲಿ ನೊಂದವರಿಗೆ ಪರಿಹಾರ ಕರುಣಿಸುವ ಈ ಪ್ರಖ್ಯಾತ ದೇವಾಲಯ. ಬೆಂಗಳೂರಿನಿಂದ ರೈಲು ಹಾಗೂ ಬಸ್ಸುಗಳ ಸಾಕಷ್ಟು ಸೌಲಭ್ಯವಿದ್ದು ಈ ದೇವಾಲಯಕ್ಕೆ ಸುಲಭವಾಗಿ ತಲುಪಬಹುದಾಗಿದೆ. ಚೌಡೇಶ್ವರಿ ದೇವಿಯ ಪಂಚಲೋಹದ ವಿಗ್ರಹವೇ ಬರವಣಿಗೆ ಮೂಲಕ ಜನರ ಕಷ್ಟಗಳಿಗೆ ಪರಿಹಾರ ಸೂಚಿಸುವುದರಿಂದ ಈ ದೇವಾಲಯ ಕರ್ನಾಟಕದಲ್ಲಿ ಮಾತ್ರವಲ್ಲದೇ  ಅಕ್ಕ ಪಕ್ಕದ ರಾಜ್ಯಗಳು ವಿದೇಶಗಳಿಂದಲೂ ಸಹ ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. 
ದೇವಾಲಯಕ್ಕೆ ಬರುವ ಭಕ್ತರು ಚೌಡೇಶ್ವರಿ ದೇವಿಯ ಬಳಿ ತಮ್ಮ ಪ್ರಶ್ನೆ, ಸಮಸ್ಯೆಗಳಿಗೆ ಪರಿಹಾರ ಕೇಳುತ್ತಾರೆ, ಈ ವೇಳೆ ಗ್ರಾಮದ ಇಬ್ಬರು ಅನಕ್ಷರಸ್ಥರು ದೇವಿಯ ವಿಗ್ರಹವನ್ನು ಹಿಡಿದು ಮನಸೊ ಇಚ್ಛೆ ಬರೆಯುತ್ತಾರೆ. ನಂತರ ದೇವಸ್ಥಾನದ ಹಿರಿಯ ಅರ್ಚಕರು ಅಕ್ಕಿ ಹಿಟ್ಟಿನಲ್ಲಿ ಸುಲಲಿತವಾಗಿ ಕನ್ನಡದಲ್ಲಿ ಪರಿಹಾರವನ್ನು ಬರೆಯುತ್ತಾರೆ. ಕೇಳುಗರು ಯಾವುದೇ ಭಾಷೆಯಲ್ಲಿ ಬೇಕಾದರೂ ಸಮಸ್ಯೆಗಳನ್ನ, ಪ್ರಶ್ನೆಗಳನ್ನ ಮನದಲ್ಲಿ ನಿವೇದಿಸಿಕೊಳ್ಳಬಹುದು.
ಚೌಡೇಶ್ವರಿ ದೇವಾಲಯಕ್ಕೆ ಸುಮಾರು 300 ವರ್ಷಗಳ ಇತಿಹಾಸವಿದೆ. 300 ವರ್ಷಗಳ ಹಿಂದೆ ತಿಪಟೂರಿನಲ್ಲಿ ಜಸವಂತರಾಯ ಎಂಬ ಪಾಳೇಗಾರ ತನ್ನ ಸಾಮರಾಜ್ಯವನ್ನು ವಿಸ್ತರಿಸುವ ಉದ್ದೇಶದಿಂದ ಚೌಡೇಶ್ವರಿಯನ್ನು ಭಕ್ತಿಯಿಂದ ಪೂಜಿಸತೊಡಗಿದನು.  ಇವನ ಶೃದ್ಧೆ ಭಕ್ತಿಗಳಿಂದ ಸಂತುಷ್ಟಗೊಂಡ ದೇವಿ ವರವನ್ನು ನೀಡುತ್ತಾಳೆ, ವರ ಪಡೆದ ಪಾಳೇಗಾರ ತನ್ನನ್ನು ಯಾವಾಗಲೂ ರಕ್ಷಣೆ ಮಾಡುತ್ತ ಇರಬೇಕೆಂದು ಪ್ರಾರ್ಥಿಸಿದನು. ಪಾಳೆಗಾರನ ಬೇಡಿಕೆಗೆ ಷರತ್ತು ವಿಧಿಸಿದ ಚೌಡೇಶ್ವರಿ ದೇವಿ ತನಗೆಲ್ಲಿ ಇಷ್ಟವಾಗುತ್ತದೊ ಅಲ್ಲಿ ತಾನು ನೆಲೆಸುವುದಾಗಿ ಹೇಳಿದಳು. ದೇವಿಯು ಒಮ್ಮೆ ಸುಂದರವಾದ ಗಿಡ ಮರಗಳು, ಹಸಿರಿನಿಂದ ತುಂಬಿದ ಒಂದು ಸಮತಟ್ಟಾದ ಪ್ರದೇಶಕ್ಕೆ ಬಂದು ಅಲ್ಲಿಯೇ ನೆಲೆಸಲು ತೀರ್ಮಾನಿಸಿದಳು. ನಂತರ ಇದು ಜಸವಂತರಾಯ ಪಟ್ಟಣ ಎಂದು ಕರೆಯಲ್ಪಟ್ಟಿತು. ಕಾಲಕ್ರಮೇಣ ಈ ಜಸವಂತರಾಯ ಪಟ್ಟಣವೆ ಇಂದಿನ ದಸರಿಘಟ್ಟವಾಗಿ ದೇವಿ ಚೌಡೇಶ್ವರಿ ನೆಲೆಸಿರುವ ಪವಿತ್ರ ತಾಣವಾಗಿದೆ. ಇಲ್ಲಿನ ಪುಟ್ಟ ಬೆಟ್ಟದ ಮೇಲೆ ದೇವಿಯನ್ನು ಪ್ರತಿಷ್ಠಾಪಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಸಿಎಂ ಆಗಿದ್ದ ವೇಳೆ ಈ ದೇವಾಲಯಕ್ಕೆ ಭೇಟಿ ನೀಡಿದ್ದರು ಎಂಬುದು ಮತ್ತೊಂದು ವಿಶೇಷ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT