ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದ ಚಿತ್ರನಿರ್ದೇಶಕ ಮಂಸೋರೆ ಮತ್ತು ಪಿ ಶೇಷಾದ್ರಿ 
2014

ಸಿನಿಮೋತ್ಸವ: ಹೊಸ ಅಲೆಯ ಸಿನಿಮಾಗಳು ಎಂಬ ವರ್ಗೀಕರಣ ಸಲ್ಲ ಎಂದ ಪಿ ಶೇಷಾದ್ರಿ

ಏಳನೇ ಬೆಂಗಳೂರು ಅಂತರಾಷ್ಟ್ರೀಯ

ಬೆಂಗಳೂರು: ಏಳನೇ ಬೆಂಗಳೂರು ಅಂತರಾಷ್ಟ್ರೀಯ ಸಿನಿಮೋತ್ಸವದಲ್ಲಿ ಪ್ರದರ್ಶನಗೊಂಡ ಡಿಸೆಂಬರ್ ೧ ಸಿನೆಮಾದ ನಿರ್ದೇಶಕ ಪಿ ಶೇಷಾದ್ರಿ, ಸಿನೆಮಾಗಳನ್ನು ಕಲಾತ್ಮಕ ಸಿನೆಮಾಗಳು, ಹೊಸ ಅಲೆಯ ಸಿನೆಮಾಗಳು ಎಂದು ಕರೆಯುವುದು ಸರಿಯಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದ ಪಿ ಶೇಷಾದ್ರಿ, ಕೆಲವು ಸಿನೆಮಾಗಳನ್ನು ಹೊಸ ಅಲೆಯ ಸಿನೆಮಾಗಳು, ಪರ್ಯಾಯ ಸಿನೆಮಾಗಳು, ಕಲಾತ್ಮಕ ಸಿನೆಮಾಗಳು ಎಂದು ಕರೆಯುವ ಹೊಸ ಬೆಳವಣಿಗೆ ಪ್ರಾರಂಭವಾಗಿದೆ. ಇದರಿಂದ ಕೆಲವು ನಿರ್ದೇಶಕರು ಅಸ್ಪೃಶ್ಯರಾಗಿದ್ದಾರೆ. ಎಲ್ಲ ಸಿನೆಮಾಗಳಲ್ಲು ಕಲೆ ಇದೆ. ಹೊಸ ಅಲೆ ಎಂಬ ಪದ ೭೦ ದಶಕದಲ್ಲಿ ಸರಿಯಿತ್ತೇನೊ, ಆದೆರೆ ಅದು ಈಗ ಅಪ್ರಸ್ತುತ ಎಂದಿದ್ದಾರೆ.

ಕಳೆದ ಗೋವಾ ಚಲನಚಿತ್ರೋತ್ಸವದಲ್ಲಿ ಬರೀ ಒಂದು ಕನ್ನಡ ಸಿನೆಮಾ ಪ್ರದರ್ಶನಗೊಂಡದಕ್ಕೆ ಬೇಸರ ವ್ಯಕ್ತಪಡಿಸಿದ ಶೇಷಾದ್ರಿ ಹೆಚ್ಚೆಚ್ಚು ಕನ್ನಡ ಚಲನಚಿತ್ರನಿರ್ದೇಶಕರು ತಮ್ಮ ಸಿನೆಮಾಗಳನ್ನು ಸಿನಿಮೋತ್ಸವಗಳಲ್ಲಿ ತೋರಿಸಬೇಕು ಎಂದರು.

'ಹರಿವು' ಕನ್ನಡ ಚಲನಚಿತ್ರದ ನಿರ್ದೇಶಕ ಮಂಜುನಾಥ್ ಎಸ್ ಕೂಡ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ, ತಮ್ಮ ಚಿತ್ರ ಪ್ರದರ್ಶನಗೊಂಡದಕ್ಕೆ ಸಂತಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT