ರಾಜ್ಯ ಸಂಸದರ ಸಭೆ 
ರಾಜ್ಯ ಬಜೆಟ್

ಮೇಕೆದಾಟು ಯೋಜನೆ: ಸಂಸತ್ತಿನಲ್ಲಿ ಹೋರಾಟ ನಡೆಸಲು ರಾಜ್ಯದ ಸಂಸದರ ನಿರ್ಣಯ

ರಾಜ್ಯಸರ್ಕಾರ ಕೈಗೆತ್ತಿಕೊಂಡಿರುವ ಮೇಕೆದಾಟು ಯೋಜನೆಗೆ ಅಡ್ಡಗಾಲು ಹಾಕುತ್ತಿರುವ ತಮಿಳುನಾಡಿನ ಧೋರಣೆ ವಿರುದ್ಧ ರಾಜ್ಯದ...

ನವದೆಹಲಿ: ರಾಜ್ಯಸರ್ಕಾರ ಕೈಗೆತ್ತಿಕೊಂಡಿರುವ ಮೇಕೆದಾಟು ಯೋಜನೆಗೆ  ಅಡ್ಡಗಾಲು ಹಾಕುತ್ತಿರುವ ತಮಿಳುನಾಡಿನ ಧೋರಣೆ ವಿರುದ್ಧ ರಾಜ್ಯದ ಸರ್ವ ಪಕ್ಷಗಳ ಸಂಸದರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಸಂಸತ್ತಿನ ಒಳಗೆ ಹಾಗೂ ಹೊರಗೆ ಒಕ್ಕೊರಲಿನ  ಹೋರಾಟ ನಡೆಸಲು ಸರ್ವಾನುಮತದ ನಿರ್ಣಯ ಕೈಗೊಂಡಿದ್ದಾರೆ.

ಕೇಂದ್ರ ಸಚಿವ ಡಿ. ವಿ. ಸದಾನಂದಗೌಡ ಅವರ ದೆಹಲಿ ನಿವಾಸದಲ್ಲಿಂದು ನಡೆದ ಸರ್ವ ಪಕ್ಷಗಳ ಸಂಸದರ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

 ಮಾಜಿ ಪ್ರಧಾನಮಂತ್ರಿ ಹೆಚ್. ಡಿ. ದೇವೇಗೌಡ,  ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ  ಕಾಂಗ್ರೆಸ್ , ಬಿಜೆಪಿ ಹಾಗೂ ಜೆಡಿಎಸ್ ಸಂಸದರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಭೆಯ ನಂತರ ಮಾತನಾಡಿದ ಸದಾನಂದಗೌಡ, ರಾಜ್ಯದ ಜಲ, ನೆಲ, ಭಾಷೆ,  ವಿಚಾರ ಬಂದಾಗ ಪಕ್ಷ ಬೇಧ ಮರೆತು ಹೋರಾಟ ಮಾಡುತ್ತಾ ಬಂದಿದ್ದು,  ಮೇಕೆದಾಟು ಯೋಜನೆ ವಿಚಾರದಲ್ಲೂ ಒಕ್ಕೊರಲಿನ ಹೋರಾಟ ಮುಂದುವರೆಸಲು ಪಕ್ಷಬೇಧ ಮರೆತು ಸಂಸದರೆಲ್ಲ ತೀರ್ಮಾನಿಸಿದ್ದೇವೆ ಎಂದು ಹೇಳಿದರು.

ಅನಗತ್ಯವಾಗಿ ತಮಿಳುನಾಡು ಸರ್ಕಾರ ಕ್ಯಾತೆ ತೆಗೆದಿದೆ. ಎಐಎಡಿಎಂಕೆ ಹಾಗೂ ಡಿಎಂಕೆ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ಕಳೆದು ಏಳೆಂಟು ದಿನಗಳಿಂದ ಈ ಯೋಜನೆ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ತಮಿಳುನಾಡು ಸಂಸದರ ಈ ಧೋರಣೆ ವಿರುದ್ಧ ನಾವೂ ಸಹ ಸಂಸತ್ತಿನ ಒಳಗೆ ಮತ್ತು ಹೊರಗೆ ಹೋರಾಟ ನಡೆಸಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.

ಮಹಾದಾಯಿ ನದಿ ನೀರು ವಿವಾದ ಕುರಿತಂತೆ ಮುಂದೆ ಕೈಗೊಳ್ಳಬೇಕಾದ ಹೋರಾಟದ ರೂಪು -ರೇಷೆ ಕುರಿತಂತೆಯೂ ಸಭೆಯಲ್ಲಿ ಚರ್ಚಿಸಲಾಗಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

NICE ವಿವಾದ: ದೇವೇಗೌಡರು ಬೇಕಿದ್ರೆ ಕೋರ್ಟ್‌ಗೆ ಹೋಗಲಿ, ಉಪವಾಸ ಮಾಡಲಿ: ಮಾಜಿ ಪ್ರಧಾನಿ ಪತ್ರಕ್ಕೆ CM ಡಿಕೆಶಿ ತಿರುಗೇಟು

ಸ್ವಚ್ಛ ವಾಯು ಸರ್ವೇಕ್ಷಣ 2026: ಬೆಂಗಳೂರು, ಶ್ರೀನಗರ ಹಿಂದಿಕ್ಕಿದ ದೆಹಲಿ; ಅತ್ಯಂತ ಸ್ವಚ್ಛ ಗಾಳಿ ಯಾವ ನಗರದಲ್ಲಿದೆ ಗೊತ್ತಾ?

ಸತ್ಯ ನಿಕೇತನ ಪಿಜಿ ಕುಸಿತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ದೆಹಲಿ ಹೈಕೋರ್ಟ್ ಆದೇಶ; ದುರಂತಕ್ಕೆ ಮಾಲೀಕನಷ್ಟೇ ಅಲ್ಲ MCD, DU ಸಹ ಹೊಣೆ!

ರನ್‌ವೇಯಿಂದ ಜಾರಿದ ಅಮೆಜಾನ್ ಕಾರ್ಗೋ ವಿಮಾನ; ವಾಹನಗಳಿಗೆ ಡಿಕ್ಕಿ, ಕನಿಷ್ಠ ಐವರು ಸಾವು!

Varanasi: ತೆಲುಗು ರಾಜ್ಯಗಳಲ್ಲಿ ಬರೋಬ್ಬರಿ 320 ಕೋಟಿಗೆ ಥಿಯೇಟ್ರಿಕಲ್ ಹಕ್ಕುಗಳ ಮಾರಾಟ? ರಾಜಮೌಳಿಗೆ ತಲೆಬಿಸಿ!