ರಾಹುಲ್ ಗಾಂಧಿ 
ಕೇಂದ್ರ ಬಜೆಟ್

ರಾಹುಲ್ ಗಾಂಧಿ ಸಲಹೆಯಂತೆ ಬ್ರೈಲ್ ಕಾಗದಕ್ಕೆ ತೆರಿಗೆ ವಿನಾಯಿತಿ: ಜೇಟ್ಲಿ

ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸಲಹೆಯಂತೆ ಅಂಧರು...

ನವದೆಹಲಿ: ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸಲಹೆಯಂತೆ ಅಂಧರು ಬಳಸುವ ಬ್ರೈಲ್ ಕಾಗದದ ಮೇಲೆ ತೆರಿಗೆ ವಿನಾಯಿತಿ ನೀಡಲಾಗಿದೆ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಅವರು ವಾಣಿಜ್ಯ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಪತ್ರ ಬರೆದಿದ್ದರು. ಆ ಪತ್ರದಲ್ಲಿ ಅಂಧರು ಬಳಸುವ ವಿಶೇಷ ಸಾಧನಗಳ ಮೇಲೆ ಆಮದು ಸುಂಕವನ್ನು ತೆಗೆದು ಹಾಕಬೇಕು. ಈ ಮೂಲಕ ಅಂಧರಿಗೆ ಅನೂಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದರು.
ರಾಹುಲ್ ಸಲಹೆಯನ್ನು ಪರಿಗಣಿಸಿದ್ದು, ಬ್ರೈಲ್ ಕಾಗದದ ಮೇಲೆ ತೆರಿಗೆ ವಿನಾಯಿತಿ ನೀಡಲಾಗಿದೆ ಎಂದು ಜೇಟ್ಲಿ ಹೇಳಿದ್ದಾರೆ. 
ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿಗೆ ರಾಹುಲ್ ಭೇಟಿ ನೀಡಿದ್ದ ವೇಳೆ, ಕಾಮರ್ಸ್ ಅಂಧ ವಿದ್ಯಾರ್ಥಿನಿ ಚಂದನಾ, ಅಂಧರು ಬಳಸುವ ವಿಶೇಷ ಸಾಧನಗಳ ಮೇಲಿನ ಸುಂಕದಿಂದ ಅಂಧರಿಗೆ ಯಾವ ರೀತಿ ಕಷ್ಟವಾಗುತ್ತಿದೆ ಎಂದು ವಿವರಿಸಿ, ಮಧ್ಯಪ್ರವೇಶಿಸುವಂತೆ ರಾಹುಲ್ ಗೆ ಮನವಿ ಮಾಡಿದ್ದಳು. ವಿದ್ಯಾರ್ಥಿನಿಯ ಕೋರಿಕೆ ಮೇರೆಗೆ ರಾಹುಲ್ ಗಾಂಧಿ ವಾಣಿಜ್ಯ ಸಚಿವರಿಗೆ ಪತ್ರ ಬರೆದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT