ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ 
ಬಜೆಟ್-2018

ದೋಸ್ತಿ ಸರ್ಕಾರದ ಬಜೆಟ್ ನಿರೀಕ್ಷೆಗಳು ?

ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನಾಳೆ ಮಂಡಿಸಲಿರುವ ಮೊದಲ ಬಜೆಟ್ ನಲ್ಲಿ ರೈತರ ಷರತ್ತು ಬದ್ಧ ಕೃಷಿ ಸಾಲ, ಗರ್ಭೀಣಿರಿಗೆ ಮಾಸಿಕ 6 ಸಾವಿರ ರೂ. ಗೌರವ ಧನ, ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮತ್ತಿತರ ಹಲವು ಜನಪರ ಯೋಜನೆಗಳು ಜಾರಿಯಾಗುವ ನಿರೀಕ್ಷೆಯಿದೆ.

ಬೆಂಗಳೂರು: ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ  ಮಂಡಿಸಲಿರುವ ಜೆಡಿಎಸ್ -ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ನಲ್ಲಿ  ರೈತರ ಷರತ್ತು ಬದ್ಧ ಕೃಷಿ ಸಾಲ, ಗರ್ಭೀಣಿರಿಗೆ  ಮಾಸಿಕ 6 ಸಾವಿರ ರೂ. ಗೌರವ ಧನ, ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮತ್ತಿತರ ಹಲವು ಜನಪರ ಯೋಜನೆಗಳು ಜಾರಿಯಾಗುವ ನಿರೀಕ್ಷೆಯಿದೆ.
ರೈತರ ಸಾಲಮಿತಿಯನ್ನು  ಗರಿಷ್ಠಮಿತಿ 2 ರಿಂದ ಮೂರು ಲಕ್ಷ ರೂಪಾಯಿವರೆಗೂ ನಿಗದಿಗೊಳಿಸುವ ಸಾಧ್ಯತೆ ಇದೆ.  ಕೃಷಿಯೇತರ  ಆದಾಯ ಹೊಂದಿದ್ದು ಆದಾಯ ತೆರಿಗೆ ಪಾವತಿಸುವವರು ಸಾಲ ಮನ್ನಾ ಯೋಜನೆಯಡಿ ಅರ್ಹರಲ್ಲ ಎಂಬುದು ಮೂಲಗಳಿಂದ ತಿಳಿದುಬಂದಿದೆ.
ಇದರ ಹೊರತಾಗಿ ಸಮಾಜದ ಇತರ ವರ್ಗಗಳಿಗಾಗಿ ಕೆಲವೊಂದು ಗಿಪ್ಟ್ ನೀಡಲಿದ್ದಾರೆ ಎನ್ನಲಾಗಿದೆ.
ಸರ್ಕಾರಿ ಶಾಲೆಗಳ  ಬಾಲಕಿಯರಿಗೆ ನೀಡುವ ಉಚಿತ ನ್ಯಾಪ್ ಕಿನ್  ಕಾರ್ಯಕ್ರಮವನ್ನು  ಕಾಲೇಜು ಹಾಗೂ ತಾಂತ್ರಿಕ ಸಂಸ್ಥೆಗಳಿಗೆ ವಿಸ್ತರಿಸುವ ಸಾಧ್ಯತೆ ಇದೆ. ಮಹಿಳಾ ಪೊಲೀಸರಿಗೆ ವಿಶೇಷ ಭತ್ಯೆ  , ಶಾಲಾ ಮಕ್ಕಳಿಗೆ ಉಚಿತ ಬಸ್ ಪಾಸ್,  ಮಂಡ್ಯ ಅಥವಾ ಉತ್ತರ ಕನ್ನಡ ಜಿಲ್ಲೆಯಲ್ಲಿ ಇಸ್ರೆಲ್ ಮಾದರಿ  ಬೇಸಾಯ ಪದ್ಧತಿ , ಸರ್ಕಾರಿ ಆಸ್ಪತ್ರೆಗಳ ಮೇಲ್ದರ್ಜೇರಿಸಲು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Operation Sindoor ವೇಳೆ ಪಾಕಿಸ್ತಾನಕ್ಕೆ ನೆರವು, Azerbaijan ಶಾಕ್ ಕೊಟ್ಟ ಭಾರತ, SCO ಸದಸ್ಯತ್ವಕ್ಕೆ ತಡೆ! ಅಧ್ಯಕ್ಷ Ilham Aliyev ಹೇಳಿದ್ದೇನು?

ಒಂದೂರಿನಲ್ಲಿ ಬಡ ಬ್ರಾಹ್ಮಣನಿದ್ದ ಎಂದೇ ಶುರುವಾಗುತ್ತಿದ್ದ ಕತೆಯನ್ನು ಬದಲಿಸುತ್ತಿರುವವರ್ಯಾರು? (ತೆರೆದ ಕಿಟಕಿ)

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ: ಭೂಕುಸಿತದಲ್ಲಿ ಆರು ಮಂದಿ ಸಾವು; 1,150 ಕ್ಕೂ ಹೆಚ್ಚು ರಸ್ತೆಗಳು ಬಂದ್; Video

'ಉದಾತ್ತ ಹೃದಯ ಮತ್ತು ಸರಳತೆ': ಜನ್ಮದಿನಕ್ಕೆ ಶುಭ ಕೋರಿದ ಶಿವಣ್ಣಗೆ ಧನ್ಯವಾದ ಹೇಳಿದ ನಟ Pawan Kalyan

ಜಮ್ಮು- ಕಾಶ್ಮೀರದಲ್ಲಿ ಭಾರೀ ಮಳೆಗೆ ಪ್ರವಾಹ ಭೀತಿ: ಚೆನಾಬ್, ಝೇಲಂನಲ್ಲಿ ಅಪಾಯದ ಮಟ್ಟ ಮೀರಿದ ನೀರು; ಶಾಲೆಗಳಿಗೆ ರಜೆ, ಹೆದ್ದಾರಿ ಬಂದ್

SCROLL FOR NEXT