ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್ ಮಂಡನೆ 
ರಾಜ್ಯ ಬಜೆಟ್

ರಾಜ್ಯ ಬಜೆಟ್ : ಬೆಳಗಾವಿ ನಿರ್ಲಕ್ಷಿಸಲ್ಪಟ್ಟಿದೆ, ಕೈಗಾರಿಕೋದ್ಯಮಿಗಳ ಅಸಮಾಧಾನ

ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರ ಮೊದಲ ಬಜೆಟ್ ನಲ್ಲಿ ಬೆಳಗಾವಿ ನಿರ್ಲಕ್ಷಿಸಲ್ಪಟ್ಟಿದೆ ಎಂಬ ಆರೋಪ ಕೇಳಿಬಂದಿದೆ.

ಬೆಳಗಾವಿ: ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರ ಮೊದಲ ಬಜೆಟ್ ನಲ್ಲಿ  ಬೆಳಗಾವಿ ನಿರ್ಲಕ್ಷಿಸಲ್ಪಟ್ಟಿದೆ ಎಂಬ ಆರೋಪ ಕೇಳಿಬಂದಿದೆ.  ಆದಾಗ್ಯೂ, ಇಲ್ಲಿನ ಭಾರತೀಯ ವೈದ್ಯಕೀಯ ಸಂಸ್ಥೆ  ಆವರಣದಲ್ಲಿ  ನಿರ್ಮಾಣವಾಗುತ್ತಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ  ವಿಶೇಷ ಅನುದಾನ ಒದಗಿಸಿದ್ದಾರೆ.
ಹೃದಯ , ಮೂತ್ರರೋಗ ಸಮಸ್ಯೆ. ಪ್ಲಾಸ್ಟಿಕ್ ಸರ್ಜರಿ ಮತ್ತಿತರ ಚಿಕಿತ್ಸೆಗೆ ಬೆಳಗಾವಿಯಲ್ಲಿ ಸೂಪರ್ ಸ್ಪೆಶಾಲಿಟಿ ಚಿಕಿತ್ಸೆ ಸೌಲಭ್ಯ ದೊರೆಯುತ್ತಿದೆ. ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗೆ ಅಂದಾಜು 150 ರೂ ಹಾಗೂ ಟ್ರೂಮಾ ಕೇಂದ್ರಕ್ಕೆ 30 ಕೋಟಿ ರೂಪಾಯಿ ಅಗತ್ಯವಿದೆ. 2014ರಲ್ಲಿ ಈ ಯೋಜನೆ ರೂಪಿಸಲಾಗಿತ್ತು. ಆದರೆ. ಈ ಬಾರಿಯ ಬಜೆಟ್ ನಲ್ಲಿ ಇದನ್ನು ಮೇಲ್ದರ್ಜೇಗೇರಿಸಲು ನಿರ್ಧರಿಸಲಾಗಿದೆ.
ಚಿಕ್ಕೋಡಿ ತಾಲೂಕಿನ ಹಿರೆಕೊಡಿ, ನಾಗರಾಳ, ನೇಜ್ ಮತ್ತಿತರ ಗ್ರಾಮಗಳ 10,225 ಹೆಕ್ಟೇರ್ ಭೂ ಪ್ರದೇಶಕ್ಕೆ  ಕೃಷ್ಣಾ  ನದಿಯಿಂದ ನೀರಾವರಿ ಸೌಲಭ್ಯ  ಒದಗಿಸಲು 100  ಕೋಟಿ ರೂ ಮೀಸಲು ಇರಿಸಲಾಗಿದೆ. ಈ ಎರಡನ್ನೂ ಹೊರತುಪಡಿಸದರೆ ಈ ಬಜೆಟ್ ನಲ್ಲಿ ಬೇರೆ ಏನೂ ನೀಡಿಲ್ಲ.
ದೇಶದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ರೈತರ 34 ಸಾವಿರ ಕೋಟಿ ಸಾಲ ಮನ್ನಾ ಮಾಡಲಾಗಿದೆ.  ಇದಲ್ಲದೇ  ಹೆಚ್ಚುವರಿಯಾಗಿ 6.500 ಕೋಟಿ ಮೊತ್ತದ ಸೌಲಭ್ಯಗಳನ್ನು ರೈತರಿಗೆ ಹೊಸ ಸರ್ಕಾರ ನೀಡಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ ಕರ್  ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
 ಆದರೆ, ಬಜೆಟ್ ನಲ್ಲಿ ಉತ್ತರ ಕರ್ನಾಟಕ ನಿರ್ಲಕ್ಷಿಸಲಾಗಿದೆ. ರಾಮನಗರ ಮತ್ತು ಹಾಸನ ಜಿಲ್ಲೆಗಳನ್ನು ಮಾತ್ರ ಪರಿಗಣಿಸಲಾಗಿದೆ . ಬೆಳಗಾವಿಯನ್ನು ಬಜೆಟ್ ನಲ್ಲಿ ಪರಿಗಣನೆಗೆ ತೆಗೆದುಕೊಂಡಿಲ್ಲ ಎಂದು ಶಾಸಕ ಅಭಯ್ ಪಾಟೀಲ್  ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಧಾನಸಭೆಯಲ್ಲಿ 'ಸಿಎಂ ಕುರ್ಚಿ ಕದನ' ಸದ್ದು: ಆರ್. ಅಶೋಕ್ ಮಾತಿಗೆ ಕೆರಳಿದ ಬೈರತಿ; ತೀವ್ರ ಮಾತಿನ ಚಕಮಕಿ!

ತಾಂತ್ರಿಕ ಕಾರಣಗಳಿಂದ SIR ಕುರಿತು ಸಂಸತ್ತಿನಲ್ಲಿ ಚರ್ಚಿಸಲು ಸಾಧ್ಯವಿಲ್ಲ: ಅಮಿತ್ ಶಾ

Protection of personality rights: ಹೈಕೋರ್ಟ್ ಗೆ ಸಲ್ಮಾನ್ ಖಾನ್; ವ್ಯಕ್ತಿತ್ವ ಹಕ್ಕುಗಳ ರಕ್ಷಣೆ ಟ್ರೆಂಡ್ ಆಗ್ತಿರೋದೇಕೆ?

25 ವರ್ಷ ವಯಸ್ಸಿನ ಅವಿವಾಹಿತ ಮಹಿಳೆಯರು..: ಅನಿರುದ್ಧಾಚಾರ್ಯ ವಿರುದ್ಧ ಕೇಸ್ ದಾಖಲು! 'ಪೂಕಿ ಬಾಬಾ' ಹೇಳಿದ್ದೇನು ಗೊತ್ತಾ?

EVMs ಅಲ್ಲವೇ ಅಲ್ಲ, ಪ್ರಧಾನಿ ಮೋದಿ ಇದನ್ನೇ 'ಹ್ಯಾಕ್' ಮಾಡಿದ್ದಾರೆ! ಲೋಕಸಭೆಯಲ್ಲಿ ಕಂಗನಾ

SCROLL FOR NEXT