ರಾಜ್ಯ ಬಜೆಟ್ ಆರಂಭ; 2018-19ನೇ ಸಾಲಿನ ಆಯವ್ಯಯಪಟ್ಟಿ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ ಬಜೆಟ್

ರಾಜ್ಯ ಬಜೆಟ್ ಆರಂಭ; 2018-19ನೇ ಸಾಲಿನ ಆಯವ್ಯಯಪಟ್ಟಿ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ

2018-19ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಬಜೆಟ್ ಕುರಿತು ಭಾಷಣೆ ಮಾಡುತ್ತಿದ್ದಾರೆ...

ಬೆಂಗಳೂರು: 2018-19ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಬಜೆಟ್ ಕುರಿತು ಭಾಷಣೆ ಮಾಡುತ್ತಿದ್ದಾರೆ. 
ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿ 6ನೇ ಹಾಗೂ ಹಣಕಾಸು ಸಚಿವರಾಗಿ 13ನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ. 
ಬಜೆಟ್ ಮಂಡನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಬಜೆಡ್ ಮಂಡಿಸಿದ ಅನುಭವವನ್ನು ಹಂಚಿಕೊಂಡಿದ್ದಾರೆ. 

ಫೆಬ್ರವರಿ 16ನೇ ದಿನದಂದು ರಾಜ್ಯದ 98ನೇ ಹಾಗೂ ನನ್ನ 13ನೇ ಬಜೆಟ್ ಮಂಡಿಸುತ್ತಿರುವ ಈ ಸಮಯದಲ್ಲಿ ನನ್ನ ಮೊದಲ ಬಜೆಟ್ ಮಂಡನೆ ನೆನಪಾಗುತ್ತಿದೆ. 

ನಾನು ಮೊದಲನೇ ಬಜೆಟ್ ಮಂಡನೆ ಮಾಡಿದ್ದು, 1994ರಲ್ಲಿ. ಅಂದು ದೇವೇಗೌಡರು ಮುಖ್ಯಮಂತ್ರಿಗಳಾಗಿದ್ದರು. ಹೊಸದಾಗಿ ಹಣಕಾಸು ಸಚಿವನಾಗಿದ್ದೆ. ಸ್ವಲ್ಪ ಅಂಜಿಕೆಯಿತ್ತು. ಏಕೆಂದರೆ ನಾನು ಅರ್ಥಶಾಸ್ತ್ರ ಓದಿದವನಲ್ಲ. ಆದರೆ ಅರ್ಥಶಾಸ್ತ್ರಜ್ಞರ ಜೊತೆಗೆ ಚರ್ಚೆ ನಡೆಸಿ, ತಿಳಿದುಕೊಂಡಿದ್ದೆ. ಬಳಿಕ ನನ್ನಲ್ಲಿ ಆತ್ಮವಿಶ್ವಾಸ ಹೆಚ್ಚಾಗಿತ್ತು. ನನ್ನ ಅಷ್ಟೆಲ್ಲಾ ತಯಾರಿ ಮೊದಲನೇ ಬಜೆಟ್ ಪ್ರಶಂಸೆಗೂ ಒಳಗಾಗಿತ್ತು. 

ಮೊದಲನೇ ಬಜೆಟ್ ಮಂಡನೆ ಸಂದರ್ಭದಲ್ಲಿ ಕೆಲವರು ನನ್ನನ್ನು ಅಪಹಾಸ್ಯ ಮಾಡಿದ್ದರು. ಸಿದ್ದರಾಮಯ್ಯ ಅವರಿಗೆ 100 ಕುರಿ ಲೆಕ್ಕ ಹಾಕುವುದಕ್ಕೆ ಬರುವುದಿಲ್ಲ. ಇಂತಹವರು ಹಣಕಾಸು ಮತ್ರಿ ಮಾಡಿ ತಪ್ಪು ಮಾಡಿದ್ದಾರೆಂದು ಹೇಳಿದ್ದರು. 

ಅಂತಹ ಅಪಹಾಸ್ಯಗಳಿಗೆ ನನ್ನ ಈವರೆಗಿನ 12 ಬಜೆಟ್ ಗಳೇ ಉತ್ತರವಾಗಿದೆ. ಮೊದಲಿದ್ದ ಅಂಜಿಕೆ ಈಗಿಲ್ಲ. ಯಾವುದೇ ಆತಂಕವಿಲ್ಲದೆ ಆರಾಮವಾಗಿ ಬಜೆಟ್ ತಯಾರಿ ಮಾಡಿಕೊಂಡು ಮಂಡನೆ ಮಾಡುತ್ತಿದ್ದೇನೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT