ಸಾಂದರ್ಭಿಕ ಚಿತ್ರ 
ರಾಜ್ಯ ಬಜೆಟ್

ಕರ್ನಾಟಕ ಬಜೆಟ್ 2018: ಜಲ ಸಂಪನ್ಮೂಲ, ನೀರಾವರಿಗೆ 15.998 ಕೋಟಿ ರು. ಮೀಸಲು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ 2018-19ನೇ ಸಾಲಿನ ಬಜೆಟ್ ನಲ್ಲಿ ನೀರಾವರಿಗೆ ಒಟ್ಟು 15.998 ಕೋಟಿ...

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ 2018-19ನೇ ಸಾಲಿನ ಬಜೆಟ್ ನಲ್ಲಿ ಜಲ ಸಂಪನ್ಮೂಲ ಇಲಾಖೆಗೆ ಮತ್ತು ನೀರಾವರಿಗೆ ಒಟ್ಟು 15.998 ಕೋಟಿ ರುಪಾಯಿಗಳನ್ನು ಮೀಸಲಿಟ್ಟಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಈ ಬಾರಿ ಬರ ಪೀಡಿತ ಪ್ರದೇಶಗಳಲ್ಲಿರುವ ಕೆರೆಗಳನ್ನು ತುಂಬಿಸಲು  ಬಜೆಟ್‌ನಲ್ಲಿ ಮೊದಲ ಆದ್ಯತೆ ನೀಡಿದ್ದು, ಭದ್ರಾ ಮೇಲ್ದಂಡೆ, ಎತ್ತಿನಹೊಳೆ ನೀರಾವರಿ ಯೋಜನೆಗಳಿಗೆ ಒಟ್ಟು 15, 998 ಕೋಟಿ ರುಪಾಯಿ ಅನುದಾನ ಘೋಷಿಸಿದ್ದಾರೆ. 
ಜಲಾಶಯಗಳಿಂದ ಕಾಲುವೆ ಮೂಲಕ ಅಥವಾ ಏತ ನೀರಾವರಿ ಮೂಲಕ ಕೆರೆಗಳನ್ನು ತುಂಬಿಸಲು ಸುಮಾರು 4 ಸಾವಿರ ಕೋಟಿ ರುಪಾಯಿಗಳನ್ನು ಮೀಸಲಿಡಲಾಗಿದೆ.
ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಬೆಳಗಾವಿ, ದಾವಣಗೆರೆ, ವಿಜಯಪುರ, ಮೈಸೂರು, ಬಳ್ಳಾರಿ, ರಾಯಚೂರು  ಜಿಲ್ಲೆಗಳು ಕೆರೆ ತುಂಬಿಸುವ ಯೋಜನೆಯಲ್ಲಿ ಸಿಂಹ ಪಾಲನ್ನು ಪಡೆದಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT