ಹರಿವು 
2014

ಸಿನಿಮೋತ್ಸವ: ವಾಸ್ತವಕ್ಕೆ ಹಿಡಿದ ಕನ್ನಡಿ 'ಹರಿವು'

ಬೆಂಗಳೂರಿನಲ್ಲಿ ನಡೆದ ಸತ್ಯ ಘಟನೆ...

ಬೆಂಗಳೂರು: ಮಂಜುನಾಥ್ ಎಸ್ (ಮಂಸೋರೆ) ನಿರ್ದೇಶನದ 'ಹರಿವು' ಬೆಂಗಳೂರಿನಲ್ಲಿ ನಡೆದ ಸತ್ಯ ಘಟನೆಯೊಂದನ್ನು ಆಧರಿಸಿದ ಸಿನಿಮಾ. ಸಿನಿಮೋತ್ಸವದಲ್ಲಿ ಇಂದು ಬೆಳಗ್ಗೆ 10.30ಕ್ಕೆ ಪ್ರಸ್ತುತ ಚಿತ್ರ ಪ್ರದರ್ಶನಗೊಳ್ಳಲಿದೆ.

ಕಥಾಹಂದರ: ಮಗನ ಶಸ್ತ್ರಚಿಕಿತ್ಸೆಗಾಗಿ ಹಳ್ಳಿಯಿಂದ ಬರುವ ತಂದೆ. ಬೆಂಗಳೂರಲ್ಲಿ ಆತ ತನ್ನ ಮಗನನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಕತೆ ಒಂದೆಡೆಯಾದರೆ, ಬೆಂಗಳೂರಿನ ಬ್ಯುಸಿ ಲೈಫ್‌ನಲ್ಲಿ ಕಳೆದುಹೋಗಿ, ಕೆಲಸದ ಒತ್ತಡದಲ್ಲಿ ಸಿಲುಕಿ ತನ್ನ ತಂದೆಯ ಬಗ್ಗೆ ಚಿಂತಿಸಲೂ ಸಮಯವಿಲ್ಲದ ಮಗ ಇನ್ನೊಂದೆಡೆ.
ಆಸ್ಪತ್ರೆಯಲ್ಲಿರುವ ಅಪ್ಪ ತನ್ನ ಮಗನೊಂದಿಗೆ ಮಾತನಾಡಬೇಕು, ಅವನೊಂದಿಗೆ ಸಮಯ ಕಳೆಯಬೇಕೆಂದು ಬಯಸುತ್ತಿದ್ದರೆ, ಮಗ ತನ್ನ ಕೆಲಸದ ಒತ್ತಡದಲ್ಲಿ ಯಾಂತ್ರಿಕ ಜೀವನ ಸಾಗಿಸುತ್ತಿರುತ್ತಾನೆ.

ಇತ್ತ ಹಳ್ಳಿಯಿಂದ ಬಂದ ಅಪ್ಪ ಮಗನ ಶಸ್ತ್ರ ಚಿಕಿತ್ಸೆಗಾಗಿ ಎಲ್ಲವನ್ನೂ ಮಾರಿ ಬೆಂಗಳೂರಿಗೆ ಬಂದು ಮಗನ ಜೀವ ಉಳಿಸಲು ಹರಸಾಹಸ ಪಡುತ್ತಾನೆ. ಕೊನೆಗೆ ಮಗನ ಶವವನ್ನು ಊರಿಗೆ ಸಾಗಿಸಲು ಕೂಡಾ ಕೈಯಲ್ಲಿ ದುಡ್ಡಿರುವುದಿಲ್ಲ. ಮಗನನ್ನು ಕಳೆದುಕೊಂಡ ನೋವಿನೊಂದಿಗೆ ಭಾರವಾದ ಹೆಜ್ಜೆಯನ್ನಿಟ್ಟು, ಮಗನ ಶವವನ್ನು ಗುಟ್ಟಾಗಿ ತೆಗೆದುಕೊಂಡು ಹೋಗುವುದು...ನಿಜ ಬದುಕಿನ ಎರಡು ಕತೆಗಳು ಒಂದಕ್ಕೊಂದು ಮುಖಾಮುಖಿಯಾಗುತ್ತಾ...
ಕಾಲದ ಹೊಳೆಯಲ್ಲಿ ಶವಗಳಾ ಪಯಣ...
ಮನಸೀನ ಬೆಂಕೀಲಿ ಮೋಹದ ದಹನಾ...

ಹೀಗೆ ಸಾಗುತ್ತದೆ 'ಹರಿವು'.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT