ದೆಹಲಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ 
ಕೇಂದ್ರ ಬಜೆಟ್

ಕೇಂದ್ರ ಸರ್ಕಾರ ಬಜೆಟ್ ಮಂಡನೆಯನ್ನು ಮುಂದೂಡಬೇಕು: ಕಾಂಗ್ರೆಸ್ ಆಗ್ರಹ

ಕೇಂದ್ರ ಸರ್ಕಾರ ಬಜೆಟ್ ಮಂಡನೆಯನ್ನು ಒಂದು ದಿನ ಮುಂದೂಡಬೇಕು ಎಂದು ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.

ನವದೆಹಲಿ: ಕೇಂದ್ರ ಸರ್ಕಾರ ಬಜೆಟ್ ಮಂಡನೆಯನ್ನು ಒಂದು ದಿನ ಮುಂದೂಡಬೇಕು ಎಂದು ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.

ಮಾಜಿ ಕೇಂದ್ರ ಸಚಿವ ಹಾಗೂ ಹಾಲಿ ಕೇರಳ ಸಂಸದ ಇ ಅಹಮದ್ ಅವರು ಸಾವನ್ನಪ್ಪಿರುವ ಹಿನ್ನಲೆಯಲ್ಲಿ 2017ನೇ ಸಾಲಿನ ಬಜೆಟ್ ಅನ್ನು ನಾಳೆಗೆ ಮುಂದೂಡಬೇಕು ಎಂದು ಕೇಳಿಬರುತ್ತಿರುವ ಕೇರಳ ಸಂಸದರ ಆಗ್ರಹಕ್ಕೆ  ಇದೀಗ ಕಾಂಗ್ರೆಸ್, ಶಿವಸೇನೆ ಸೇರಿದಂತೆ ವಿವಿಧ ಪಕ್ಷಗಳು ಬೆಂಬಲ ನೀಡಿವೆ.

ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿರುವ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ತಮ್ಮ ಅಭಿಪ್ರಾಯದಂತೆ ಕಲಾಪವನ್ನು ಹಾಗೂ ಬಜೆಟ್ ಮಂಡನೆಯನ್ನು ನಾಳೆ ಮುಂದೂಡಬೇಕು. ಈ ಬಗ್ಗೆ ನಾನು ಸೇರಿದಂತೆ ಮಾಜಿ  ಪ್ರಧಾನಿ ಎಚ್ ಡಿ ದೇವೇಗೌಡ ಹಾಗೂ ಜೆಡಿಯು ಮುಖಂಡರು ಕೂಡ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ. ಅಂತೆಯೇ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಅವರು, ಸರ್ಕಾರಕ್ಕೆ ಅಹ್ಮದ್ ಅವರು ಸಾವನ್ನಪ್ಪಿರುವ ಕುರಿತು ಮೊದಲೇ ತಿಳಿದಿದೆ. ಆದರೂ ಈ ವಿಚಾರವನ್ನು ತಡವಾಗಿ ಹೊರ ಹಾಕಿದ್ದಾರೆ. ಇದೇನು ಮಾರ್ಚ್ 31 ಅಲ್ಲ. ಆದರೂ ಕೇಂದ್ರ ಸರ್ಕಾರ ಬಜೆಟ್ ಮಂಡನೆಗೆ ಆತುರ ಪಡುತ್ತಿದೆ. ಬಜೆಟ್ ಮುಂದೂಡುವುದರಿಂದ ವ್ಯತಿರಿಕ್ತ ಪರಿಣಾಮವೇನೂ ಆಗುವುದಿಲ್ಲ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ನಡೆ ನಿಜಕ್ಕೂ ಅಮಾನವೀಯಯವಾಗಿದ್ದು, ಅಹ್ಮದ್ ಸಾವಿನ ವಿಚಾರ ಬಹಿರಂಗ ಪಡಿಸಲು ತಡ ಮಾಡಬಾರದಿತ್ತು ಎಂದು ಅವರು ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT