ಸಾಂದರ್ಭಿಕ ಚಿತ್ರ 
ಭಕ್ತಿ-ಜ್ಯೋತಿಷ್ಯ

ದೀಪಾವಳಿಯ ಮೊದಲ ದಿನ ನೀರು ತುಂಬುವುದು ಎಂದರೇನು, ಧನತ್ರಯೋದಶಿ ಆಚರಣೆ ಹೇಗೆ?

ದೀಪಾವಳಿಯ ಮೊದಲ ದಿನವನ್ನು ನೀರು ತುಂಬುವ ಶಾಸ್ತ್ರ ಮಾಡುತ್ತೇವೆ. ಇದಕ್ಕೆ ಉತ್ತರ ಭಾರತೀಯರು ಧನತ್ರಯೋದಶಿ ಎಂದು ಕರೆಯುತ್ತಾರೆ, ಅವರಿಗೆ ಇಂದು ಹೊಸ ಆರ್ಥಿಕ ವರ್ಷದ ಆರಂಭ ದಿನ. 

ದೀಪಾವಳಿಯ ಮೊದಲ ದಿನವನ್ನು ನೀರು ತುಂಬುವ ಶಾಸ್ತ್ರ ಮಾಡುತ್ತೇವೆ. ಇದಕ್ಕೆ ಉತ್ತರ ಭಾರತೀಯರು ಧನತ್ರಯೋದಶಿ ಎಂದು ಕರೆಯುತ್ತಾರೆ, ಅವರಿಗೆ ಇಂದು ಹೊಸ ಆರ್ಥಿಕ ವರ್ಷದ ಆರಂಭ ದಿನ. 

ಪುರಾಣದ ಪ್ರಕಾರ ಸಮುದ್ರ ಮಥನ ಆದಾಗ ಲಕ್ಷ್ಮಿ ದೇವಿ ಉದ್ಭವಿಸಿದ ದಿನ,ಅವಳೊಂದಿಗೆ ಅವಳ ಅಣ್ಣ-ತಮ್ಮಂದಿರು ಯಕ್ಷ, ಚಂದ್ರ, ಕಾಮಧೇನು, ಐರಾವತ, ಕಲ್ಪವೃಕ್ಷವೆಲ್ಲ ಬಂದ ದಿನ ಎಂದು. ಮನುಷ್ಯನಿಗೆ ಲೌಕಿಕ ಮತ್ತು ಲೋಕೋತ್ತರ ಸುಖ ಸಮೃದ್ಧಿಯನ್ನು ಕೊಡುವ ಶಕ್ತಿಗಳು ಉದ್ಭವಿಸಿದ ದಿನ. ಹಾಗಾಗಿ ಧನತ್ರಯೋದಶಿ, ಧನ್ ತೆರಸ್ ಎಂದು ಉತ್ತರ ಭಾರತದಲ್ಲಿ ಕರೆಯುತ್ತಾರೆ.

ಆಚರಣೆ ಹೇಗೆ: ಧನ ತ್ರಯೋದಶಿ ದಿನ ಲಕ್ಷ್ಮಿ ಮತ್ತು ಅವಳೊಂದಿಗೆ ಉದ್ಭವಿಸಿದ ಎಲ್ಲರ ಸಂಕೇತಗಳನ್ನು ಬರೆದು ಕಲಶವನ್ನಿಟ್ಟು ಪೂಜೆ ಮಾಡುತ್ತಾರೆ. ಕೆಲವರು ಬೃಂದಾವನದಂತಹ ಪ್ರಸಿದ್ಧ ಕ್ಷೇತ್ರಗಳಲ್ಲಿ ಹಿಂದಿನ ದ್ವಾದಶಿಯಿಂದ ಏಳು ದಿವಸಗಳ ದೀಪಾವಳಿ ಆಚರಣೆ ಮಾಡುತ್ತಾರೆ.  

ಯಾವುದೇ ಹಬ್ಬ ಆಚರಿಸುವುದಕ್ಕೆ ಮೊದಲು ಮನೆಯಲ್ಲಿರುವ ಬಲೆ, ಕಸಗಳನ್ನು ಚೆನ್ನಾಗಿ ಹೊಡೆದು ಅಗತ್ಯವಿದ್ದರೆ ಸುಣ್ಣ ಬಣ್ಣ ಬಳಿದು ಇಡೀ ಮನೆಯನ್ನು, ಪಾತ್ರೆಗಳನ್ನು, ದೇವರ ಸಾಮಾನುಗಳನ್ನು ತೊಳೆದು ಹಬ್ಬಕ್ಕೆ ಅಣಿಯಾಗುವುದು ನಮ್ಮಲ್ಲಿ ಪ್ರತೀತಿ.

ಅದೇ ರೀತಿ ತ್ರಯೋದಶಿ ದಿನ ಸಂಜೆ ಸ್ನಾನದ ಮನೆಯನ್ನು, ಹಂಡೆ, ಪಾತ್ರೆಗಳನ್ನು ತೊಳೆದು ಚೆನ್ನಾಗಿ ಶುದ್ಧಮಾಡಿ,  ಹಂಡೆಗೆ ಸುಣ್ಣ ಹಾಗೂ ಕೆಮ್ಮಣ್ಣು ಬಳಿದು, ರಂಗೋಲಿ ಹಾಕಿ, ಹೂ ಹಾಕಿ, ಹೊಸ ನೀರು ಹಂಡೆಗೆ ಹಾಕಿ ದೀಪ ಬೆಳಗಿ ಪೂಜೆ ಮಾಡುತ್ತಾರೆ. ಮರುದಿನ ಬೆಳಗ್ಗೆ ಈ ನೀರಿನಲ್ಲಿ ಸ್ನಾನ ಮಾಡಿ ಬಂದು ಹಬ್ಬಕ್ಕೆ ಅಣಿಯಾಗುವುದು. ಇದಕ್ಕೆ ನೀರು ತುಂಬುವ ಹಬ್ಬ ಎಂದು ಕರೆಯುತ್ತೇವೆ.

ನೀರು ತುಂಬುವ ಶಾಸ್ತ್ರ ಹಿಂದಿನ ಕಾಲದಲ್ಲಿ ಪ್ರತೀತಿಯಿತ್ತು. ಹಿಂದಿನ ಕಾಲದಲ್ಲಿ ಈಗಿನಂತೆ ಮನೆಯಲ್ಲಿ ನಳ್ಳಿ, ನೀರಿನ ಸಂಪರ್ಕವಿರಲಿಲ್ಲ. ಬಾವಿಯಿಂದಲೋ, ಕೆರೆಯಿಂದಲೋ ನೀರನ್ನು ತಂಬಿಗೆಯಲ್ಲಿ ಹೊತ್ತು ತಂದು ಹಂಡೆಯಲ್ಲಿ ತುಂಬಿಸಿಡುತ್ತಿದ್ದರು. ಈಗ ಹಳ್ಳಿಮನೆಗಳಲ್ಲಿಯೂ ಆ ಅವಶ್ಯಕತೆಯಿರುವುದಿಲ್ಲ. ಆದರೂ ಧಾರ್ಮಿಕ ಪದ್ಧತಿಯನ್ನು ಬಿಡಬಾರದು ಎಂದು ಜನರು ಆಚರಿಸುತ್ತಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT