ಸಿದ್ದರಾಮಯ್ಯ 
ರಾಜ್ಯ ಬಜೆಟ್

ಸರ್ಕಾರ 6ನೇ ವೇತನ ಆಯೋಗದ ವರದಿ ಒಪ್ಪಿದೆ, ಏ.1ರಿಂದ ಜಾರಿ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ರಾಜ್ಯ ಸರ್ಕಾರ 6ನೇ ವೇತನ ಆಯೋಗದ ವರದಿಯನ್ನು ಒಪ್ಪಿದ್ದು, ಏಪ್ರಿಲ್ 1ರಿಂದ ಸರ್ಕಾರಿ ನೌಕರರ ವೇತನವನ್ನು ಶೇ.30ರಷ್ಟು ಹೆಚ್ಚಳ ಮಾಡುವುದಾಗಿ...

ಬೆಂಗಳೂರು: ರಾಜ್ಯ ಸರ್ಕಾರ 6ನೇ ವೇತನ ಆಯೋಗದ ವರದಿಯನ್ನು ಒಪ್ಪಿದ್ದು, ಏಪ್ರಿಲ್ 1ರಿಂದ ಸರ್ಕಾರಿ ನೌಕರರ ವೇತನವನ್ನು ಶೇ.30ರಷ್ಟು ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ದಾಖಲೆಯ 13ನೇ ಬಜೆಟ್ ಮಂಡಿಸಿದ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, 6ನೇ ವೇತನ ಆಯೋಗದ ವರದಿಯನ್ನು ಸರ್ಕಾರ ಒಪ್ಪಿದೆ ಮತ್ತು ವರದಿ ಜಾರಿಗೆ ಬಜೆಟ್ ನಲ್ಲಿ ಹಣ ಒದಗಿಸಿದ್ದೇವೆ. ಆದರೆ ಸಚಿವ ಸಂಪುಟದಲ್ಲಿ ತೀರ್ಮಾನವಾಗಬೇಕಿದೆ ಎಂದು ಹೇಳಿದ್ದಾರೆ.
2018, ಏಪ್ರಿಲ್ 1ರಿಂದ ವೇತನ ಹೆಚ್ಚಳ ವರದಿ ಜಾರಿಗೆ ಬರಲಿದೆ. 6ನೇ ವೇತನ ಆಯೋಗದ ಶಿಫಾರಸಿನಂತೆ ಸರ್ಕಾರಿ ನೌಕರರ ವೇತನವನ್ನು ಶೇ.30ರಷ್ಟು ಹೆಚ್ಚಳ ಮಾಡುತ್ತೇವೆ. ಇದರಿಂದ ಸರ್ಕಾರಿ ನೌಕರರಿಗೆ ಮತ್ತು ಪಿಂಚಣಿದಾರರಿಗೆ ಅನುಕೂಲವಾಗಲಿದೆ ಎಂದರು.
ಸರ್ಕಾರಿ ನೌಕರರ ವೇತನ ಹೆಚ್ಚಳದಿಂದಾಗಿ ರಾಜ್ಯ ಸರ್ಕಾರ 10,508 ಕೋಟಿ ರುಪಾಯಿ ಹೊರೆಯಾಗಲಿದೆ ಎಂದು ಸಿಎಂ ತಿಳಿಸಿದರು.
ಇದು ಚುನಾವಣೆ ಬಜೆಟ್ ಅಲ್ಲ. ಸಾಮಾನ್ಯ ಬಜೆಟ್. ಬಜೆಟ್ ನಲ್ಲಿ ಯಾವುದೇ ಸುಳ್ಳು ಷೋಷಣೆ ಮಾಡಿಲ್ಲ. ಮುಂದೆ ನಾವೇ ಅಧಿಕಾರಕ್ಕೆ ಬಂದು ಇದನ್ನು ಜಾರಿಗೊಳಿಸುತ್ತೇವೆ. ಹೀಗಾಗಿ ಜಾರಿಗೊಳಿಸಲು ಸಾಧ್ಯವಾಗುವ ಮತ್ತು ಇತಿಮಿತಿಯೊಳಗೆ ಬಜೆಟ್ ಮಂಡಿಸಿದ್ದೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Operation Sindoor ಬಳಿಕ ಪಂಜಾಬ್ ಅಸ್ಥಿರಗೊಳಿಸಲು ಪಾಕ್ proxy war; 'ಸಂಘಟಿತ ಅಪರಾಧ ಬೇರುಸಹಿತ ಕಿತ್ತೊಗೆಯುತ್ತೇವೆ'!

UP: 2025 ರಲ್ಲಿ 2,500 ಕ್ಕೂ ಹೆಚ್ಚು ಎನ್‌ಕೌಂಟರ್‌; 48 ಸಾವು, 8 ವರ್ಷಗಳಲ್ಲಿ ಅತಿ ಹೆಚ್ಚು

'CEC ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ'; SIR ಕುರಿತು ನಮ್ಮ ಕಳವಳ ಪರಿಹರಿಸಿಲ್ಲ: ಅಭಿಷೇಕ್ ಬ್ಯಾನರ್ಜಿ

2012 ಪುಣೆ ಬಾಂಬ್ ಸ್ಫೋಟ ಆರೋಪಿ 'ಅನಾಮಿಕ'ರ ಗುಂಡೇಟಿಗೆ ಬಲಿ!

ಕೊಯಮತ್ತೂರು: ತಮಿಳು ಮಾತನಾಡದ್ದಕ್ಕೆ ವಲಸೆ ಕಾರ್ಮಿಕನಿಗೆ ಚಾಕು ಇರಿತ; ಆರೋಪಿಗಳಿಗೆ ಹುಡುಕಾಟ

SCROLL FOR NEXT