ಸಿದ್ದರಾಮಯ್ಯ 
ರಾಜ್ಯ

ರಾಜ್ಯ ಬಜೆಟ್‍ಗೆ ಅಂತಿಮ ಸ್ಪರ್ಶ

ಪ್ರಸಕ್ತ ಸಾಲಿನ ಬಜೆಟ್‍ಗೆ ಅಂತಿಮ ಸ್ಪರ್ಶ ನೀಡುತ್ತಿರುವ ಸಿಎಂ ಸಿದ್ದರಾಮಯ್ಯ ಜನಪ್ರಿಯತೆ ಮತ್ತು ತೆರಿಗೆ ಹೊರೆ ಮಧ್ಯೆ ...

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್‍ಗೆ  ಅಂತಿಮ ಸ್ಪರ್ಶ ನೀಡುತ್ತಿರುವ ಸಿಎಂ ಸಿದ್ದರಾಮಯ್ಯ ಜನಪ್ರಿಯತೆ ಮತ್ತು ತೆರಿಗೆ ಹೊರೆ ಮಧ್ಯೆ ಸಮತೋಲನ ನಡೆಸುವ
ಪ್ರಯತ್ನಕ್ಕೆ ಮುಂದಾಗಿದ್ದಾರೆ. ಬಜೆಟ್ ಸಿದ್ಧತೆ  ಪ್ರಕ್ರಿಯೆ  ಬುಧವಾರ ಪೂರ್ಣಗೊಳ್ಳಲಿದ್ದು, ಕರಡು ಪ್ರತಿಯನ್ನು ಮುದ್ರಣಕ್ಕೆ ಕಳುಹಿಸಲಾಗುತ್ತದೆ. ನಂತರ ಅದನ್ನು
ಕೂಲಂಕಷವಾಗಿ ಅಧ್ಯಯನ ನಡೆಸಿದ ನಂತರ ಗುರುವಾರ ಪ್ರತಿಯನ್ನು ಅಂತಿಮ ಮುದ್ರ ಣಕ್ಕೆ ಕಳುಹಿಸಲಾಗುತ್ತದೆ. ಈ ಪ್ರಕ್ರಿಯೆ ಅತ್ಯಂತ ಗೌಪ್ಯವಾಗಿ ನಡೆಯಲಿದೆ.
ಆದರೆ, ಕೆಲ ಸಚಿವರು ಬಜೆಟ್ ಪೂರ್ವಭಾವಿ ಸಭೆಯಲ್ಲಿ ನಡೆದ ಚರ್ಚೆಗಳ ಬಗ್ಗೆ  ಮಾಧ್ಯಮದ ಮುಂದೆ ಮಾತನಾಡಿದ್ದಾರೆ.ತಮ್ಮ ಇಲಾಖೆ ವತಿಯಿಂದ ನೀಡಿದ ಪ್ರಸ್ತಾಪಗಳ ಬಗ್ಗೆ ಹೇಳಿದ್ದಾರೆ. ಇದು ಸಿಎಂ ಸಿದ್ದರಾಮಯ್ಯ ಅವರ ಕೋಪಕ್ಕೆ ಕಾರಣವಾಗಿದೆ. ಆಯವ್ಯಯ ಸದನದಲ್ಲಿ ಮಂಡನೆಯಾಗುವುದಕ್ಕೂ ಮುನ್ನವೇ ಅದರ ರಹಸ್ಯ ಸೋರಿಕೆಯಾದರೆ ಪಾವಿತ್ರ್ಯಕ್ಕೆ ಧಕ್ಕೆಯಾಗುತ್ತದೆ. ಸಂಪುಟದ ಒಪ್ಪಿಗೆ ಪಡೆದು ನಂತರ ಸದನದಲ್ಲಿ ಮಂಡನೆ ಮಾಡಬೇಕೆಂಬ ಸಂಪ್ರದಾಯದ ಹಿಂದೆ ಇರುವುದು ಇದೇ ಕಾರಣಕ್ಕೆ ಎಂದು ಕೆಲ ಸಚಿವರಿಗೆ ಕಿವಿಮಾತು ಹೇಳಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT