ವಿಶ್ವದ ಏಕೈಕ ಆನೆಯ ದಂತ ಸಿಂಹಾಸನ 
ಭಕ್ತಿ-ಜ್ಯೋತಿಷ್ಯ

ವಿಶ್ವದ ಏಕೈಕ ಆನೆಯ ದಂತ (ಹಸ್ತಿದಂತ) ಸಿಂಹಾಸನ ಇರುವುದೆಲ್ಲಿ ಗೊತ್ತಾ?

ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ರತ್ನ ಖಚಿತ ಸಿಂಹಾಸನದ ಬಗ್ಗೆ ಕೇಳಿರುತ್ತೀರಿ ಆದರೆ ಆನೆಯ ದಂತದಿಂದ ಮಾಡಿರುವ ವಿಶೇಷವಾದ ಹಸ್ತಿದಂತ ಸಿಂಹಾಸನದ ಬಗ್ಗೆ ಕೇಳಿದ್ದೀರಾ?

ನೀವು ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ರತ್ನ ಖಚಿತ ಸಿಂಹಾಸನದ ಬಗ್ಗೆ ಕೇಳಿರುತ್ತೀರಿ ಆದರೆ ಆನೆಯ ದಂತದಿಂದ ಮಾಡಿರುವ ವಿಶೇಷವಾದ ಹಸ್ತಿದಂತ ಸಿಂಹಾಸನದ ಬಗ್ಗೆ ಕೇಳಿದ್ದೀರಾ?
ಹೌದು, ಆನೆಯ ದಂತದಿಂದ ನಿರ್ಮಾಣವಾಗಿರುವ ಸಿಂಹಾಸನ ನಮ್ಮ ಕರ್ನಾಟಕದಲ್ಲಿದೆ. ಜಗತ್ತಿನ  ಏಕೈಕ ಹಸ್ತಿ ದಂತ ಸಿಂಹಾಸನ ಇರುವುದು ರಾಮಚಂದ್ರಾಪುರ ಮಠದಲ್ಲಿ. 1930-40ರ ದಶಕದಲ್ಲಿ ಹಸ್ತಿದಂತ ಸಿಂಹಾಸನವನ್ನು ನಿರ್ಮಿಸಲಾಗಿತ್ತು. ರಾಮಚಂದ್ರಾಪುರ ಮಠದ ಅಂದಿನ ಶ್ರೀಗಳಾಗಿದ್ದ ಶ್ರೀ ರಾಮಚಂದ್ರಭಾರತೀ ಸ್ವಾಮಿಗಳು ಸಾಕಿದ ಆನೆಯ ಮರಣಾನಂತರ ಅದರ ದಂತದಿಂದ ಈ ಸಿಂಹಾಸನವನ್ನು ನಿರ್ಮಿಸಲಾಗಿದೆ. ಮಹಾತ್ಮ ಗಾಂಧಿ ಸಹ ಈ ಸಿಂಹಾಸನದ ದರ್ಶನ ಪಡೆದಿದ್ದರೆಂಬುದು ವಿಶೇಷ.
ಶ್ರೀ ಮಠದ 33ನೇ ಯತಿಗಳಾಗಿದ್ದ ರಾಘವೇಶ್ವರ ಶ್ರೀಗಳ ಕಾಲದಲ್ಲಿ ರಾಮಭದ್ರ ಎಂಬ ಸಲಗ ಇತ್ತು. ಕಾಂಚೀಯ ರಾಜರು ಆ ಕಾಲದಲ್ಲಿ ಶ್ರೀಗಳಿಗೆ ಆನೆಯನ್ನು ಉಡುಗೊರೆಯಾಗಿ ನೀಡಿದ್ದರು. ಶ್ರೀಮಠದಲ್ಲಿ ರಾಮಭದ್ರ ಆನೆ ಶ್ರೀಗಳಿಗೆ ಅತ್ಯಂತ ಪ್ರಿಯವಾದ ಆನೆಯಾಗಿತ್ತು. 1909ರಲ್ಲಿ ಶ್ರೀಗಳು ಬ್ರಹ್ಮೈಕ್ಯರಾದ ಬಳಿಕ ರಾಮಭದ್ರ ಆನೆ ತಾನೂ ಉಪವಾಸ ಕುಳಿತು ದೇಹ ತ್ಯಾಗ ಮಾಡಿತು.
ಅದೇ ಆನೆಯ ದಂತವನ್ನು ಸಂರಕ್ಷಿಸಿ 34ನೇ ಯತಿಗಳಾದ ಶ್ರೀ ರಾಮಚಂದ್ರ ಭಾರತೀ ಶ್ರೀಗಳು ಸಿಂಹಾಸನವನ್ನು ಸಿದ್ಧಪಡಿಸುವಂತೆ ಆದೇಶಿಸಿದ್ದರು. ಮೈಸೂರು ಅರಮನೆಯ ಶಿಲ್ಪಿಯಾಗಿದ್ದ ಮೂಡುಕೋಡು ಹಿರಣ್ಯಪ್ಪ ಎಂಬ ಶಿಲ್ಪಿ ತನ್ನ ಜೊತೆಗಾರರೊಂದಿಗೆ 18 ವರ್ಷಗಳ ಕಾಲ ಸಮಯ ತೆಗೆದುಕೊಂಡು ಈ ಸಿಂಹಾಸನವನ್ನು ಸಿದ್ಧಪಡಿಸಿದ್ದರು. ರಾಮಾಯಣ ಮತ್ತು ಮಹಾಭಾರತದ ಅನನ್ಯ ಕೆತ್ತನೆಗಳು ಸಿಂಹಾಸನದಲ್ಲಿ ಕಾಣಸಿಗುತ್ತವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT