ನಿರಾವರಿ ಯೋಜನೆಗಳು 
ರಾಜ್ಯ

ಸಿದ್ದು ಬಜೆಟ್ ನಲ್ಲಿ ಜಲಸಂಪನ್ಮೂಲ ಇಲಾಖೆಗೆ ಸಿಕ್ಕಿದ್ದೇನು..?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ವಿಧಾನಸೌಧದಲ್ಲಿ ಮಂಡಿಸಿದ 2015-16 ಸಾಲಿನ ಬಜೆಟ್ ನಲ್ಲಿ ಜಲಸಂಪನ್ಮೂಲ ಇಲಾಖೆಗೆ ವಿವಿಧ ಯೋಜನೆಗಳನ್ನು ಘೋಷಣೆ ಮಾಡಲಾಗಿದ್ದು...

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ವಿಧಾನಸೌಧದಲ್ಲಿ ಮಂಡಿಸಿದ 2015-16 ಸಾಲಿನ ಬಜೆಟ್ ನಲ್ಲಿ ಜಲಸಂಪನ್ಮೂಲ ಇಲಾಖೆಗೆ ವಿವಿಧ ಯೋಜನೆಗಳನ್ನು ಘೋಷಣೆ ಮಾಡಲಾಗಿದ್ದು, ಆಯೋಜನೆಗಳ ಪೂರ್ಣ ಪಾಠ ಇಲ್ಲಿದೆ.

ಭಾರಿ ಮತ್ತು ಮಧ್ಯಮ ನೀರಾವರಿ

• ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 - ಮುಳವಾಡ, ಚಿಮ್ಮಲಗಿ, ಇಂಡಿ, ಮಲ್ಲಾಬಾದ್, ರಾಮಪುರ, ಕೊಪ್ಪಳ ಹಾಗೂ ಹೆರಕಲ್ ಏತನೀರಾವರಿ ಮತ್ತು ನಾರಾಯಣಪುರ ಬಲದಂಡೆ ಕಾಲುವೆ ವಿಸ್ತರಣೆ.
• ಸಿಂಗಟಾಲೂರು ಏತನೀರಾವರಿ ಯೋಜನೆ-5,768.04 ಕೋಟಿ ರೂ. ಪರಿಷ್ಕೃತ ಯೋಜನೆಯ ಅಂದಾಜಿನ ಅನುಮೋದನೆ.
• ಶಿಂಷಾ ಅಣೆಕಟ್ಟೆಯ ಬಲದಂಡೆ ನಾಲೆಯ ಆಧುನೀಕರಣ ಕಾಮಗಾರಿ.
• ರಾಮನಗರ ತಾಲ್ಲೂಕಿನ ಬಿಡದಿ ಕಸಬ ಹೋಬಳಿ ಹಾಗೂ ಕನಕಪುರ ತಾಲ್ಲೂಕಿನ ಹಾರೋಹಳ್ಳಿ ಹೋಬಳಿಗೆ ನೀರು ತುಂಬಿಸುವ ಯೋಜನೆ ಜಾರಿ.
• ಕೆ.ಆರ್.ಎಸ್ ಜಲಾಶಯದ ಬೃಂದಾವನ ಉದ್ಯಾನವನವನ್ನು ವಿಶ್ವದರ್ಜೆಗೇರಿಸಲು ಕ್ರಮ.
• ಮೇಕೆದಾಟು ಮೇಲ್ಭಾಗದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಸಮತೋಲನಾ ಜಲಾಶಯಗಳ ನಿರ್ಮಾಣ - ವಿವರ ಯೋಜನಾ ವರದಿ ತಯಾರಿಕೆ - 25 ಕೋಟಿ ರೂ.
• ರಾಜ್ಯದ ಕೆಲವು ನೀರಾವರಿ ಅಚ್ಚುಕಟ್ಟು ಪ್ರದೇಶದಲ್ಲಿನ ಕಬ್ಬು ಬೆಳೆಗಳಿಗೆ ಹನಿ ನೀರಾವರಿ ಪದ್ಧತಿಯನ್ನು ಪ್ರಾಯೋಗಿಕವಾಗಿ ಅಳವಡಿಕೆ.
• ಕಲಬುರ್ಗಿ, ರಾಯಚೂರು, ಕೊಪ್ಪಳ, ವಿಜಯಪುರ, ಹಾವೇರಿ, ಬಾಗಲಕೋಟೆ ಹಾಗೂ ಗದಗ ಜಿಲ್ಲೆಗಳ 12 ಪ್ರಮುಖ ಯೋಜನೆಗಳಲ್ಲಿ ಸೂಕ್ಷ್ಮ ನೀರಾವರಿ ಯೋಜನೆ ಅಳವಡಿಕೆ.
• ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಸಂಸ್ಥೆ ಹಾಗೂ ವಾಲ್ಮಿ ಸಂಸ್ಥೆಗಳ ಬಲವರ್ಧನೆ.
• ಟಿ.ನರಸೀಪುರ ತಾಲ್ಲೂಕಿನ ತಲಕಾಡು ಗ್ರಾಮದ ಹತ್ತಿರ ಕಾವೇರಿ ನದಿಗೆ ಕಟ್ಟಿರುವ ಮಾಧವಮಂತ್ರಿ ಅಣೆಕಟ್ಟಿನ ಆಧುನೀಕರಣ.
• ಹೇಮಾವತಿ ಅಣೆಕಟ್ಟೆಯ ಕೆಳಭಾಗದಲ್ಲಿ ಉದ್ಯಾನವನ ನಿರ್ಮಾಣ.
• ಚನ್ನಗಿರಿ ತಾಲ್ಲೂಕು ಸಂತೇಬೆನ್ನೂರು ಮತ್ತು ಕಸಬ ಹೋಬಳಿಯಲ್ಲಿ ಏತನೀರಾವರಿ ಯೋಜನೆ.

ಸಣ್ಣ ನೀರಾವರಿ
• ರಾಯಚೂರು, ಬಾಗಲಕೋಟೆ, ಚಿತ್ರದುರ್ಗ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಸರಣಿ ಪಿಕಪ್‍ಗಳ ನಿರ್ಮಾಣ - 100 ಕೋಟಿ ರೂ.
• `ಕೆರೆ ಅಭಿವೃದ್ಧಿ-ನಾಡಿನ ಶ್ರೇಯೋಭಿವೃದ್ಧಿ' ಕಾರ್ಯಕ್ರಮ - 191 ಕೆರೆಗಳ ಸಮಗ್ರ ಅಭಿವೃದ್ಧಿ - 192.30 ಕೋಟಿ ರೂ.
• ಕೆರೆಗಳ ಒತ್ತುವರಿ ತೆರವು ಅಭಿಯಾನ ಆಯೋಜನೆ ಮತ್ತು ಕೆರೆಗಳ ಪೋಷಕ ಕಾಲುವೆ/ರಾಜ ಕಾಲುವೆಗಳ ದುರಸ್ತಿ ಕಾರ್ಯ - 100 ಕೋಟಿ ರೂ.
• ಕೊಳಚೆ ನೀರು ಸಂಸ್ಕರಿಸಿ ಕೆರೆ ತುಂಬಿಸಲು ಕೆಳಕಂಡ ಏತ ನೀರಾವರಿ ಯೋಜನೆ-
1. ಕೋರಮಂಗಲ-ಚಲ್ಲಘಟ್ಟ ಕಣಿವೆಯಿಂದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳಿಗೆ.
2. ದಕ್ಷಿಣಾ ಪಿನಾಕಿನಿ ಕಣಿವೆಯಿಂದ ಆನೇಕಲ್ ತಾಲ್ಲೂಕಿನ 60 ಕೆರೆಗಳಿಗೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT