ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ 
ಕೇಂದ್ರ ಬಜೆಟ್

ವಿಪಕ್ಷಗಳ ವಿರೋಧದ ನಡುವೆಯೂ ಇಂದೇ ಬಜೆಟ್ ಮಂಡನೆಗೆ ಕೇಂದ್ರ ಸರ್ಕಾರ ನಿರ್ಧಾರ

ಮಾಜಿ ಸಚಿವ ಹಾಗೂ ಕೇರಳ ಸಂಸದ ಇ ಅಹಮದ್ ಅವರ ಸಾವಿನ ಹೊರತಾಗಿಯೂ ಬಜೆಟ್ ಮಂಡನೆ ನಿಗದಿಯಂತೆ ನಡೆಯಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ನವದೆಹಲಿ: ಮಾಜಿ ಸಚಿವ ಹಾಗೂ ಕೇರಳ ಸಂಸದ ಇ ಅಹಮದ್ ಅವರ ಸಾವಿನ ಹೊರತಾಗಿಯೂ ಬಜೆಟ್ ಮಂಡನೆ ನಿಗದಿಯಂತೆ ನಡೆಯಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಮಾಜಿ ಕೇಂದ್ರ ಸಚಿವ ಹಾಗೂ ಹಾಲಿ ಸಂಸದ ಇ ಅಹಮದ್ ಅವರು ಸಾವನ್ನಪ್ಪಿರುವ ಹಿನ್ನಲೆಯಲ್ಲಿ ಬಜೆಟ್ ಅಧಿವೇಶನ ಮುಂದೂಡಿಕೆಯಾಗುವ ಕುರಿತು ಸುದ್ದಿಗಳು ಹರಿದಾಡುತ್ತಿದ್ದು, ಅಲ್ಲದೆ ಸ್ವತಃ ಪ್ರಮುಖ ವಿಪಕ್ಷ ಕಾಂಗ್ರೆಸ್  ಸೇರಿದಂತೆ ಶಿವಸೇನೆ, ಜೆಡಿಯು ಹಾಗೂ ಕೇರಳ ಸಂಸದರು ಬಜೆಟ್ ಮಂಡನೆಯನ್ನು ಮುಂದೂಡುವಂತೆ ಒತ್ತಾಯಿಸುತ್ತಿದ್ದಾರೆ. ವಿಪಕ್ಷಗಳ ಒತ್ತಾಯದ ನಡುವೆಯೂ ಇದೀಗ ಕೇಂದ್ರ ಸರ್ಕಾರ ನಿಗದಿಯಂತೆ ಬಜೆಟ್ ಮಂಡನೆ  ಮಾಡುವುದಾಗಿ ಘೋಷಣೆ ಮಾಡಿದೆ.

ಈ ಬಗ್ಗೆ ಸ್ವತಃ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಟ್ವೀಟ್ ಮಾಡಿದ್ದು, ಬುಧವಾರ ಬೆಳಗ್ಗೆ 11 ಗಂಟೆಗೆ ತಾವು 2017ನೇ ಸಾಲಿನ ಬಜೆಟ್ ಮಂಡಿಸುವುದಾಗಿ ಟ್ವೀಟ್ ಮಾಡಿದ್ದಾರೆ. ಅಂತೆಯೇ ನಿನ್ನೆ ರಾತ್ರಿ ನಿಧನರಾದ ಕೇರಳ  ಸಂಸದ ಇ ಅಹ್ಮದ್ ಅವರ ಸಾವಿಗೆ ಜೇಟ್ಲಿ ಸಂತಾಪ ಸೂಚಿಸಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.

ಇಂದು ಬೆಳಗ್ಗೆಯಷ್ಟೇ ಬಜೆಟ್ ಮಂಡನೆ ಕುರಿತಂತೆ ಪ್ರಧಾನ ಮಂತ್ರಿ ಸಚಿವಾಲಯ ಸ್ಪಷ್ಟನೆ ನೀಡಿ, ನಿಗದಿಯಂತೆ ಬಜೆಟ್ ಮಂಡನೆಯಾಗಲಿದೆ ಎಂದು ಹೇಳಿತ್ತು.

ನೋಟು ನಿಷೇಧ ಬಳಿಕದ ಆರ್ಥಿಕ ಬೆಳವಣಿಗೆ ಹಾಗೂ ಕೇಂದ್ರ ಸರ್ಕಾರದ ನಗದು ರಹಿತ ವಹಿವಾಟು ಗುರಿ ಹಿನ್ನಲೆಯಲ್ಲಿ ಪ್ರಸಕ್ತ ಸಾಲಿನ ಬಜೆಟ್ ತೀವ್ರ ಕುತೂಹಲ ಕೆರಳಿಸಿದ್ದು, ಯಾವೆಲ್ಲಾ ವಲಯಗಳಿಗೆ ಬಜೆಟ್ ಎಷ್ಟರ ಮಟ್ಟಿಗೆ  ಉತ್ತೇಜನ ನೀಡಲಿದೆ ಎಂಬುದು ತಿಳಿಯಲಿದೆ. ಅಂತೆಯೇ ರೈಲ್ವೇ ಬಜೆಟ್ ಅನ್ನೂ ಕೂಡ ಕೇಂದ್ರ ಬಜೆಟ್ ನಲ್ಲೇ ವಿಲೀನ ಮಾಡಿರುವುದರಿಂದ ರೈಲ್ವೇ ಬಜೆಟ್ ಕೂಡ ಇಂದೇ ಮಂಡನೆಯಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT