ಸುದೀಪ್ 
2014

'ಮಾಸ್ತಿ ಗುಡಿ' ಕ್ಲೈಮಾಕ್ಸ್ ದುರಂತ ಕನ್ನಡ ಚಿತ್ರರಂಗಕ್ಕೆ ಒಂದು ಪಾಠ: ಸುದೀಪ್

ಮಾಸ್ತಿಗುಡಿ ಚಿತ್ರದ ಚಿತ್ರೀಕರಣದ ವೇಳೆ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಜಿಗಿದು ಇಬ್ಬರು ಖಳನಟರು ಮೃತಪಟ್ಟಿರುವ ಘಟನೆ....

ಬೆಂಗಳೂರು: ಮಾಸ್ತಿಗುಡಿ ಚಿತ್ರದ ಚಿತ್ರೀಕರಣದ ವೇಳೆ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಜಿಗಿದು ಇಬ್ಬರು ಖಳನಟರು ಮೃತಪಟ್ಟಿರುವ ಘಟನೆ ಕನ್ನಡ ಚಿತ್ರರಂಗಕ್ಕೆ ಒಂದು ಪಾಠ ಎಂದು ನಟ, ನಿರ್ದೇಶಕ ಕಿಚ್ಚ ಸುದೀಪ್ ಅವರು ಮಂಗಳವಾರ ಹೇಳಿದ್ದಾರೆ.
ಮಾಸ್ತಿಗುಡಿ ದುರಂತದ ಬಗ್ಗೆ ಇಂದು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸುದೀಪ್ ಅವರು, ಖಳನಟರಾದ ಅನಿಲ್ ಮತ್ತು ಉದಯ್ ಅವರನ್ನು ನಾನು ತುಂಬಾ ಹತ್ತಿರದಿಂದ ನೋಡಿದ್ದೇನೆ. ಅವರ ಸಾವು ಆಘಾತ ನೀಡಿದ್ದು, ಮೃತರ ಕುಟುಂಬಕ್ಕೆ ದೇವರು ದುಃಖವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ತಾಣಗಳಲ್ಲಿ ಯಾರನ್ನು ದೂಷಿಸುವುದು ಸರಿಯಲ್ಲ. ಆಗಿರುವ ಪ್ರಮಾದಕ್ಕೆ ಶಿಕ್ಷೆ ನೀಡಲು ಕಾನೂನು ಇದೆ ಎಂದು ಸುದೀಪ್ ತಿಳಿಸಿದ್ದಾರೆ.
ಇಬ್ಬರು ಖಳ ನಟರನ್ನು ಕಳೆದುಕೊಂಡಿರುವುದಕ್ಕೆ ಬೇರೆಯವರಿಗಿಂತ ಚಿತ್ರತಂಡಕ್ಕೆ ಹೆಚ್ಚಿನ ನೋವಾಗಿರುತ್ತದೆ. ಆ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಆರೋಪಿಸುತ್ತಿರುವುದು ಸರಿಯಲ್ಲ ಎಂದ ಸುದೀಪ್, ಕಾಲೇಜು ದಿನಗಳಲ್ಲಿ ನಾನು ಇಬ್ಬರು ಸ್ನೇಹಿತರನ್ನು ಕಳೆದುಕೊಂಡಿದ್ದೆ. ಅಂದಿನಿಂದ ನನಗೆ ಅಂತಹ ಸ್ಥಳಕ್ಕೆ ಹೋಗಲಾಗುತ್ತಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT