ಕೇಂದ್ರ ಬಜೆಟ್: ಆರ್ಥಿಕ ಪ್ರಗತಿಗೆ ಜೇಟ್ಲಿಯ 9 ಆಧಾರ ಸ್ತಂಭಗಳು 
ಕೇಂದ್ರ ಬಜೆಟ್

ಕೇಂದ್ರ ಬಜೆಟ್: ಆರ್ಥಿಕ ಪ್ರಗತಿಗೆ ಜೇಟ್ಲಿಯ 9 ಆಧಾರ ಸ್ತಂಭಗಳು

ಬಹು ನಿರೀಕ್ಷಿತ ಆಡಳಿತರೂಢ ಎನ್ ಡಿಎ ಸರ್ಕಾರ ಸೋಮವಾರ ಪ್ರಸಕ್ತ ಸಾಲಿನ ಬಜೆಟ್ ನ್ನು ಮಂಡನೆ ಮಾಡಿದ್ದು, ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಮಂಡನೆ ಮಾಡಿದರು.

ನವದೆಹಲಿ: ಬಹು ನಿರೀಕ್ಷಿತ ಆಡಳಿತರೂಢ ಎನ್ ಡಿಎ ಸರ್ಕಾರ ಸೋಮವಾರ ಬಜೆಟ್ ನ್ನು ಮಂಡನೆ ಮಾಡಿದ್ದು, ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಮಂಡನೆ ಮಾಡಿದರು.

ಬಜೆಟ್ ಆರಂಭವಾಗುತ್ತಿದ್ದಂತೆ ಮಾತನಾಡಿದ ಅರುಣ್ ಜೇಟ್ಲಿ ಅವರು, ನನ್ನ ಈ ಬಾರಿಯ ಬಜೆಟ್ 9 ಆಧಾರ ಸ್ತಂಭಗಳ ಮೇಲೆ ನಿಂತಿದೆ ಎಂದು ಹೇಳಿದರು. ಇದರಂತೆ 9 ಆಧಾರ ಸ್ತಂಭಗಳ ಕುರಿತಂತೆ ವಿವರಣೆ ನೀಡಿದ ಅವರು, ನಮ್ಮ ಸರ್ಕಾರ ಕೃಷಿ ಗ್ರಾಮೀಣಾಭಿವೃದ್ಧಿ, ಮೂಲಸೌಕರ್ಯ ವೃದ್ಧಿ, ಸಾಮಾಜಿಕ, ಶಿಕ್ಷಣ ಕ್ಷೇತ್ರದ ಅಭಿವೃದ್ಧಿ, ಕೌಶಲ ವೃದ್ಧಿ ಹಾಗೂ ಉದ್ಯೋಗಾವಕಾಶ ಸೃಷ್ಟಿ, ಉದ್ಯಮ ಸ್ನೇಹಿ ನೀತಿ, ಆರ್ಥಿಕ ಶಿಸ್ತು, ತೆರಿಗೆ ಸುಧಾರಣೆ ಮತ್ತು ದೇಶವನ್ನು ಜ್ಞಾನದ ಕೇಂದ್ರವಾಗಿ ರೂಪಿಸುವುದರತ್ತ ಸರ್ಕಾರ ಗಮನ ಹರಿಸಿದ್ದು, ಇವು ನಮ್ಮ ಬಜೆಟ್ ನ 9 ಆಧಾರ ಸ್ತಂಭಗಳಾಗಿವೆ ಎಂದು ಹೇಳಿದರು.

ಜಾಗತಿಕ ಆರ್ಥಿಕತೆಗಿಂತಲೂ ಭಾರತದ ಅರ್ಥ ವ್ಯವಸ್ಥೆ ಹೆಚ್ಚು ಸ್ಥಿರವಾಗಿದೆ. ಹೀಗಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ ಚಾಲ್ತಿ ಖಾತೆ ಹೊರೆಯು (ಸಿಎಡಿ) ಒಟ್ಟಾರೆ ಆಂತರಿಕ ಉತ್ಪಾದನೆಯ ಶೇ.1.4 ಕ್ಕೆ ತಗ್ಗಲಿದೆ. 7ನೇ ವೇತನ ಆಯೋಗ ಮತ್ತು ಸಮಾಮ ಶ್ರೇಣಿ, ಸಮಾನ ಪಿಂಚಣಿ ಯೋಜನೆ ಜಾರಿಯಿಂದ ಮುಂದಿನ ಹಣಕಾಸು ವರ್ಷದಲ್ಲಿ ಹೆಚ್ಚಿನ ಆರ್ಥಿಕ ಹೊರೆ ಸರ್ಕಾರದ ಮೇಲೆ ಬೀಳಲಿದೆ ಎಂದು ಹೇಳಿದರು.

ಇದರಂತೆ ನಮ್ಮ ಸರ್ಕಾರ ಪಾರದರ್ಶಕತೆ ಕಾಪಾಡುವುಲ್ಲಿಯೂ ಹೊಸ ಯೋಜನೆಯನ್ನು ಜಾರಿ ತಂದಿದ್ದು, ಯುವಕರಿಗೆ ಉದ್ಯೋಗ ಸೃಷ್ಟಿಸಲು ಈಸ್ ಆಫ್ ಬ್ಯುಸಿನೆಸ್ ನಿಂದ ಉದ್ಯಮ ಕ್ಷೇತ್ರವನ್ನು ವೃದ್ದಿ ಮಾಡಲಾಗುತ್ತದೆ. ಇನ್ನು ಹಣಕಾಸು ಕ್ಷೇತ್ರದಲ್ಲಿಯೂ ಶಿಸ್ತು ಕಾಪಾಡಿಕೊಂಡು ಆರ್ಥಿಕ ವ್ಯವಸ್ಥೆ ವೃದ್ಧಿಸಲು ಸರ್ಕಾರ ಕ್ರಮಕೈಗೊಂಡಿದೆ. ತೆರಿಗೆ ಸುಧಾರಣೆಗಳ ಮೂಲಕ ನಾಗರಿಕ ಸ್ನೇಹಿ ವ್ಯವಸ್ಥೆ ಕಾಪಾಡಲು ಸರ್ಕಾರ ಸೂಕ್ತ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT