ಸಿದ್ದರಾಮಯ್ಯ 
ರಾಜ್ಯ ಬಜೆಟ್

ಅಭಿವೃದ್ಧಿ ಪರ ಬಜೆಟ್ ಮಂಡಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

ನಾನು ಅಭಿವೃದ್ಧಿ ಪರ ಹಾಗೂ ಜನಪರ ಬಜೆಟ್ ಮಂಡಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ಬೆಂಗಳೂರು: ನಾನು ಅಭಿವೃದ್ಧಿ ಪರ ಹಾಗೂ ಜನಪರ ಬಜೆಟ್ ಮಂಡಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.
ಇಂದು ಮುಖ್ಯಮಂತ್ರಿಯಾಗಿ ಐದನೇ ಬಜೆಟ್ ಮಂಡಿಸಿದ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಕಳೆದ ವರ್ಷಕ್ಕಿಂತ ಈ ಬಾರಿ 23,142 ಕೋಟಿ ರುಪಾಯಿ ಬಜೆಟ್ ಗಾತ್ರ ಹೆಜ್ಜಾಗಿದೆ. ಆದರೆ ಹಿಂದಿನ ಸರ್ಕಾರಗಳು ಖರ್ಚು ಮಾಡಿದ ಹಣ ಹಾಗೂ ನಾವು ಖರ್ಚು ಮಾಡಿದ ಹಣಕ್ಕೆ ತುಂಬಾ ವ್ಯತ್ಯಾಸ ಇದೆ. ಬೇಕಿದ್ದರೆ ಈ ಬಗ್ಗೆ ನಾನು ಅಂಕಿ ಅಂಶಗಳನ್ನು ನೀಡಲು ಸಿದ್ಧ ಎಂದಿದ್ದಾರೆ.
ನಾವು ನೀರಾವರಿಗೆ ಐದು ವರ್ಷಗಳಲ್ಲಿ 50 ಸಾವಿರ ಕೋಟಿ ರುಪಾಯಿ ಖರ್ಚು ಮಾಡುವುದಾಗಿ ಹೇಳಿದ್ದೇವೆ. ಆದರೆ 54 ಸಾವಿರ ಕೋಟಿ ರುಪಾಯಿ ಖರ್ಚು ಮಾಡಿದ್ದೇವೆ. ಬಿಜೆಪಿ ಅವಧಿಯಲ್ಲಿ ಕೇವಲ 21 ಸಾವಿರ ಕೋಟಿ ಖರ್ಚು ಮಾಡಲಾಗಿತ್ತು. ಇನ್ನು ಕೃಷಿಗೆ ಪ್ರತ್ಯೇಕ ಬಜೆಟ್ ಮಂಡಿಸಿದ್ದ ಬಿಜೆಪಿಯವರು ಅದಕ್ಕಾಗಿ ಕೇವಲ 7 ಸಾವಿರ ಕೋಟಿ ಖರ್ಚು ಮಾಡಿದ್ದರು. ಆದರೆ ನಾವು ಕೃಷಿಗಾಗಿ 19 ಸಾವಿರ ಕೋಟಿ ವೆಚ್ಚ ಮಾಡಿದ್ದೇವೆ ಎಂದರು.
ಈ ಬಜೆಟ್ ನಲ್ಲಿ ಕೃಷಿ, ಶಿಕ್ಷಣ, ನೀರಾವರಿ, ಆರೋಗ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಹೆಚ್ಚು ಆದ್ಯತೆ ನೀಡಿದ್ದು, ಇತರೆ ಇಲಾಖೆಗಳ ಆದ್ಯತೆಗಳು ಮುಂದುವರೆದಿವೆ ಎಂದು ಸಿಎಂ ತಿಳಿಸಿದರು. 
ಇದೇ ವೇಳೆ ರೈತರ ಸಾಲ ಮನ್ನಾ ಮಾಡಿಲ್ಲ. ಇದು ರೈತ ವಿರೋಧಿ ಬಜೆಟ್ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ಸಿಎಂ, ಕೇಂದ್ರ ಸರ್ಕಾರ ಮೊದಲು ರೈತರ ಶೇ.50ರಷ್ಟು ಸಾಲ ಮನ್ನಾ ಮಾಡಲಿ. ನಾವು ಅರ್ಧದಷ್ಟು ಸಾಲ ಮನ್ನಾ ಮಾಡುತ್ತೇವೆ ಎಂದರು.
ಬಿಜೆಪಿಯವರು ಸಾಲ ಮನ್ನಾಗೆ ಒತ್ತಾಯಿಸಿ ನಮ್ಮ ಸರ್ಕಾರ ವಿರುದ್ಧ ಪ್ರತಿಭಟನೆ ಮಾಡುವು ಬದಲು ಸಂಸತ್ತಿನಲ್ಲಿ ಪ್ರತಿಭಟನೆ ಮಾಡಲಿ. ಕೇಂದ್ರ ಸರ್ಕಾರ ಸಾಲ ಮನ್ನಾ ಮಾಡಿದರೆ ಶೇ.80ರಷ್ಟು ರೈತರಿಗೆ ಅನುಕೂಲವಾಗುತ್ತದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT