ಜನತಾ ದಳ ಸಂಯುಕ್ತ ಪಕ್ಷದ ಹಿರಿಯ ನಾಯಕ ಶರದ್ ಯಾದವ್ 
ಕೇಂದ್ರ ಬಜೆಟ್

ಬಡಜನ ವಿರೋಧಿ, ರೈತ ವಿರೋಧಿ ಬಜೆಟ್: ಶರದ್ ಯಾದವ್

ಲೋಕಸಭೆಯಲ್ಲಿ ಇಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ ಬಜೆಟ್ ಅನ್ನು ಟೀಕಿಸಿರುವ ಜನತಾ ದಳ ಸಂಯುಕ್ತ ಪಕ್ಷದ ಹಿರಿಯ ನಾಯಕ ಶರದ್ ಯಾದವ್, 'ಬಡಜನ ವಿರೋಧಿ, ರೈತ ವಿರೋಧಿ ಬಜೆಟ್'

ನವದೆಹಲಿ: ಲೋಕಸಭೆಯಲ್ಲಿ ಇಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ ಬಜೆಟ್ ಅನ್ನು ಟೀಕಿಸಿರುವ ಜನತಾ ದಳ ಸಂಯುಕ್ತ ಪಕ್ಷದ ಹಿರಿಯ ನಾಯಕ ಶರದ್ ಯಾದವ್, 'ಬಡಜನ ವಿರೋಧಿ, ರೈತ ವಿರೋಧಿ ಬಜೆಟ್' ಎಂದಿದ್ದಾರೆ. 
"ಈ ಬಜೆಟ್ ರೈತರ ಬಗ್ಗೆಯಾಗಲಿ, ನಿರುದ್ಯೋಗ ಯುವಕರ ಬಗ್ಗೆಯಾಗಲಿ ಮತ್ತು ಇನ್ನು ಪ್ರಮುಖವಾಗಿ ಸರ್ಕಾರದ ನೋಟು ಹಿಂಪಡೆತ ನೀತಿಯ ಬಗ್ಗೆಯಾಗಲಿ ಮಾತನಾಡಿಲ್ಲ" ಎಂದು ಅವರು ದೂರಿದ್ದಾರೆ. 
"ಬಜೆಟ್ ನಲ್ಲಿ ರೈತರಿಗೆ ಏನೂ ಇಲ್ಲ. ಹಾಗೆಯೇ, ಇದು ಯುವಕರಿಗೆ ಉದ್ಯೋಗ ಸೃಷ್ಟಿಯ ಬಗ್ಗೆಯೂ ಏನು ಮಾತನಾಡುವುದಿಲ್ಲ" ಎಂದು ಯಾದವ್ ಹೇಳಿದ್ದು ಇದಕ್ಕೂ ಮುಂಚಿತವಾಗಿ ಬಿಜೆಪಿ ಯುವಕರಿಗೆ ೨ ಕೋಟಿ ಉದ್ಯೋಗ ಸೃಷ್ಟಿಯ ಬಗ್ಗೆ ಮಾತನಾಡಿತ್ತು ಎಂದಿದ್ದಾರೆ. 
"ಆ ಉದ್ಯೋಗಗಳು ಈಗೆಲ್ಲಿ?" ಎಂದು ಕೂಡ ಅವರು ಪ್ರಶ್ನಿಸಿದ್ದಾರೆ. 
ರೈಲ್ವೆ ಮತ್ತು ಹಣಕಾಸು ಬಜೆಟ್ ಗಳನ್ನು ವಿಲೀನಗೊಳಿಸಿರುವುದನ್ನು ಕೂಡ ಯಾದವ್ ಟೀಕಿಸಿದ್ದು ಇದು ಅನಗತ್ಯ ಪ್ರಕ್ರಿಯೆ ಎಂದಿದ್ದಾರೆ. 
"ಇವೆರಡನ್ನೂ ವಿಲೀನಗೊಳಿಸುವ ಅಗತ್ಯವೇನಿತ್ತು? ಕೇವಲ ಒಂದೂ ವರೆ ಪುಟದಲ್ಲಿ ರೈಲ್ವೆ ಯೋಜನೆಗಳನ್ನು ಮುಗಿಸಿದ್ದಾರೆ" ಎಂದು ಅವರು ಹೇಳಿದ್ದಾರೆ. 
ಬಜೆಟ್ ನಲ್ಲಿ ಸರ್ಕಾರ ಸಣ್ಣ ಉದ್ದಿಮೆಗಳು ಮತ್ತು ರೈತರ ಬಗ್ಗೆ ಮಾತನಾಡಬೇಕಿತ್ತು ಎಂದಿರುವ ಅವರು ನೋಟು ಹಿಂಪಡೆತದ ನಂತರ ಅತಿ ಹೆಚ್ಚು ತೊಂದರೆಗೆ ಒಳಗಾದ ವಲಯಗಳಿವು ಎಂದು ಕೂಡ ಯಾದವ್ ಹೇಳಿದ್ದಾರೆ. 
ನೋಟು ಹಿಂಪಡೆತ ನಂತರ ಎಷ್ಟು ಕಪ್ಪು ಹಣ ಮತ್ತು ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂಬುದನ್ನು ಸರ್ಕಾರ ತಿಳಿಸಬೇಕಿತ್ತು ಎಂದು ಕೂಡ ಶರದ್ ಯಾದವ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT