ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ ಬಜೆಟ್

ಸಿದ್ದರಾಮಯ್ಯನವರ 'ಕನಸಿನ ಯೋಜನೆ'ಗಳನ್ನು ಮುಂದುವರಿಸಲಿರುವ ಸಿಎಂ ಕುಮಾರಸ್ವಾಮಿ

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಇಂದು ವಿಧಾನಸಭೆಯಲ್ಲಿ ಮಂಡಿಸಲಿರುವ ಬಹು ...

ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಇಂದು ವಿಧಾನಸಭೆಯಲ್ಲಿ ಮಂಡಿಸಲಿರುವ ಬಹು ನಿರೀಕ್ಷಿತ ಬಜೆಟ್ ನಲ್ಲಿ ಕಳೆದ ಬಾರಿ ಸಿದ್ದರಾಮಯ್ಯನವರು ಘೋಷಿಸಿದ್ದ ಯೋಜನೆಗಳ ಪೈಕಿ ಶೇಕಡಾ 80ರಷ್ಟನ್ನು ಮುಂದುವರಿಸಲು ನಿರ್ಧರಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸಿನ ಕೂಸಾಗಿರುವ ಆರೋಗ್ಯ ಭಾಗ್ಯ. ಸ್ನಾತಕೋತ್ತರ ಪದವಿಯವರೆಗೆ ಹೆಣ್ಣುಮಕ್ಕಳಿಗೆ ಉಚಿತ ಶಿಕ್ಷಣ ಯೋಜನೆಗಳು ಇಂದು ಕುಮಾರಸ್ವಾಮಿಯವರು ಮಂಡಿಸುತ್ತಿರುವ ಬಜೆಟ್ ನಲ್ಲಿ ಕೂಡ ಮುಂದುವರಿಯಲಿದೆ ಎಂದು ಮೂಲಗಳು ಹೇಳುತ್ತವೆ.

ಕಾಂಗ್ರೆಸ್ ಮತ್ತು ಜೆಡಿಎಸ್ ರಾಜ್ಯದ ಬಗ್ಗೆ ಸಮಾನ ಹಿತಾಸಕ್ತಿಗಳನ್ನು ಬಯಸಿದೆ ಎನ್ನುತ್ತಾರೆ ರಾಯಚೂರು ವಿಶ್ವವಿದ್ಯಾಲಯದ ಪ್ರೊ ಮುಜಾಫರ್ ಅಸ್ಸದಿ.

ತನ್ನ ಮೂಲವನ್ನು ಕ್ರೋಢೀಕರಿಸಲು ಕಾಂಗ್ರೆಸ್ ಯತ್ನಿಸುತ್ತಿದ್ದರೆ ತನ್ನ ಮೂಲವನ್ನು ವಿಸ್ತರಿಸಲು ಜೆಡಿಎಸ್ ಯತ್ನಿಸುತ್ತಿದೆ. ಹಿಂದಿನ ಸರ್ಕಾರದ ಜನಪ್ರಿಯ ಯೋಜನೆಗಳನ್ನು ಕೈಬಿಟ್ಟು ದಲಿತ ವಿರೋಧಿ ಮತ್ತು ಅಲ್ಪಸಂಖ್ಯಾತ ವಿರೋಧಿ ಎಂಬ ಹಣೆಪಟ್ಟಿಯನ್ನು ಕಟ್ಟಿಕೊಳ್ಳಲು ಎರಡೂ ಪಕ್ಷಗಳಿಗೆ ಇಚ್ಛೆಯಿಲ್ಲ ಎನ್ನುತ್ತಾರೆ ಪ್ರೊ ಅಸ್ಸದಿ.

ಹಿಂದಿನ ಸಿದ್ದರಾಮಯ್ಯ ಸರ್ಕಾರದ ಪ್ರಮುಖ ಯೋಜನೆಗಳನ್ನು ಕುಮಾರಸ್ವಾಮಿಯವರು ಬಜೆಟ್ ನಲ್ಲಿ ಕೈಬಿಟ್ಟರೆ ಪೂರಕ ಬಜೆಟ್ ನಲ್ಲಿ ಕಾಂಗ್ರೆಸ್ ಅದನ್ನು ಪ್ರಸ್ತಾಪ ಮಾಡುವ ಸಾಧ್ಯತೆಯಿದೆ ಎಂದು ವಿಧಾನಪರಿಷತ್ ನ ಮುಖ್ಯ ಸಚೇತಕ ಹಾಗೂ ಸಿದ್ದರಾಮಯ್ಯನವರ ಸಹಚರ ಐವಾನ್ ಡಿಸೋಜ ಹೇಳುತ್ತಾರೆ. ಚುನಾವಣೆಗೆ ಮುನ್ನ ಪೂರ್ಣ ಪ್ರಮಾಣದ ಬಜೆಟ್ ಮಂಡಿಸುವ ಮೊದಲು ಸಿದ್ದರಾಮಯ್ಯನವರು ಲೆಕ್ಕಪತ್ರ ಮಂಡಿಸಬೇಕಾಗಿತ್ತು ಎನ್ನುತ್ತಾರೆ ಅಹಿಂದ ನಾಯಕ ಲೋಲಾಕ್ಷ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್‌ನಲ್ಲಿ ಸಿಲುಕಿರುವ ಭಾರತೀಯರಿಗೆ ಪ್ರಧಾನಿ ಮೋದಿ ಸಹಾಯದ ಭರವಸೆ; ಕೊಚ್ಚಿಯಲ್ಲಿ 'ವಿಕ್ಷಿತ್ ಕೇರಳಂ'ಗೆ ಚಾಲನೆ

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್‌ ದಾಳಿ; ಭಾರತೀಯ ಸೇರಿ ನಾಲ್ವರಿಗೆ ಗಾಯ

'ಲೋಕಸಭೆಯಲ್ಲಿ ನಾನು ಮಾತನಾಡದಂತೆ ಹಲವು ಬಾರಿ ತಡೆದರು': ರಾಹುಲ್ ಗಾಂಧಿ

ಲ್ಯಾಂಡಿಂಗ್ ಆಗುವಾಗ ಕಳಚಿಬಿದ್ದ ವಿಮಾನದ ಚಕ್ರಗಳು: ಫುಕೆಟ್ ವಿಮಾನ ನಿಲ್ದಾಣ ತಾತ್ಕಾಲಿಕವಾಗಿ ಬಂದ್!

ಬೆಂಗಳೂರಿನಲ್ಲಿ ಗೃಹಬಳಕೆ ಎಲ್‌ಪಿಜಿಯಲ್ಲೂ ಕೊರತೆ: ಬುಕಿಂಗ್ ನಂಬರ್ ಸ್ವಿಚ್ ಆಫ್; ಹೆಚ್ಚಿದ ಆತಂಕ

SCROLL FOR NEXT