ತಮಿಳುನಾಡು ಮುಖ್ಯಮಂತ್ರಿ ಜೆ ಜಯಲಲಿತಾ 
ರೈಲ್ವೆ ಬಜೆಟ್

ರೈಲ್ವೇ ಬಜೆಟ್ ಟೀಕಿಸಿದ ಜಯಲಲಿತಾ

೨೦೧೬-೧೭ನೇ ಸಾಲಿನ ರೈಲ್ವೇ ಬಜೆಟ್ ರಾಜ್ಯದ ನಿರೀಕ್ಷೆಗಳನ್ನು ಪೂರೈಸಲು ವಿಫಲವಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಜೆ ಜಯಲಲಿತಾ ಗುರುವಾರ ಹೇಳಿದ್ದು,

ಚೆನ್ನೈ: ೨೦೧೬-೧೭ನೇ ಸಾಲಿನ  ರೈಲ್ವೇ ಬಜೆಟ್ ರಾಜ್ಯದ ನಿರೀಕ್ಷೆಗಳನ್ನು ಪೂರೈಸಲು ವಿಫಲವಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಜೆ ಜಯಲಲಿತಾ ಗುರುವಾರ ಹೇಳಿದ್ದು, ಬಜೆಟ್ ನ ಕೆಲವು ಆಯಾಮಗಳನ್ನು ಸ್ವಾಗತಿಸಿದ್ದಾರೆ.

"ಇಡಿಯಾಗಿ ರೈಲ್ವೇ ಬಜೆಟ್ ತಮಿಳು ನಾಡು ಜನರ ನಿರೀಕ್ಷೆಗಳನ್ನು ಪೂರೈಸಲು ವಿಫಲವಾಗಿದೆ" ಎಂದು ಜಯಲಲಿತಾ ಹೇಳಿದ್ದಾರೆ.

ಚೆನ್ನೈನಲ್ಲಿ ರೈಲ್ವೇ ಆಟೊ ಹಬ್ ಸ್ಥಾಪನೆ, ದೆಹಲಿ ಚೆನ್ನೈ ನಡುವೆ ರೈಲು ಕಾರಿಡಾರ್ ಯೋಜನೆ ಮತ್ತು ನಾಗಪಟ್ಟಣಂ ಹಾಗೂ ವೇಲಂಕನ್ನಿ ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸುವ ಪ್ರಸ್ತಾವನೆಗಳನ್ನು ಸ್ವಾಗತಿಸಿದ್ದಾರೆ.

ಆದರೆ ಕುಂದು ಕೊರತೆಗಳನ್ನು ನೀಗಿಸಲು ಅಂತರ್ಜಾಲಾದ ಮೊರೆ ಹೋಗಿರುವುದು ಹಿನ್ನಡೆ ಎಂದಿರುವ ಜಯಲಲಿತಾ, ಸಾಮಾನ್ಯ ಜನಕ್ಕೆ ಅಂತರ್ಜಾಲದ ಬಗ್ಗೆ ತಿಳಿದಿರಲು ಸಾಧ್ಯವಿಲ್ಲ ಮತ್ತು ಸ್ಮಾರ್ಟ್ ಫೋನ್ ಗಳನ್ನು ಹೊಂದಿರುವುದಿಲ್ಲ. ಆದುದರಿಂದ ಕುಂದು ಕೊರತೆಗಳ ವಿಚಾರಣೆಯನ್ನು ಕೇವಲ ಸಾಮಾಜಿಕ ಅಂತರ್ಜಾಲ ತಾಣಗಳಿಗೆ ಮೀಸಲಿಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

SCROLL FOR NEXT