ಕಾರುಗಳ ಮಾರಾಟದಲ್ಲಿ ಚೇತರಿಕೆ, ದ್ವಿಚಕ್ರ ವಾಹನ ಮಾರಾಟ ಕುಸಿತ 
ವಾಹನ

ನೋಟು ನಿಷೇಧ ಪರಿಣಾಮ: ಕಾರುಗಳ ಮಾರಾಟದಲ್ಲಿ ಚೇತರಿಕೆ, ದ್ವಿಚಕ್ರ ವಾಹನ ಮಾರಾಟ ಕುಸಿತ!

ನೋಟು ನಿಷೇಧವಾಗಿ ನಾಲ್ಕು ತಿಂಗಳ ನಂತರ ಕಾರುಗಳ ಮಾರಾಟದಲ್ಲಿ ಚೇತರಿಕೆ ಕಂಡಿದ್ದರೆ, ದ್ವಿಚಕ್ರ ವಾಹನಗಳ ಮಾರಾಟ ಇನ್ನೂ ಚೇತರಿಕೆ ಕಂಡಿಲ್ಲ

ಚೆನ್ನೈ: 500, 1000 ರೂ ಮುಖಬೆಲೆಯ ನೋಟು ನಿಷೇಧದ ನಂತರ ದ್ವಿಚಕ್ರ ವಾಹನ, ಕಾರುಗಳ ಮಾರಾಟ ಕುಸಿದಿತ್ತು. ನೋಟು ನಿಷೇಧವಾಗಿ ನಾಲ್ಕು ತಿಂಗಳ ನಂತರ ಕಾರುಗಳ ಮಾರಾಟದಲ್ಲಿ ಚೇತರಿಕೆ ಕಂಡಿದ್ದರೆ, ದ್ವಿಚಕ್ರ ವಾಹನಗಳ ಮಾರಾಟ ಇನ್ನೂ ಚೇತರಿಕೆ ಕಂಡಿಲ್ಲ ಎಂದು ಇಂಡಿಯನ್ ಆಟೋಮೊಬೈಲ್ ಉತ್ಪಾದಕರ ಸೊಸೈಟಿ ಮಾಹಿತಿ ನೀಡಿದೆ. 
ಫೆಬ್ರವರಿ ತಿಂಗಳಲ್ಲಿ ಪ್ರಯಾಣಿಕ ವಾಹನಗಳ ಮಾರಾಟದಲ್ಲಿ ಶೇ.9.01 ರಷ್ಟು ಏರಿಕೆಯಾಗಿದ್ದು ಕಳೆದ ವರ್ಷ ಇದೇ ತಿಂಗಳಲ್ಲಿ 2,34,244 ಯುನಿಟ್ ನಷ್ಟು ವಾಹನಗಳು ಮಾರಾಟವಾಗಿದ್ದರೆ ಈ ವರ್ಷದ ಫೆಬ್ರವರಿಯಲ್ಲಿ 2,55,359 ಯುನಿಟ್ ನಷ್ಟು ವಾಹನಗಳು ಮಾರಾಟವಾಗಿವೆ ಎಂದು ಎಸ್ಐಎಎಂ ಹೇಳಿದೆ. 
ದೇಶೀಯ ಕಾರು ಮಾರಾಟ ವ್ಯಾಪರದಲ್ಲಿ ಶೇ.4.9 ರಷ್ಟು ಏರಿಕೆಯಾಗಿದ್ದು ಕಳೆದ ವರ್ಷ 1,64,559 ಯುನಿಟ್ ನಷ್ಟು ವಾಹನಗಳು ಮಾರಾಟವಾಗಿದ್ದರೆ, ಈ ವರ್ಷದ ಫೆಬ್ರವರಿಯಲ್ಲಿ 1,72,623 ಯುನಿಟ್ ನಷ್ಟು ವಾಹನಗಳು ಮಾರಾಟವಾಗಿದೆ. ನೋಟು ನಿಷೇಧದ ನಂತರದ ತಿಂಗಳಲ್ಲಿ ಅಂದರೆ 2016 ರ ಡಿಸೆಂಬರ್ ನಲ್ಲಿ ಶೇ.4.4 ರಷ್ಟು ಕುಸಿತ ಕಂಡಿತ್ತು. ಆದರೆ ಜನವರಿಯಲ್ಲಿ ಶೇ.14.4 ರಷ್ಟು ಏರಿಕೆಯಾಗುವ ಮೂಲಕ ಚೇತರಿಕೆ ಕಂಡಿತ್ತು. ನೋಟು ನಿಷೇಧದ ಪರಿಣಾಮದಿಂದ ಕಾರುಗಳ ಮಾರಾಟ ಚೇತರಿಕೆ ಕಂಡಿದೆಯಾದರೂ ದ್ವಿಚಕ್ರ ವಾಹನ, ಬೈಕ್ ಗಳ ಮಾರಾಟ ಇನ್ನೂ ಚೇತರಿಕೆ ಕಂಡಿಲ್ಲ. ಕಳೆದ ವರ್ಷದ ಫೆಬ್ರವರಿಯಲ್ಲಿ 8,59,582 ಯುನಿಟ್ ನಷ್ಟು ಮಾರಾಟವಾಗಿದ್ದ ದ್ವಿಚಕ್ರವಾಹನಗಳು ಈ ವರ್ಷದ ಫೆಬ್ರವರಿಯಲ್ಲಿ ಕೇವಲ 8,32,697 ಯುನಿಟ್ ಗಳಿಗಷ್ಟೇ ಸೀಮಿತವಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT