ಸುದೀಪ್ 
2014

'ಮಾಸ್ತಿ ಗುಡಿ' ಕ್ಲೈಮಾಕ್ಸ್ ದುರಂತ ಕನ್ನಡ ಚಿತ್ರರಂಗಕ್ಕೆ ಒಂದು ಪಾಠ: ಸುದೀಪ್

ಮಾಸ್ತಿಗುಡಿ ಚಿತ್ರದ ಚಿತ್ರೀಕರಣದ ವೇಳೆ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಜಿಗಿದು ಇಬ್ಬರು ಖಳನಟರು ಮೃತಪಟ್ಟಿರುವ ಘಟನೆ....

ಬೆಂಗಳೂರು: ಮಾಸ್ತಿಗುಡಿ ಚಿತ್ರದ ಚಿತ್ರೀಕರಣದ ವೇಳೆ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಜಿಗಿದು ಇಬ್ಬರು ಖಳನಟರು ಮೃತಪಟ್ಟಿರುವ ಘಟನೆ ಕನ್ನಡ ಚಿತ್ರರಂಗಕ್ಕೆ ಒಂದು ಪಾಠ ಎಂದು ನಟ, ನಿರ್ದೇಶಕ ಕಿಚ್ಚ ಸುದೀಪ್ ಅವರು ಮಂಗಳವಾರ ಹೇಳಿದ್ದಾರೆ.
ಮಾಸ್ತಿಗುಡಿ ದುರಂತದ ಬಗ್ಗೆ ಇಂದು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸುದೀಪ್ ಅವರು, ಖಳನಟರಾದ ಅನಿಲ್ ಮತ್ತು ಉದಯ್ ಅವರನ್ನು ನಾನು ತುಂಬಾ ಹತ್ತಿರದಿಂದ ನೋಡಿದ್ದೇನೆ. ಅವರ ಸಾವು ಆಘಾತ ನೀಡಿದ್ದು, ಮೃತರ ಕುಟುಂಬಕ್ಕೆ ದೇವರು ದುಃಖವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ತಾಣಗಳಲ್ಲಿ ಯಾರನ್ನು ದೂಷಿಸುವುದು ಸರಿಯಲ್ಲ. ಆಗಿರುವ ಪ್ರಮಾದಕ್ಕೆ ಶಿಕ್ಷೆ ನೀಡಲು ಕಾನೂನು ಇದೆ ಎಂದು ಸುದೀಪ್ ತಿಳಿಸಿದ್ದಾರೆ.
ಇಬ್ಬರು ಖಳ ನಟರನ್ನು ಕಳೆದುಕೊಂಡಿರುವುದಕ್ಕೆ ಬೇರೆಯವರಿಗಿಂತ ಚಿತ್ರತಂಡಕ್ಕೆ ಹೆಚ್ಚಿನ ನೋವಾಗಿರುತ್ತದೆ. ಆ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಆರೋಪಿಸುತ್ತಿರುವುದು ಸರಿಯಲ್ಲ ಎಂದ ಸುದೀಪ್, ಕಾಲೇಜು ದಿನಗಳಲ್ಲಿ ನಾನು ಇಬ್ಬರು ಸ್ನೇಹಿತರನ್ನು ಕಳೆದುಕೊಂಡಿದ್ದೆ. ಅಂದಿನಿಂದ ನನಗೆ ಅಂತಹ ಸ್ಥಳಕ್ಕೆ ಹೋಗಲಾಗುತ್ತಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!