ವಿಧಾನ ಪರಿಷತ್ ಸಭೆಗೆ ಆಗಮಿಸಿದ ಸಿಎಂ 
ರಾಜ್ಯ ಬಜೆಟ್

ರಾಜ್ಯ ಬಜೆಟ್ 2017-18ರ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌದದಲ್ಲಿ 2017-18ನೇ ಸಾಲಿನ ಆಯವ್ಯಯಪಟ್ಟಿ ಮಂಡಿಸುತ್ತಿದ್ದು, ಇದು ಅವರ 12 ಬಜೆಟ್ ಮಂಡನೆಯಾಗಿದೆ. ಪ್ರಸಕ್ತ ಸಾಲಿನ ಬಜೆಟ್ ಸುಮಾರು 2 ಲಕ್ಷ ಕೋಟಿ ಗಾತ್ರದ್ದಾಗಿದೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌದದಲ್ಲಿ 2017-18ನೇ ಸಾಲಿನ ಆಯವ್ಯಯಪಟ್ಟಿ ಮಂಡಿಸುತ್ತಿದ್ದು, ಇದು ಅವರ 12 ಬಜೆಟ್ ಮಂಡನೆಯಾಗಿದೆ. ಪ್ರಸಕ್ತ ಸಾಲಿನ ಬಜೆಟ್ ಸುಮಾರು 2 ಲಕ್ಷ ಕೋಟಿ ಗಾತ್ರದ್ದಾಗಿದೆ.

11:09:07 AM ಬಜೆಟ್ ಮಂಡನೆಗೂ ಮುನ್ನ ಮಂತ್ರಿ ಪರಿಷತ್ ಸಭೆ ಆರಂಭ

11:20:14 AM ಮಂತ್ರಿ ಪರಿಷತ್ ನಲ್ಲಿ ಬಜೆಟ್ ಗೆ ಅನುಮೋದನೆ

11:30:00 AM ವಿಧಾನಸಭೆಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ, ಬೃಹತ್ ಗಾತ್ರದ ಬಜೆಟ್ ಪುಸ್ತಕ ಪ್ರತಿ ಹೊರ ತೆಗೆದೆ ಸಿಎಂ

11:30:50 AM ವಿಧಾನಸಭೆಗೆ ಆಗಮಿಸಿದ ಸ್ಪೀಕರ್ ಕೋಳಿವಾಡ್

11:31:06 AM ವಂದೇ ಮಾತರಂ ಗೀತೆ ಮೂಲಕ ಬಜೆಟ್ ಅಧಿವೇಶನಕ್ಕೆ ಚಾಲನೆ

11:32:05 AM ಸದನದ ಮಾನ್ಯ ಮೊಯಿನುದ್ದೀನ್ ಭಾವಾ ಅವರಿಗೆ ಜನ್ಮ ದಿನದ ಶುಭ ಕೋರಿದ ಸ್ಪೀಕರ್ ಕೋಳಿವಾಡ್

11:32:57 AM 2017-18 ಸಾಲಿನ ಬಜೆಟ್ ಮಂಡಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಸೂಚಿಸಿದ ಸ್ಪೀಕರ್ ಕೋಳಿವಾಡ್

11:33:24 AM ಸಿಎಂ ಸಿದ್ದರಾಮಯ್ಯರಿಂದ 2017-18 ಸಾಲಿನ ಬಜೆಟ್ ಮಂಡನೆ ಆರಂಭ

11:37:17 AM ನಮ್ಮದು ಸರ್ವರನ್ನು ಒಳಗೊಂಡ ಸರ್ವೋದಯ ಅಭಿವೃದ್ಧಿ ಮಾದರಿ ಸರ್ಕಾರ. ಅಭಿವೃದ್ಧಿಯ ಪಥವೇ ಸರ್ಕಾರದ ಸಾಧನೆಯಾಗಿದೆ. 


11:39:01 AM ರಾಜ್ಯ ಹೆದ್ದಾರಿಗಳು, ಕೈಗಾರಿಕಾ ಪಾರ್ಕ್ ಗಳು ನಮ್ಮ ಹೆಮ್ಮೆಯ ಸಾಧನೆ.

11:39:49 AM ಬೆಂಗಳೂರನ್ನು ಅತ್ಯಂತ ಕ್ರಿಯಾಶೀಲ ನಗರಿಯನ್ನಾಗಿಸಿದ್ದೇವೆ. ಸಾಮಾಜಿಕ ನ್ಯಾಯದ ಪರಿಕಲ್ಪನೆಯಡಿ ಬಜೆಟ್ ಮಂಡನೆ.
11:41:02 AM 21 ಜಿಲ್ಲೆಗಳ 49 ಹೊಸ ತಾಲೂಕುಗಳ ಘೋಷಣೆ.

11:42:20 AM ಅಮ್ಯಾ ಕ್ಯಾಂಟೀನ್ ಮಾದರಿಯಲ್ಲೇ ಬೆಂಗಳೂರಿನ ಪ್ರತೀ ವಾರ್ಡ್ ತಲಾ ಒಂದರಂತೆ 198 ನಮ್ಮ ಕ್ಯಾಂಟೀನ್ ಸ್ಥಾಪನೆ. 5 ರುಪಾಯಿಗೆ ತಿಂಡಿ, 10 ರುಪಾಯಿಗೆ ಊಟ..ಇದು ನಮ್ಮ ಕ್ಯಾಂಟೀನ್ ವಿಶೇಷತೆ.  ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸವಿರುಚಿ ಸಂಚಾರಿ ಕ್ಯಾಂಟೀನ್.
11:43:50 AM 12 ಲಕ್ಷ ಮಹಿಳೆಯರಿಗೆ ಮಧ್ಯಾಹ್ನದ ಬಿಸಿಯೂಟದ ಯೋಜನೆ. ಹೊಸ ತಾಲೂಕು ಪಂಚಾಯಿತಿ ಕಚೇರಿ ನಿರ್ಮಾಣಕ್ಕೆ 300 ಕೋಟಿ ಅನುದಾನ.

11:44:33 AM ರೈತರ ಸಾಲ ಮನ್ನಾ ಇಲ್ಲ. ಸಾಲ ಮರುಪಾವತಿ ಅವಧಿ ವಿಸ್ತರಣೆ. ಶೂನ್ಯ ಬಡ್ಡಿದರದಲ್ಲಿ 3 ಲಕ್ಷದವರೆಗೆ ಸಾಲ ಸೌಲಭ್ಯ ಮುಂದುವರಿಕೆ. 30 ಕೋಟಿ ವೆಚ್ಚದಲ್ಲಿ ಮೋಡ ಬಿತ್ತನೆ ಕಾರ್ಯ. 

11:45:36 AM 21 ಜಿಲ್ಲೆಗಳಲ್ಲಿ ಹೊಸ ತಾಲೂಕುಗಳ ಘೋಷಣೆ, ಅನ್ನಭಾಗ್ಯ ಅಕ್ಕಿ 5ಕೆಜಿಯಿಂದ 7ಕೆಜಿಗೆ ಏರಿಕೆ. ಅನ್ನಭಾಗ್ಯದ ಅಕ್ಕಿ ಕುಟಂಬಕ್ಕೆ 35ಕೆಜಿಗೆ ಏರಿಕೆ.
11:46:54 AM 6 ಹೊಸ ಮೆಡಿಕಲ್ ಕಾಲೇಜು, 5 ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ. ದಾವಣಗೆರೆ, ತುಮಕೂರು, ವಿಜಯಪುರ,ಕೋಲಾರ, ರಾಮನಗರದಲ್ಲಿ ಸೂಪರ್, ಸ್ಪೆಶಾಲಿಟಿ ಆಸ್ಪತ್ರೆ.

11:47:39 AM 2017-18ನೇ ಸಾಲಿನಲ್ಲಿ 1,86, 561 ಕೋಟಿ ರುಪಾಯಿ ಗಾತ್ರದ ಬಜೆಟ್ ಮಂಡನೆ. 25 ಲಕ್ಷ ರೈತರಿಗೆ 13, 500 ಕೋಟಿ ರುಪಾಯಿ ಕೃಷಿ ಸಾಲ ನೀಡುವ ಗುರಿ.

11:48:38 AM ಅಂಗನವಾಡಿ ಮಕ್ಕಳಿಗೆ ವಾರದಲ್ಲಿ 2 ದಿನ ಮೊಟ್ಟೆ. ಕ್ಷೀರಭಾಗ್ಯ ಯೋಜನೆಯಡಿ ವಾರದಲ್ಲಿ 5ದಿನ ಮಕ್ಕಳಿಗೆ ಹಾಲು ವಿತರಣೆ.

11:50:07 AM 3 ಸಾವಿರ ಕೋಟಿ ರುಪಾಯಿ ವೆಚ್ಚದಲ್ಲಿ ನೀರಾವರಿ ಯೋಜನೆ. 42 ಕೋಟಿ ರೂಪಾಯಿ ವೆಚ್ಚದಲ್ಲಿ 10 ಕೆರೆಗಳ ಅಭಿವೃದ್ಧಿ.

11:51:15 AM ಸರಕು ಸೇವಾ ತೆರಿಗೆ ಜಾರಿ ಹಿನ್ನೆಲೆಯಲ್ಲಿ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಗೋಧಿ ಪದಾರ್ಥಗಳ ಮೇಲಿನ ತೆರಿಗೆ ವಿನಾಯ್ತಿ ಮುಂದುವರಿಕೆ.

11:53:35 AM  ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಯರಿಗಾಗಿ 145 ಚಿಕಿತ್ಸಾ ಘಟಕ ಸ್ಥಾಪನೆ.

11:55:00 AM  ಬೆಳೆಗಳ ಮೇಲಿನ ತೆರಿಗೆ ವಿನಾಯ್ತಿ ಮುಂದುವರಿಕೆ. ಭತ್ತ, ಅಕ್ಕಿ, ಗೋಧಿ, ಕಾಳುಗಳ ಮೇಲೆ ತೆರಿಗೆ ವಿನಾಯ್ತಿ.

11:56:43 AM ತುಂತುರು ನೀರಾವರಿ ಯೋಜನೆಗೆ 375 ಕೋಟಿ ಅನುದಾನ. ಕೃಷಿ ಇಲಾಖೆಗೆ 5080 ಕೋಟಿ ರೂಪಾಯಿ ಅನುದಾನ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸವಿರುಚಿ ಸಂಚಾರಿ ಕ್ಯಾಂಟೀನ್.
11:59:26 AM ಖಾಸಗಿ ಸಂಸ್ಥೆಗಳಲ್ಲಿ ಎಸ್ ಸಿ, ಎಸ್ ಟಿ ಕಾರ್ಮಿಕರಿಗೆ ಉದ್ಯೋಗ ಒದಗಿಸಲು ಆಶಾದೀಪ ಯೋಜನೆ. 
12:00:57 PM ಶ್ರವಣಬೆಳಗೊಳ ಮಹಾಮಸ್ತಾಕಾಭಿಷೇಕಕ್ಕೆ 175 ಕೋಟಿ.
12:01:04 PM 1 ಲಕ್ಷ ದ್ವಿಚಕ್ರ ವಾಹನಗಳ ಮೇಲಿನ ತೆರಿಗೆ ಹೆಚ್ಚಳ. 
12:01:17 PM ಮಲ್ಟಿಪ್ಲೆಕ್ಸ್ ಗಳಲ್ಲಿನ ಚಿತ್ರಮಂದಿರದ ಟಿಕೆಟ್ ದರ 200ಕ್ಕೆ ನಿಗದಿ. ಕನ್ನಡ ಚಿತ್ರೋದ್ಯಮ ಅಭಿವೃದ್ಧಿಗೆ ಮೈಸೂರಿನ ಹಿಮ್ಮಾವು ಎಂಬಲ್ಲಿ ಚಿತ್ರನಗರಿ ನಿರ್ಮಾಣ.
12:03:26 PM ಎಪಿಎಂಪಿಸಿಯಲ್ಲಿ ವೈಜ್ಞಾನಿಕವಾಗಿ ಹಣ್ಣು ಮಾಗಿಸುವ ವ್ಯವಸ್ಥೆಗೆ 10 ಕೋಟಿ ಮೀಸಲು. 
12:05:07 PM ಮದ್ಯದ ಮೇಲೆ ಹೆಚ್ಚುವರಿ ಅಬಕಾರಿ ಸುಂಕ. ಬಿಯರ್, ಫೆನ್ನಿ, ಲಿಕ್ಕರ್, ವೈನ್ ಮೇಲಿನ ಮೌಲ್ಯವರ್ಧಿತ ತೆರಿಗೆ ರದ್ದು. ಅಬಕಾರಿ ಶುಲ್ಕದಲ್ಲಿ ಹೆಚ್ಚಳ. ರಾಜ್ಯದಲ್ಲಿ ನೀರಾ ನೀತಿ ಜಾರಿ. ರಾಜ್ಯ ಅಬಕಾರಿ ಕಾಯ್ದೆಗೆ ತಿದ್ದುಪಡಿ.
12:06:21 PM ಕೆರೆ ಸಂಜೀವಿನಿ ಯೋಜನೆಗೆ 100 ಕೋಟಿ ರೂಪಾಯಿ. 200 ಕೋಟಿ ರೂಪಾಯಿ ವೆಚ್ಚದಲ್ಲಿ ಶುದ್ಧ ಕುಡಿಯುವ ಯೋಜನೆ. 
12:06:29 PM ಬೆಂಗಳೂರು ವನ್ ಮಾದರಿಯಲ್ಲಿ ಕರ್ನಾಟಕ ವನ್. ರಾಜ್ಯದ 9 ಜಿಲ್ಲೆಗಳಲ್ಲಿ ಕರ್ನಾಟಕ ವನ್ ಕೇಂದ್ರ ಸ್ಥಾಪನೆ.
12:10:03 PM ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ವೈಫೈ ಯೋಜನೆ. 
12:11:18 PM ಉನ್ನತ ಶಿಕ್ಷಣ ಇಲಾಖೆಗೆ ಒಟ್ಟು 4,401 ಕೋಟಿ ರೂಪಾಯಿ ಅನುದಾನ. ಶಾಲಾ ನಿರ್ವಹಣೆ, ಸುಧಾರಣೆಗೆ ಶಿಕ್ಷಣ ಕಿರಣ ಯೋಜನೆ ಜಾರಿ. ಹಂಪಿ ಕನ್ನಡ ವಿವಿಗೆ 25 ಕೋಟಿ ಯೋಜನೆ.
12:14:17 PM ಮಡಿಕೇರಿ, ಕಾರವಾರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಏರ್ ಸ್ಟ್ರಿಪ್ ನಿರ್ಮಾಣ. 10 ಸಾವಿರ ಉತ್ಕೃಷ್ಟ ಟಗರು ಉತ್ಪಾದನಾ ಘಟಕ. ರಾಜ್ಯದ ಪ್ರತೀ ಮಾಂಸದಂಗಡಿಗೆ 1.25 ಲಕ್ಷ ರೂ. ಅನುದಾನ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT