ಸಂಗ್ರಹ ಚಿತ್ರ 
ಭಕ್ತಿ-ಜ್ಯೋತಿಷ್ಯ

ಬಂತು ಶ್ರಾವಣ, ಈ ಮಾಸದಲ್ಲಿ ಏನೆಲ್ಲಾ ಮಾಡಿದರೆ ಒಳಿತಾಗುವುದು ತಿಳಿಯೋಣ!

ಆಷಾಢ ಮಾಸ ಮುಗಿದು, ಶ್ರಾವಣ ಮಾಸ ಬಂದಿದೆ. ಶ್ರಾವಣ ಮಾಸವನ್ನು ಹಿಂದೂ ಪಂಚಾಂಗದಲ್ಲಿ ಅತ್ಯಂತ ಮಹತ್ವ ಹಾಗೂ ದೈವಿಕ ಮಾಸ ಎಂದೇ ಪರಿಗಣಿಸಲಾಗಿದೆ. ಈ ಮಾಸವನ್ನು ಶಿವನಿಗೆ ಅರ್ಪಿಸಲಾಗಿದ್ದು, ಹಬ್ಬಗಳ ಸಾಲು ಪ್ರಾರಂಭವಾಗುವ ಮಾಸ ಎಂದೇ ಹೇಳಲಾಗುತ್ತದೆ.

ಆಷಾಢ ಮಾಸ ಮುಗಿದು, ಶ್ರಾವಣ ಮಾಸ ಬಂದಿದೆ.  ಶ್ರಾವಣ ಮಾಸವನ್ನು ಹಿಂದೂ ಪಂಚಾಂಗದಲ್ಲಿ ಅತ್ಯಂತ ಮಹತ್ವ ಹಾಗೂ ದೈವಿಕ ಮಾಸ ಎಂದೇ ಪರಿಗಣಿಸಲಾಗಿದೆ. ಈ ಮಾಸವನ್ನು ಶಿವನಿಗೆ ಅರ್ಪಿಸಲಾಗಿದ್ದು, ಹಬ್ಬಗಳ ಸಾಲು ಪ್ರಾರಂಭವಾಗುವ ಮಾಸ ಎಂದೇ ಹೇಳಲಾಗುತ್ತದೆ. ಶ್ರಾವಣದಲ್ಲಿ ನಾಗರ ಪಂಚಮಿ ಮಂಗಳ ಗೌರಿ ವ್ರತಗಳನ್ನು ಆಚರಿಸುವ ಪದ್ಧತಿ ಇದ್ದು, ಈ ಮಾಸದ ಸೋಮವಾರಗಳಿಗೆ ವಿಶೇಷ ಮಹತ್ವವಿದೆ.
ಶ್ರಾವಣ ಮಾಸವನ್ನು ಶಿವನಿಗೆ ಅರ್ಪಿಸಲಾಗಿರುವುದರಿಂದ ಅಥವಾ ಶ್ರಾವಣ ಮಾಸ ಶಿವನ ಮಾಸ ಎಂದು ಪರಿಗಣಿಸಲಾಗಿರುವುದರಿಂದ ಶ್ರಾವಣ ಮಾಸದ ಸೋಮವಾರಗಳಂದು ಉಪವಾಸವಿದ್ದು, ಶಿವನ ದೇವಾಲಯದಲ್ಲಿ ಪೂಜೆ ಸಲ್ಲಿಸುವುದರಿಂದ ಮನಸ್ಸಿಗೆ ಶಾಂತಿ ಲಭಿಸಿ ಜೀವನದ ಗುಣಮಟ್ಟ ಹೆಚ್ಚಲಿದೆ ಎಂಬ ನಂಬಿಕೆ ಇದೆ.
ಶ್ರಾವಣ ಮಾಸದಲ್ಲಿ ಈ ಇವುಗಳನ್ನು ಮಾಡಿದರೆ ಒಳಿತಾಗಲಿದೆ:
ಸೂರ್ಯೋದಯಕ್ಕೂ ಮುನ್ನ ಎದ್ದು ಸ್ನಾನಾದಿಗಳನ್ನು ಮುಗಿಸಿ, ಸ್ವಲ್ಪ ನಿಮಿಷವಾದರೂ ಧ್ಯಾನ ಮಾಡಿ
ಹತ್ತಿರ ಶಿವನ ದೇವಾಲಯವಿದ್ದರೆ ಅಲ್ಲಿಗೆ ತೆರಳಿ ಪೂಜೆ ಸಲ್ಲಿಸಿ
ಸಾತ್ವಿಕ ಆಹಾರ ಹೆಚ್ಚು ಸೇವಿಸಿ, ಸಾಧ್ಯವಾದರೆ, ಅವಕಾಶ ಇದ್ದಲ್ಲಿ ಉಪವಾಸ ಮಾಡಿ
ನಿಮಗೆ ಸಾಧ್ಯವಿದ್ದು, ಅಗತ್ಯವಿರುವವರಿಗೆ ಅನ್ನದಾನ ಮಾಡಿದರೆ ಒಳಿತು
ಸಂಜೆ ವೇಳೆಗೆ ದೀಪ ಹಚ್ಚಿ ಮತ್ತೆ ಕೆಲವು ನಿಮಿಷ ಧ್ಯಾನ ಮಾಡಿ ಶಿವ ಮೂಲ ಮಂತ್ರ (ಓಂ
ನಮಃ ಶಿವಾಯ) ಪಠಿಸಿ
ಶ್ರಾವಣ ಮಾಸದ ಅವಧಿಯಲ್ಲಿ ಈ ರೀತಿ ಮಾಡಿದಲ್ಲಿ ಅದು ಜೀವನ ವಿಧಾನವನ್ನು ಬದಲಿಸಿ, ನಿಮ್ಮ ಆಹಾರ ಹಾಗೂ ಜೀವನ ಶೈಲಿ ಉತ್ತಗೊಳ್ಳುವುದಕ್ಕೆ ಸಹಕಾರಿಯಾಗುತ್ತದೆ. ಅಷ್ಟೇ ಅಲ್ಲದೇ ಸತತ ಒಂದು ತಿಂಗಳು ಈ ಮೇಲಿನ ಅಂಶಗಳನ್ನು ರೂಢಿಸಿಕೊಂಡಲ್ಲಿ ಮನಸ್ಸು, ದೇಹ ಹಗುರವಾಗಿ ಸಕಾರಾತ್ಮಕ ಶಕ್ತಿಯನ್ನು ಪಡೆಯಲು ಸಾಧ್ಯವಾಗುತ್ತದೆ ಎಂಬ ನಂಬಿಕೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT