ಸಿದ್ದರಾಮಯ್ಯ 
ರಾಜ್ಯ ಬಜೆಟ್

ಸರ್ಕಾರ 6ನೇ ವೇತನ ಆಯೋಗದ ವರದಿ ಒಪ್ಪಿದೆ, ಏ.1ರಿಂದ ಜಾರಿ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ರಾಜ್ಯ ಸರ್ಕಾರ 6ನೇ ವೇತನ ಆಯೋಗದ ವರದಿಯನ್ನು ಒಪ್ಪಿದ್ದು, ಏಪ್ರಿಲ್ 1ರಿಂದ ಸರ್ಕಾರಿ ನೌಕರರ ವೇತನವನ್ನು ಶೇ.30ರಷ್ಟು ಹೆಚ್ಚಳ ಮಾಡುವುದಾಗಿ...

ಬೆಂಗಳೂರು: ರಾಜ್ಯ ಸರ್ಕಾರ 6ನೇ ವೇತನ ಆಯೋಗದ ವರದಿಯನ್ನು ಒಪ್ಪಿದ್ದು, ಏಪ್ರಿಲ್ 1ರಿಂದ ಸರ್ಕಾರಿ ನೌಕರರ ವೇತನವನ್ನು ಶೇ.30ರಷ್ಟು ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ದಾಖಲೆಯ 13ನೇ ಬಜೆಟ್ ಮಂಡಿಸಿದ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, 6ನೇ ವೇತನ ಆಯೋಗದ ವರದಿಯನ್ನು ಸರ್ಕಾರ ಒಪ್ಪಿದೆ ಮತ್ತು ವರದಿ ಜಾರಿಗೆ ಬಜೆಟ್ ನಲ್ಲಿ ಹಣ ಒದಗಿಸಿದ್ದೇವೆ. ಆದರೆ ಸಚಿವ ಸಂಪುಟದಲ್ಲಿ ತೀರ್ಮಾನವಾಗಬೇಕಿದೆ ಎಂದು ಹೇಳಿದ್ದಾರೆ.
2018, ಏಪ್ರಿಲ್ 1ರಿಂದ ವೇತನ ಹೆಚ್ಚಳ ವರದಿ ಜಾರಿಗೆ ಬರಲಿದೆ. 6ನೇ ವೇತನ ಆಯೋಗದ ಶಿಫಾರಸಿನಂತೆ ಸರ್ಕಾರಿ ನೌಕರರ ವೇತನವನ್ನು ಶೇ.30ರಷ್ಟು ಹೆಚ್ಚಳ ಮಾಡುತ್ತೇವೆ. ಇದರಿಂದ ಸರ್ಕಾರಿ ನೌಕರರಿಗೆ ಮತ್ತು ಪಿಂಚಣಿದಾರರಿಗೆ ಅನುಕೂಲವಾಗಲಿದೆ ಎಂದರು.
ಸರ್ಕಾರಿ ನೌಕರರ ವೇತನ ಹೆಚ್ಚಳದಿಂದಾಗಿ ರಾಜ್ಯ ಸರ್ಕಾರ 10,508 ಕೋಟಿ ರುಪಾಯಿ ಹೊರೆಯಾಗಲಿದೆ ಎಂದು ಸಿಎಂ ತಿಳಿಸಿದರು.
ಇದು ಚುನಾವಣೆ ಬಜೆಟ್ ಅಲ್ಲ. ಸಾಮಾನ್ಯ ಬಜೆಟ್. ಬಜೆಟ್ ನಲ್ಲಿ ಯಾವುದೇ ಸುಳ್ಳು ಷೋಷಣೆ ಮಾಡಿಲ್ಲ. ಮುಂದೆ ನಾವೇ ಅಧಿಕಾರಕ್ಕೆ ಬಂದು ಇದನ್ನು ಜಾರಿಗೊಳಿಸುತ್ತೇವೆ. ಹೀಗಾಗಿ ಜಾರಿಗೊಳಿಸಲು ಸಾಧ್ಯವಾಗುವ ಮತ್ತು ಇತಿಮಿತಿಯೊಳಗೆ ಬಜೆಟ್ ಮಂಡಿಸಿದ್ದೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT