ಸಾಂದರ್ಭಿಕ ಚಿತ್ರ 
ರಾಜ್ಯ

ಉನ್ನತ ಶಿಕ್ಷಣ ಮತ್ತು ಪ್ರಾಥಮಿಕ ಶಿಕ್ಷಣ

2015-16ನೇ ಸಾಲಿನ ಬಜೆಟ್ ಆರಂಭವಾಗಿದ್ದು, ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುಣಮಟ್ಟ ಶಿಕ್ಷಣ ನೀಡಲು 24 ಮಹಿಳಾ ಮತ್ತು 27 ಸಹ ಶಿಕ್ಷಣ ಕಾಲೇಜುಗಳನ್ನು...

ಬೆಂಗಳೂರು: 2015-16ನೇ ಸಾಲಿನ ಬಜೆಟ್ ಆರಂಭವಾಗಿದ್ದು, ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುಣಮಟ್ಟ ಶಿಕ್ಷಣ ನೀಡಲು 24 ಮಹಿಳಾ ಮತ್ತು 27 ಸಹ ಶಿಕ್ಷಣ ಕಾಲೇಜುಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದ್ದಾರೆ.

ಉನ್ನತ ಶಿಕ್ಷಣ:
ಬಜೆಟ್ ಮಂಡನೆ ವೇಳೆ ಈಗಾಗಲೇ ಖಾಲಿ ಇರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 2160 ಬೋಧಕ ಹುದ್ದೆಗಳನ್ನು ವಿಶೇಷ ನೇಮಕಾತಿ ಅಡಿಯಲ್ಲಿ ಭರ್ತಿ ಮಾಡುವ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 71 ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 44 ಸರ್ಕಾರಿ ಪಾಲಿಟೆಕ್ನಿಕ್ ಮತ್ತು 10 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಹಾಗೂ ಸಾಮಾನ್ಯ ವಿದ್ಯಾರ್ಥಿಗಳಿಗೆ 10 ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಹಾಸ್ಟೆಲ್ ನಿರ್ಮಿಸಲಾಗುವುದು ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳಿಲ್ಲಿ ಉದ್ಯಮಶೀಲತೆಯನ್ನು ಪ್ರೋತ್ಸಾಹಿಸಲು ಹೊಸ ಉದ್ದಿಮೆಗಳನ್ನು ಹುಟ್ಟುಹಾಕುವ ವಿದ್ಯಾರ್ಥಿಗಳು ಬ್ಯಾಂಕಿನಿದ ಪಡೆಯುವ ವಾರ್ಷಿಕ 10 ಲಕ್ಷದವರೆಗಿನ ಸಾಲದ ಮೇಲಿನ ಬಡ್ಡಿಯನ್ನು 3 ವರ್ಷಗಳವರೆಗೆ ಸರ್ಕಾರ ಭರಿಸುವುದು. ಇದಕ್ಕಾಗಿ 10 ಕೋಟಿ ರು.ಗಳನ್ನು ಒದಗಿಸುತ್ತದೆ.

ಅಲ್ಲದೆ, ಎಲ್ಲಾ ಅನುದಾನಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಪಾವತಿಸುತ್ತಿರುವ ವ್ಯಾಸಂಗ ಮತ್ತು ಪ್ರಯೋಗಾಲಯ ಶುಲ್ಕವನ್ನು ಮನ್ನಾ ಮಾಡಿದ್ದು, ಈ ಯೋಜನೆಯಿಂದ ಸುಮಾರು 1.15 ಲಕ್ಷ ವಿದ್ಯಾರ್ಥಿನಿಯರಿಗೆ ಅನುಕೂಲವಾಗುತಂಹ ಯೋಜನೆಯನ್ನು ಜಾರಿಗೆ ತರುವುದಾಗಿ ತಿಳಿಸಿದ್ದಾರೆ.

  • ವಿಜ್ಞಾನ ಸುಜ್ಞಾನ ಯೋಜನೆಯ ಅನುಷ್ಠಾನದ ಮೂಲಕ ಪದವಿ ಮಟ್ಟದಲ್ಲಿ ಮತ್ತು ಸ್ನಾತಕ ಮಟ್ಟದಲ್ಲಿ ವಿಜ್ಞಾನದ ಕೋರ್ಸುಗಳನ್ನು ಪ್ರಾರಂಭಿಸುವ ಮೂಲಕ ಸರ್ಕಾರವು ವಿಜ್ಞಾನ ಶಿಕ್ಷಣವನ್ನು ಅದರಲ್ಲೂ ಮೂಲ ವಿಜ್ಞಾನವನ್ನು ಮತ್ತು ಸಂಶೋಧನೆಯನ್ನು ಪ್ರೋತ್ಸಾಹಿಸಲು 10 ಕೋಟಿಗಳನ್ನು ಒದಗಿಸಿದೆ.
  • ಮಂಗಳೂರು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ರಾಣಿ ಅಬ್ಬಕ್ಕ ಪೀಠದ ಸ್ಥಾಪನೆಗೆ 1 ಕೋಟಿ ರೂ. ಅನುದಾನ ನೀಡಲಾಗಿದೆ.
  • ಕೆಂಗೇರಿ ಬಳಿ ಗಾಣಕಲ್ ಗ್ರಾಮದಲ್ಲಿ ರಾಷ್ಟ್ರೀಯ ಮಟ್ಟದ ಚಿತ್ರಕಲಾ ಶಿಕ್ಷಣದ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಹೊರಾವರಣ ಕೇಂದ್ರವನ್ನು ಸ್ಥಾಪಿಸಲು ಉದ್ದೇಶಿಸಲಾಗಿದ್ದು, 5 ವರ್ಷಗಳ ಅವಧಿಯಲ್ಲಿ ರು.20 ಕೋಟಿಗಳನ್ನು ವಿಶೇಷ ಅನುದಾನ ನೀಡಲಾಗಿದೆ.
ಪ್ರಾಥಮಿಕ ಹಾಗೂ ಫ್ರೌಢ ಶಿಕ್ಷಣ
  • ಸರ್ಕಾರಿ ಶಾಲಾ ಮಕ್ಕಳ ಆರೋಗ್ಯ, ದೈಹಿಕ ರಕ್ಷಣೆಗಾಗಿ ಮತ್ತು ಏಕತೆಯನ್ನು ಮೂಡಿಸಲು 1 ರಿಂದ 10 ನೇ ತರಗತಿಯ ಸರ್ಕಾರಿ ಶಾಲೆಗಲ್ಲಿ ವ್ಯಾಸಂಗ ಮಾಡುತ್ತಿರುವ 54.54 ಮಕ್ಕಳಿಗೆ ಒಂದು ಜೊತೆ ಶೂಗಳು ಮತ್ತು ಎರಡು ಜೊತೆ ಕಾಲುಚೀಲಗಳನ್ನು ಒದಗಿಸಲು 120 ಕೋಟಿ ರೂ.ಗಳ ಅನುದಾನ ನಿಗದಿ ಪಡಿಸಲಾಗಿದೆ.
  • ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ ಗ್ರಂಥಾಲಯ, ಪ್ರಯೋಗಾಲಯ, ಹೊಸ ಕಟ್ಟಡ, ಹೆಚ್ಚುವರಿ ಕಟ್ಟಡ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಇತರೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು 110 ಕೋಟಿ ರೂ.ಗಳನ್ನು ನಿಗದಿಗೊಳಿಸಲಾಗುವುದು ಎಂದು ಹೇಳಿದ್ದಾರೆ.
  • 5 ನವೋದಯ ಶಾಲೆಗಳ ಆರಂಭ.
  • ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಕೈಗೊಂಡಿರುವ ತರಬೇತು ಮತ್ತು ಶಿಬಿರ ಕೇಂದ್ರಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಈ ಸಾಲಿನಲ್ಲಿ 5 ಕೋಟಿ ರೂ.ಗಳನ್ನು ಒಂದು ಬಾರಿಯ ವಿಶೇಷ ಅನುದಾನವನ್ನು ನೀಡಲಾಗಿದೆ.

ವೈದ್ಯಕೀಯ ಶಿಕ್ಷಣ
• ಪ್ರಸ್ತಾಪಿತ 6 ವೈದ್ಯಕೀಯ ಶಿಕ್ಷಣ ಕಾಲೇಜುಗಳ ಕಾರ್ಯಾರಂಭ.
• ಕಲಬುರ್ಗಿಯಲ್ಲಿ ಹೃದ್ರೋಗ ಚಿಕಿತ್ಸಾ ಘಟಕ ಸ್ಥಾಪನೆ - 15 ಕೋಟಿ ರೂ.
• ಬೆಂಗಳೂರಿನ ಮೂತ್ರಪಿಂಡ ರೋಗ ಚಿಕಿತ್ಸಾ ಸಂಸ್ಥೆಯಲ್ಲಿ(ನೆಫ್ರಾಲಜಿ ಇನ್‍ಸ್ಟಿಟ್ಯೂಟ್) ಮೂತ್ರಪಿಂಡ ಕಸಿ ಕಾರ್ಯಕ್ರಮ ಜಾರಿ - 2 ಕೋಟಿ ರೂ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT