ಜನತಾ ದಳ ಸಂಯುಕ್ತ ಪಕ್ಷದ ಹಿರಿಯ ನಾಯಕ ಶರದ್ ಯಾದವ್ 
ಕೇಂದ್ರ ಬಜೆಟ್

ಬಡಜನ ವಿರೋಧಿ, ರೈತ ವಿರೋಧಿ ಬಜೆಟ್: ಶರದ್ ಯಾದವ್

ಲೋಕಸಭೆಯಲ್ಲಿ ಇಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ ಬಜೆಟ್ ಅನ್ನು ಟೀಕಿಸಿರುವ ಜನತಾ ದಳ ಸಂಯುಕ್ತ ಪಕ್ಷದ ಹಿರಿಯ ನಾಯಕ ಶರದ್ ಯಾದವ್, 'ಬಡಜನ ವಿರೋಧಿ, ರೈತ ವಿರೋಧಿ ಬಜೆಟ್'

ನವದೆಹಲಿ: ಲೋಕಸಭೆಯಲ್ಲಿ ಇಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ ಬಜೆಟ್ ಅನ್ನು ಟೀಕಿಸಿರುವ ಜನತಾ ದಳ ಸಂಯುಕ್ತ ಪಕ್ಷದ ಹಿರಿಯ ನಾಯಕ ಶರದ್ ಯಾದವ್, 'ಬಡಜನ ವಿರೋಧಿ, ರೈತ ವಿರೋಧಿ ಬಜೆಟ್' ಎಂದಿದ್ದಾರೆ. 
"ಈ ಬಜೆಟ್ ರೈತರ ಬಗ್ಗೆಯಾಗಲಿ, ನಿರುದ್ಯೋಗ ಯುವಕರ ಬಗ್ಗೆಯಾಗಲಿ ಮತ್ತು ಇನ್ನು ಪ್ರಮುಖವಾಗಿ ಸರ್ಕಾರದ ನೋಟು ಹಿಂಪಡೆತ ನೀತಿಯ ಬಗ್ಗೆಯಾಗಲಿ ಮಾತನಾಡಿಲ್ಲ" ಎಂದು ಅವರು ದೂರಿದ್ದಾರೆ. 
"ಬಜೆಟ್ ನಲ್ಲಿ ರೈತರಿಗೆ ಏನೂ ಇಲ್ಲ. ಹಾಗೆಯೇ, ಇದು ಯುವಕರಿಗೆ ಉದ್ಯೋಗ ಸೃಷ್ಟಿಯ ಬಗ್ಗೆಯೂ ಏನು ಮಾತನಾಡುವುದಿಲ್ಲ" ಎಂದು ಯಾದವ್ ಹೇಳಿದ್ದು ಇದಕ್ಕೂ ಮುಂಚಿತವಾಗಿ ಬಿಜೆಪಿ ಯುವಕರಿಗೆ ೨ ಕೋಟಿ ಉದ್ಯೋಗ ಸೃಷ್ಟಿಯ ಬಗ್ಗೆ ಮಾತನಾಡಿತ್ತು ಎಂದಿದ್ದಾರೆ. 
"ಆ ಉದ್ಯೋಗಗಳು ಈಗೆಲ್ಲಿ?" ಎಂದು ಕೂಡ ಅವರು ಪ್ರಶ್ನಿಸಿದ್ದಾರೆ. 
ರೈಲ್ವೆ ಮತ್ತು ಹಣಕಾಸು ಬಜೆಟ್ ಗಳನ್ನು ವಿಲೀನಗೊಳಿಸಿರುವುದನ್ನು ಕೂಡ ಯಾದವ್ ಟೀಕಿಸಿದ್ದು ಇದು ಅನಗತ್ಯ ಪ್ರಕ್ರಿಯೆ ಎಂದಿದ್ದಾರೆ. 
"ಇವೆರಡನ್ನೂ ವಿಲೀನಗೊಳಿಸುವ ಅಗತ್ಯವೇನಿತ್ತು? ಕೇವಲ ಒಂದೂ ವರೆ ಪುಟದಲ್ಲಿ ರೈಲ್ವೆ ಯೋಜನೆಗಳನ್ನು ಮುಗಿಸಿದ್ದಾರೆ" ಎಂದು ಅವರು ಹೇಳಿದ್ದಾರೆ. 
ಬಜೆಟ್ ನಲ್ಲಿ ಸರ್ಕಾರ ಸಣ್ಣ ಉದ್ದಿಮೆಗಳು ಮತ್ತು ರೈತರ ಬಗ್ಗೆ ಮಾತನಾಡಬೇಕಿತ್ತು ಎಂದಿರುವ ಅವರು ನೋಟು ಹಿಂಪಡೆತದ ನಂತರ ಅತಿ ಹೆಚ್ಚು ತೊಂದರೆಗೆ ಒಳಗಾದ ವಲಯಗಳಿವು ಎಂದು ಕೂಡ ಯಾದವ್ ಹೇಳಿದ್ದಾರೆ. 
ನೋಟು ಹಿಂಪಡೆತ ನಂತರ ಎಷ್ಟು ಕಪ್ಪು ಹಣ ಮತ್ತು ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂಬುದನ್ನು ಸರ್ಕಾರ ತಿಳಿಸಬೇಕಿತ್ತು ಎಂದು ಕೂಡ ಶರದ್ ಯಾದವ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT