ಬಾಹುಬಲಿ ಚಿತ್ರದ ನಾಯಕಿ ತಮನ್ನಾ 
2014

ಭರದಿಂದ ಸಾಗಿದೆ ಬಾಹುಬಲಿ-2 ಚಿತ್ರೀಕರಣ; ಕುದುರೆ ಸವಾರಿ ಕಲಿಯುತ್ತಿರುವ ತಮನ್ನಾ

2015ರಲ್ಲಿ ತೆರೆಕಂಡು ಅತಿದೊಡ್ಡ ಯಶಸ್ಸುಕಂಡ ಎಸ್ ಎಸ್ ರಾಜಮೌಳಿ ನಿರ್ದೇಶನದ ಬಾಹುಬಲಿ ಚಿತ್ರದ ಸೀಕ್ವೆಲ್ ನ ಚಿತ್ರೀಕರಣ ಭರದಿಂದ ಸಾಗಿದ್ದು, ಇನ್ನು 10 ತಿಂಗಳೊಳಗೆ ಚಿತ್ರೀಕರಣ ಪೂರ್ಣಗೊಳ್ಳಲಿದೆ ಎಂದು ಚಿತ್ರತಂಡ ಹೇಳಿದೆ...

ಮುಂಬೈ: 2015ರಲ್ಲಿ ತೆರೆಕಂಡು ಅತಿದೊಡ್ಡ ಯಶಸ್ಸುಕಂಡ ಎಸ್ ಎಸ್ ರಾಜಮೌಳಿ ನಿರ್ದೇಶನದ ಬಾಹುಬಲಿ ಚಿತ್ರದ ಸೀಕ್ವೆಲ್ ನ ಚಿತ್ರೀಕರಣ ಭರದಿಂದ ಸಾಗಿದ್ದು, ಇನ್ನು 10 ತಿಂಗಳೊಳಗೆ  ಚಿತ್ರೀಕರಣ ಪೂರ್ಣಗೊಳ್ಳಲಿದೆ ಎಂದು ಚಿತ್ರತಂಡ ಹೇಳಿದೆ.

ಮೂಲಗಳ ಪ್ರಕಾರ ಸುದೀರ್ಘ ಬಿಡುವಿನ ಬಳಿಕ ಮತ್ತೆ ಚಿತ್ರೀಕರಣದಲ್ಲಿ ತೊಡಗಿರುವ ಬಾಹುಬಲಿ ಚಿತ್ರತಂಡ ತನ್ನ ಚಿತ್ರೀಕರಣ ಕಾರ್ಯವನ್ನು ತೀವ್ರಗೊಳಿಸಿದ್ದು, ನಿಗದಿಗಿಂತ ವೇಗವಾಗಿಯೇ  ಚಿತ್ರೀಕರಣ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. ಚಿತ್ರದ ನಿರ್ದೇಶಕರಾದ ಎಸ್ ಎಸ್ ರಾಜಮೌಳಿ ಅವರು ಹೇಳಿರುವಂತೆ ಚಿತ್ರದ ನಾಯಕ ಪ್ರಭಾಸ್ ಅವರ ಪಾತ್ರದ ಚಿತ್ರೀಕರಣ ಇನ್ನು 70  ದಿನಗಳಲ್ಲಿ ಪೂರ್ಣಗೊಳ್ಳಲಿದ್ದು, ಈ ಸಂಬಂಧ ಎಲ್ಲ ಸಿದ್ಧತೆಗಳನ್ನು ನಡೆಸಿಕೊಳ್ಳಲಾಗಿದೆ. ಚಿತ್ರೀಕರಣಕ್ಕೆ ಬೇಕಿರುವ ಸೆಟ್ ಗಳ ನಿರ್ಮಾಣ ಮತ್ತು ತಾಂತ್ರಿಕ ತಂಡ ಸಕಲ ರೀತಿಯಲ್ಲೂ ಸಿದ್ಧವಿದ್ದು,   ಇನ್ನು 70 ದಿನಗಳಲ್ಲಿ ಪ್ರಭಾಸ್ ಪಾತ್ರದ ಚಿತ್ರೀಕರಣ ಪೂರ್ಣಗೊಳ್ಳಲಿದೆ.

10 ತಿಂಗಳೊಳಗೆ ಚಿತ್ರೀಕರಣ ಪೂರ್ಣ
ಮೂಲಗಳ ಬಾಹುಬಲಿ 2 ಸಂಬಂಧ ಬಹುತೇಕ ಎಲ್ಲ ಪಾತ್ರಗಳ ಚಿತ್ರೀಕರಣ ಪೂರ್ಣಗೊಂಡಿದ್ದು, ಚಿತ್ರದ ಕ್ಲೈಮ್ಯಾಕ್ಸ್ ಮತ್ತು ಪ್ರಭಾಸ್-ರಾಣಾ ನಡುವಿನ ಕಾದಾಟದ ದೃಶ್ಯಗಳ ಕೆಲ ಭಾಗಗಳ  ಚಿತ್ರೀಕರಣ ಬಾಕಿ ಇದೆ ಎಂದು ಮೂಲಗಳು ತಿಳಿಸಿವೆ. ಈ ಭಾಗದ ಚಿತ್ರೀಕರಣವೂ ಸೇರಿದಂತೆ ಇಡೀ ಚಿತ್ರದ ಬಾಕಿ ಉಳಿದಿರುವ ಚಿತ್ರೀಕರಣ ಇನ್ನು 10 ತಿಂಗಳೊಳಗೆ ಪೂರ್ಣಗೊಳ್ಳಲಿದೆ  ಎಂದು ಹೇಳಲಾಗುತ್ತಿದೆ. ಆದರೆ ರಾಜಮೌಳಿ ಅವರ ಕೆಲಸವನ್ನು ಹತ್ತಿರದಿಂದ ನೋಡಿರುವವರು ಚಿತ್ರೀಕರಣ ಬಹುಶಃ ಮತ್ತಷ್ಟು ದಿನ ಮುಂದುವರೆಯಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಚಿತ್ರಕ್ಕಾಗಿ ಕುದುರೆ ಸವಾರಿ ಕಲಿಯುತ್ತಿರುವ ತಮನ್ನಾ
ಇನ್ನು ಚಿತ್ರದ ಎರಡನೇ ನಾಯಕಿಯಾಗಿರುವ ಮಿಲ್ಕ್ ಬ್ಯೂಟಿ ತಮನ್ನಾ ಕೂಡ ಇದೀಗ ಬಾಹುಬಲಿ 2 ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದು, ಚಿತ್ರದಲ್ಲಿ ಬರುವ ಕುದುರೆ ಸವಾರಿಗಾಗಿ  ಭಾರಿ ಕಸರತ್ತು ನಡೆಸುತ್ತಿದ್ದಾರಂತೆ. ಬಾಹುಬಲಿ ಚಿತ್ರದಲ್ಲಿ ಆವಂತಿಕಾಳಾಗಿ ಗ್ಲ್ಯಾಮರ್ ಪ್ರದರ್ಶಿಸಿದ್ದ ತಮನ್ನಾ, ಬಾಹುಬಲಿ 2ರಲ್ಲೂ ಮೋಡಿ ಮಾಡಲು ಸಿದ್ಧರಾಗಿದ್ದಾರೆ. ಚಿತ್ರದ ದೃಶ್ಯವೊಂದರಲ್ಲಿ  ತಮನ್ನಾ ಕುದುರೆ ಸ್ಟಂಟ್ ಮಾಡಬೇಕಾಗಿದ್ದು, ಇದಕ್ಕಾಗಿ ಜೀತು ವರ್ಮಾ ಎನ್ನುವ ಸಾಹಸ ಕಲಾವಿದರಿಂದ ಕುದುರೆ ಸವಾರಿಯ ತರಬೇತಿ ಪಡೆಯುತ್ತಿದ್ದಾರೆ. ತಮನ್ನಾ ತಮ್ಮ ಸಿನಿ ಕರಿಯರ್  ನಲ್ಲಿಯೇ ಇದೇ ಮೊದಲ ಬಾರಿಗೆ ಕುದುರೆ ಏರಿರುವುದು ವಿಶೇಷವಾಗಿದ್ದು, ಈ ಹಿಂದೆ ಕಂಗನಾ ರಣಾವತ್ ಹಾಗೂ ಸೋನಾಕ್ಷಿ ಸಿನ್ಹಾ ಅವರಿಗೆ ಕುದುರೆ ಸವಾರಿ ತರಬೇತಿ ನೀಡಿದ್ದ ಜೀತು ವರ್ಮ  ತಮನ್ನಾಗೆ ಕುದುರೆ ಸವಾರಿ ಪಾಠ ಕಲಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT