ಸಮಾಜ ಕಲ್ಯಾಣ 
ರಾಜ್ಯ

ರಾಜ್ಯ ಬಜೆಟ್ 2015: ಸಮಾಜ ಕಲ್ಯಾಣ ಇಲಾಖೆಗೆ 4584 ಕೋಟಿ

ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಸರಳವಾಗಿ ಮದುವೆ ಮಾಡಿಕೊಳ್ಳುವ ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ ದಂಪತಿಗಳಿಗೆ ಸರಳ ವಿವಾಹ ಯೋಜನೆಯಡಿ ಒಂದು ಬಾರಿಗೆ ರು.50,000 ಗಳು ಆರ್ಥಿಕ ನೆರವನ್ನು...

ಬೆಂಗಳೂರು: ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಸರಳವಾಗಿ ಮದುವೆ ಮಾಡಿಕೊಳ್ಳುವ ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ ದಂಪತಿಗಳಿಗೆ ಸರಳ ವಿವಾಹ ಯೋಜನೆಯಡಿ ಒಂದು ಬಾರಿಗೆ ರು.50,000 ಗಳು ಆರ್ಥಿಕ ನೆರವನ್ನು ಜೀವನೋಪಾಯಕ್ಕಾಗಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಯೋಜನೆಗಳು

  • ಇತರೆ ಜಾತಿಯ ಹೆಣ್ಣು ಮಕ್ಕಳು ಅಂತರ್ಜಾತಿ ವಿವಾಹವಾದಲ್ಲಿ ಪ್ರಸ್ತುತ ನೀಡುತ್ತಿರುವ ಪ್ರೋತ್ಸಾಹ ಧನವನ್ನು 50 ಸಾವಿರದಿಂದ 2 ಲಕ್ಷಕ್ಕೆ ಏರಿಸಲಾಗಿದೆ.
  • ಪರಿಶಿಷ್ಟ ಜಾತಿ ಹೆಣ್ಣು ಮಕ್ಕಳನ್ನು ಇತರೆ ಜಾತಿಯ ಪುರುಷರು ವಿವಾಹವಾದರೆ ಪ್ರಸ್ತುತ ನೀಡುತ್ತಿರುವ ಪ್ರೋತ್ಸಾಹಧನವನ್ನು 1 ಲಕ್ಷದಿಂದ 3 ಲಕ್ಷಕ್ಕೆ ಹೆಚ್ಚಿಸಲಾಗುತ್ತದೆ.
  • ವಿದೇಶಗಳಲ್ಲಿ ಉನ್ನತ ವ್ಯಾಸಂಗಕ್ಕೆ ಆಯ್ಕೆಯಾಗುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ರು.6 ಲಕ್ಷ ಗಳವರೆಗೆ ಇದ್ದಲ್ಲಿ 100 ರಷ್ಟು ಹಾಗೂ ರು.6 ಲಕ್ಷಗಳಿಂದ 15 ಲಕ್ಷ ರು.ಗಳವರೆಗೆ ಇದ್ದಲ್ಲಿ ಶೇ.50 ರಷ್ಟು ಶುಲ್ಕ ನೀಡಲಾಗುವುದು.
  • ಡಾ.ಅಂಬೇಡ್ಕರ್ ಚಾರಿಟೆಬಲ್ ಅಂಡ್ ಎಜುಕೇಷನ್ ಟ್ರಸ್ಟ್ ಧಾರವಾಡದ ಮುಖಾಂತರ ಸ್ಮಾರಕ ನಿರ್ಮಿಸಲು ರು.3 ಕೋಟಿಗಳನ್ನು ಒದಗಿಸಲಾಗುವುದು.
  • ಆದಿವಾಸಿಗಳ ಅಭಿವೃದ್ದಿಗಾಗಿ ಅವರ ಸಮುದಾಯಗಳ ಕಲೆ, ಸಂಸ್ಕೃತಿ ಭಾಷೆ ಮತ್ತು ಇತರೆ ವಿಷಯಗಳ ಬಗ್ಗೆ ಅಧ್ಯಯನ ಮಾಡಿ ಉಳಿಸಿಕೊಳ್ಳುವ ಸಲುವಾಗಿ ಮೈಸೂರು ಗಿರಿಜನ ಸಂಶೋಧನಾ ಸಂಸ್ಥೆಯಲ್ಲಿ ಒಂದು ಘಟಕವನ್ನಾಗಿ ಸ್ಥಾಪಿಸಲಾಗುವುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT