2016-17 ರೈಲ್ವೆ ಬಜೆಟ್ ಮಂಡನೆ: ಪ್ರಯಾಣದ ಗುಟ್ಟು ಇಂದು ರಟ್ಟು 
ರೈಲ್ವೆ ಬಜೆಟ್

2016-17 ರೈಲ್ವೆ ಬಜೆಟ್ ಮಂಡನೆ: ಎಲ್ಲರ ಚಿತ್ತ ರೈಲ್ವೆ ಸಚಿವರತ್ತ

2016-17ರ ಪ್ರಸಕ್ತ ಸಾಲಿನ ರೈಲ್ವೇ ಬಜೆಟ್ ಗುರುವಾರ ಮಂಡನೆಯಾಗಲಿದ್ದು, ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಅವರು ಬಜೆಟ್ ಮಂಡಿಸಲಿದ್ದಾರೆ...

ನವದೆಹಲಿ: 2016-17ರ ಪ್ರಸಕ್ತ ಸಾಲಿನ ರೈಲ್ವೆ ಬಜೆಟ್ ಗುರುವಾರ ಮಂಡನೆಯಾಗಲಿದ್ದು, ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಅವರು  ಬಜೆಟ್ ಮಂಡಿಸಲಿದ್ದಾರೆ.

ಸುರೇಶ್ ಪ್ರಭು ಅವರು ಮಂಡಿಸುತ್ತಿರುವ 2ನೇ ಬಜೆಟ್ ಇದಾಗಿದ್ದು, ಪ್ರಯಾಣದ ಗುಟ್ಟನ್ನು ಸಚಿವರು ಇಂದು ಮಧ್ಯಾಹ್ನ 12 ಗಂಟೆಗೆ ರಟ್ಟು ಮಾಡಲಿದ್ದಾರೆ.

ಇದೇ ತಿಂಗಳ ಮೊದಲ ವಾರದಲ್ಲಿ ರಾಜ್ಯದಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ ಜಾಗತಿಕ ಹೂಡಿಕೆದಾರರ ಸಮ್ಮೇಳನದಲ್ಲಿ ಸುರೇಶ್ ಪ್ರಭು ನಗರಕ್ಕೆ ಸಬರ್ಬನ್ ರೈಲು ಸೇವೆ ಒದಗಿಸುವುದಾಗಿ ಭರವಸೆ ನೀಡಿದ್ದರು. ಇದರಂತೆ ಈ ಬಾರಿ ಬೆಂಗಳೂರು-ಮೈಸೂರು ನಡುವೆ ಸ್ಪೀಡ್ ರೈಲು ಹಾಗೂ ರಾಜಧಾನಿ ಬೆಂಗಳೂರು ಆಸುಪಾಸಿನ ಉಪನಗರಗಳ ರೈಲು ಸೇವೆಗಳ ಕುರಿತಂತೆ ಇರುವ ನಿರೀಕ್ಷೆಗಳು ಈ ಬಾರಿಯ ಬಜೆಟ್ ನಲ್ಲಿ ಸಾಕಾರಗೊಳ್ಳುವುದೇ ಎಂಬುದರ ಕುರಿತಂತೆ ಹಲವು ಕುತೂಹಲ ಮೂಡಿದೆ.

ಮೂಲಗಳ ಪ್ರಕಾರ ಈ ಬಾರಿ ಮಂಡನೆಯಾಗಲಿರುವ ರೈಲ್ವೆ ಬಜೆಟ್ ನಲ್ಲಿ ಪ್ರಯಾಣದ ಸಾಮಾನ್ಯ ದರದ ಏರಿಕೆಯು ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದ್ದು, ಫಸ್ಟ್ ಕ್ಲಾಸ್, ಎಸಿ ಕೋಚ್ ಗಳ ದರ ಏರಿಕೆಯಾಗುವ ಸಾಧ್ಯತೆಯಿದೆ. ಇದರಂತೆ ಹೊಸ ರೈಲುಗಳ ಘೋಷಣೆ ಕೂಡ ಅನುಮಾನವಾಗಿದೆ.

ಈಗಾಗಲೇ ಆದಾಯ ಹಾಗೂ ಅನುದಾನದ ಕೊರತೆಯಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಭಾರತೀಯ ರೈಲ್ವೆ ಇಲಾಖೆ ಚೇತರಿಕೆ ನೀಡುವ ನಿಟ್ಟಿನಲ್ಲಿ ಸಚಿವ ಸುರೇಶ್ ಪ್ರಭು ಅವರು ಯಾವ ರೀತಿಯ ಯೋಜನೆ ಹಾಗೂ ಕ್ರಮಗಳನ್ನು ಕೈಗೊಳ್ಳಲಿದ್ದಾರೆಂಬ ಹಲವು ಕುತೂಹಲಗಳು ಮೂಡತೊಡಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT