ರಾಜ್ಯ ಬಜೆಟ್ ಆರಂಭ; 2018-19ನೇ ಸಾಲಿನ ಆಯವ್ಯಯಪಟ್ಟಿ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ ಬಜೆಟ್

ರಾಜ್ಯ ಬಜೆಟ್ ಆರಂಭ; 2018-19ನೇ ಸಾಲಿನ ಆಯವ್ಯಯಪಟ್ಟಿ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ

2018-19ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಬಜೆಟ್ ಕುರಿತು ಭಾಷಣೆ ಮಾಡುತ್ತಿದ್ದಾರೆ...

ಬೆಂಗಳೂರು: 2018-19ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಬಜೆಟ್ ಕುರಿತು ಭಾಷಣೆ ಮಾಡುತ್ತಿದ್ದಾರೆ. 
ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿ 6ನೇ ಹಾಗೂ ಹಣಕಾಸು ಸಚಿವರಾಗಿ 13ನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ. 
ಬಜೆಟ್ ಮಂಡನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಬಜೆಡ್ ಮಂಡಿಸಿದ ಅನುಭವವನ್ನು ಹಂಚಿಕೊಂಡಿದ್ದಾರೆ. 

ಫೆಬ್ರವರಿ 16ನೇ ದಿನದಂದು ರಾಜ್ಯದ 98ನೇ ಹಾಗೂ ನನ್ನ 13ನೇ ಬಜೆಟ್ ಮಂಡಿಸುತ್ತಿರುವ ಈ ಸಮಯದಲ್ಲಿ ನನ್ನ ಮೊದಲ ಬಜೆಟ್ ಮಂಡನೆ ನೆನಪಾಗುತ್ತಿದೆ. 

ನಾನು ಮೊದಲನೇ ಬಜೆಟ್ ಮಂಡನೆ ಮಾಡಿದ್ದು, 1994ರಲ್ಲಿ. ಅಂದು ದೇವೇಗೌಡರು ಮುಖ್ಯಮಂತ್ರಿಗಳಾಗಿದ್ದರು. ಹೊಸದಾಗಿ ಹಣಕಾಸು ಸಚಿವನಾಗಿದ್ದೆ. ಸ್ವಲ್ಪ ಅಂಜಿಕೆಯಿತ್ತು. ಏಕೆಂದರೆ ನಾನು ಅರ್ಥಶಾಸ್ತ್ರ ಓದಿದವನಲ್ಲ. ಆದರೆ ಅರ್ಥಶಾಸ್ತ್ರಜ್ಞರ ಜೊತೆಗೆ ಚರ್ಚೆ ನಡೆಸಿ, ತಿಳಿದುಕೊಂಡಿದ್ದೆ. ಬಳಿಕ ನನ್ನಲ್ಲಿ ಆತ್ಮವಿಶ್ವಾಸ ಹೆಚ್ಚಾಗಿತ್ತು. ನನ್ನ ಅಷ್ಟೆಲ್ಲಾ ತಯಾರಿ ಮೊದಲನೇ ಬಜೆಟ್ ಪ್ರಶಂಸೆಗೂ ಒಳಗಾಗಿತ್ತು. 

ಮೊದಲನೇ ಬಜೆಟ್ ಮಂಡನೆ ಸಂದರ್ಭದಲ್ಲಿ ಕೆಲವರು ನನ್ನನ್ನು ಅಪಹಾಸ್ಯ ಮಾಡಿದ್ದರು. ಸಿದ್ದರಾಮಯ್ಯ ಅವರಿಗೆ 100 ಕುರಿ ಲೆಕ್ಕ ಹಾಕುವುದಕ್ಕೆ ಬರುವುದಿಲ್ಲ. ಇಂತಹವರು ಹಣಕಾಸು ಮತ್ರಿ ಮಾಡಿ ತಪ್ಪು ಮಾಡಿದ್ದಾರೆಂದು ಹೇಳಿದ್ದರು. 

ಅಂತಹ ಅಪಹಾಸ್ಯಗಳಿಗೆ ನನ್ನ ಈವರೆಗಿನ 12 ಬಜೆಟ್ ಗಳೇ ಉತ್ತರವಾಗಿದೆ. ಮೊದಲಿದ್ದ ಅಂಜಿಕೆ ಈಗಿಲ್ಲ. ಯಾವುದೇ ಆತಂಕವಿಲ್ಲದೆ ಆರಾಮವಾಗಿ ಬಜೆಟ್ ತಯಾರಿ ಮಾಡಿಕೊಂಡು ಮಂಡನೆ ಮಾಡುತ್ತಿದ್ದೇನೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT