ರೈಲ್ವೆ ಬಜೆಟ್

ರೈಲ್ವೆಯನ್ನು ಉದ್ಯೋಗ ಸೃಷ್ಟಿಯ ಇಂಜಿನ್ ಮಾಡಬೇಕೆಂಬುದು ಬಜೆಟ್ ನ ಗುರಿ: ಸುರೇಶ್ ಪ್ರಭು

ರೈಲ್ವೆ ಬಜೆಟ್ ಮಂಡನೆ ಮಾಡುತ್ತಿರುವ ಸಚಿವ ಸುರೇಶ ಪ್ರಭು ರೈಲ್ವೆ ಇಲಾಖೆಯನ್ನು ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆಯ ಇಂಜಿನ್ ಮಾಡಬೇಕೆಂಬುದು ಮುಖ್ಯ ಗುರಿ ಎಂದು ಹೇಳಿದ್ದಾರೆ.

ಎರಡನೇ ಬಾರಿಗೆ ರೈಲ್ವೆ ಬಜೆಟ್ ಮಂಡನೆ ಮಾಡುತ್ತಿರುವ ಸಚಿವ ಸುರೇಶ ಪ್ರಭು ರೈಲ್ವೆ ಇಲಾಖೆಯನ್ನು ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆಯ ಇಂಜಿನ್ ಮಾಡಬೇಕೆಂಬುದು ಮುಖ್ಯ ಗುರಿ ಎಂದು ಹೇಳಿದ್ದಾರೆ. 
ರೈಲ್ವೆ ಇಲಾಖೆ ಪ್ರಸ್ತುತ ಸವಾಲಿನ ಪರಿಸ್ಥಿತಿ ಎದುರಿಸುತ್ತಿದೆ, ಆದರೆ ನಾವು ಪರಿವರ್ತನೆಯ ಪ್ರಯಾಣಕ್ಕೆ ಮುಂದಡಿ ಇಟ್ಟಿದ್ದೇವೆ, ಇದು ನನ್ನ ಬಜೆಟ್ ಅಲ್ಲ, ಈ ಬಜೆಟ್ ಭಾರತೀಯ ಕುಟುಂಬಗಳ ನಿರೀಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಸುರೇಶ್ ಪ್ರಭು ಬಜೆಟ್ ಮಂಡನೆ ವೇಳೆ ಹೇಳಿದ್ದಾರೆ. ಪ್ರಯಾಣಿಕರ ಘನತೆ, ರೈಲುಗಳ ವೇಗ ಮತ್ತು ದೇಶದ ಪ್ರಗತಿ ಈ ಮೂರು ಅಂಶಗಳು ರೈಲ್ವೆ ಬಜೆಟ್ ನ ಮುಖ್ಯ ಗುರಿಯಾಗಿದೆ. ಮುಂದಿನ ವರ್ಷದಲ್ಲಿ 2000 ಕಿಮಿ ನಷ್ಟು ರೈಲು ಮಾರ್ಗಗಳನ್ನು ವಿದ್ಯುತೀಕರಣಗೊಳಿಸುವ ಪ್ರಸ್ತಾವನೆ ಹೊಂದಲಾಗಿದೆ ಎಂದು ಸುರೇಶ್ ಪ್ರಭು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT