ಸಾಂದರ್ಭಿಕ ಚಿತ್ರ 
ರಾಜ್ಯ ಬಜೆಟ್

ಸಿದ್ದು ಬಜೆಟ್ ನಲ್ಲಿ ಮಹಿಳೆಯರಿಗೆ ಸಿಕ್ಕಿದ್ದೇನು?

ಮುಖ್ಯಮಂತ್ರಿ ಸಿದ್ದರಾಮಯ್ಯ ಬಧವಾರ 2017-18 ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗಾಗಿ....

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬಧವಾರ 2017-18 ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗಾಗಿ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಿದ್ದಾರೆ.
ಪೌಷ್ಟಿಕಾಂಶ ಕೊರತೆಯನ್ನು ನಿವಾರಿಸಲು ರಾಜ್ಯದ ಎಲ್ಲಾ 30 ಜಿಲ್ಲೆಗಳಿಗೂ 'ಮಾತೃ  ಪೂರ್ಣ' ಯೋಜನೆಯನ್ನು ವಿಸ್ತರಿಸಲು ಉದ್ದೇಶಿಸಲಾಗಿದ್ದು,  ಜುಲೈ ತಿಂಗಳಿನಿಂದ ಗರ್ಭಿಣಿ ಮತ್ತು ಬಾಣಂತಿಯರಿಗೆ ಸಿದ್ಧಪಡಿಸಿದ ಬಿಸಿಯೂಟವನ್ನು ಒದಗಿಸಲಾಗುವುದು. ಇದಕ್ಕಾಗಿ 32 ಕೋಟಿ ರು.ಗಳನ್ನು ಒದಗಿಸಲಾಗುವುದು.
ಎಲ್ಲ ಅಂಗನವಾಡಿಯ ಮಕ್ಕಳಿಗೆ ಮುಂದಿನ ಜೂನ್ ತಿಂಗಳಿನಿಂದ ವಾರದಲ್ಲಿ ಎರಡು ದಿನ ಮೊಟ್ಟೆ. ಇದಕ್ಕಾಗಿ 47 ಕೋಟಿ ರು. ವೆಚ್ಚ, ಕ್ಷೀರಭಾಗ್ಯ ಯೋಜನೆಯಡಿ ಪ್ರಸ್ತುತ 3 ದಿನಗಳು ವಿತರಿಸುತ್ತಿರುವ ಹಾಲನ್ನು ಜುಲೈ ತಿಂಗಳಿನಿಂದ 5 ದಿನಗಳಿಗೆ ಹೆಚ್ಚಿಸಿ ವಿತರಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
2013-14ನೇ ಸಾಲಿನಿಂದ 2016-17ನೇ ಸಾಲಿನವರೆಗೆ ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕರಿಗೆ ನೀಡುವ ಗೌರವಧನವನ್ನು ಅನುಕ್ರಮವಾಗಿ 1,500 ರುಗಳು ಮತ್ತು  750 ರು.ಗಳಷ್ಟು ಹೆಚ್ಚಿಸಲಾಗಿದೆ.  ಪ್ರಸಕ್ತ ಸಾಲಿನಲ್ಲಿ  ಈ ಮೊತ್ತವನ್ನು ಅನುಕ್ರಮವಾಗಿ 1000 ರು. ಹಾಗೂ  500 ರು.ಗಳಷ್ಟು ಹೆಚ್ಚಿಸಲಾಗುವುದು. ಇದಕ್ಕಾಗಿ  ಆಯವ್ಯಯದಲ್ಲಿ 115 ಕೋಟಿ ಮತ್ತು ಸಹಾಯಕರಿಗೆ ರಕ್ಷಣೆ ಒದಗಿಸಲು ಕರ್ನಾಚಕ ಸರ್ಕಾರದಿಂದ ಅಪಘಾತ ವಿಮೆ ಯೋಜನೆಯನ್ನು ಸಹ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ವಿಶೇಷ App. ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಯರಿಗಾಗಿ 145 ಚಿಕಿತ್ಸಾ ಘಟಕ ಸ್ಥಾಪನೆ.
ಹೆಚ್ ಐವಿ ಸೋಂಕಿತ ಹಾಗೂ ಬಾಧಿತರಾದವರಿಗೆ ಪಾಲನೆ ಯೋಜನೆಯಡಿ 25,000 ಮಕ್ಕಳಿಗೆ ನೀಡಲಾಗುವ ಧನ ಸಹಾಯವನ್ನು ಮಾಸಿಕ 800 ರೂಗಳಿಂದ 1,000 ರೂಗಳಿಗೆ ಹೆಚ್ಚಿಸಲಾಗುವುದು.
ಅಂಗನವಾಡಿ ಕಾರ್ಯಕರ್ತೆಯರಿಗೆ ಅಪಘಾತ ವಿಮೆ, ಸಾಧನಾ ಯೋಜನೆಯಡಿಯಲ್ಲಿ ನೀಡುವ ಆರ್ಥಿಕ ನೆರವು 30000 ದಿಂದ 50000 ಕ್ಕೆ ಏರಿಕೆ ಮಾಡಲಾಗಿದೆ. ಮತ್ತು ದೇವದಾಸಿ ಪದ್ಧತಿಯಿಂದ ಹೊರಬಂದವರಿಗೆ 25,000 ರೂ. ಪ್ರೋತ್ಸಾಹ ಧನ, 25,000 ಸಾವಿರದ ವರೆಗೆ ಸಾಲ ಸೌಲಭ್ಯ.
ಮಹಿಳಾ ಸ್ವಸಹಾಯ ಗುಂಪುಗಳಿಗೆ ಸಹಕಾರ ಸಂಘಗಳ ಮೂಲಕ ಶೇಕಡ 4ರ ಬಡ್ಡಿದರದಲ್ಲಿ ವಿತರಿಸಲಾಗುತ್ತಿರುವ ಸಾಲವನ್ನು ಈ ಸಾಲಿನಿಂದ ಶೂನ್ಯ ಬಡ್ಡಿದರದಲ್ಲಿ ವಿತರಣೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT