ಬಜೆಟ್ ಮಂಡಿಸಿದ ಸಿಎಂ ಕುಮಾರಸ್ವಾಮಿ 
ರಾಜ್ಯ ಬಜೆಟ್

ರಾಜ್ಯ ಬಜೆಟ್ 2018: ಕುಮಾರಸ್ವಾಮಿ ಬಜೆಟ್ ನಲ್ಲಿ ಯಾವ ಇಲಾಖೆಗೆ ಎಷ್ಟೆಷ್ಟು ಅನುದಾನ?

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸುಮಾರು 2 ಲಕ್ಷದ 25 ಸಾವಿರ ಕೋಟಿ ರೂ. ಗಾತ್ರದ ಚೊಚ್ಚಲ ಬಜೆಟ್ ಅನ್ನು ಸಿಎಂ ಕುಮಾರಸ್ವಾಮಿ ಮಂಡಿಸಿದರು.

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸುಮಾರು 2 ಲಕ್ಷದ 25 ಸಾವಿರ ಕೋಟಿ ರೂ. ಗಾತ್ರದ ಚೊಚ್ಚಲ ಬಜೆಟ್ ಅನ್ನು ಸಿಎಂ ಕುಮಾರಸ್ವಾಮಿ ಮಂಡಿಸಿದರು.
ಇಂದು ಬೆಳಗ್ಗೆ ಸುಮಾರು 11.30ಕ್ಕೆ ಬಜೆಟ್ ಮಂಡನೆ ಆರಂಭಿಸಿದ ಸಿಎಂ ಕುಮಾರಸ್ವಾಮಿ ಅವರು ಸುಧೀರ್ಘ 1 ಗಂಟೆ 49 ನಿಮಿಷಗಳ ಕಾಲ ಬಜೆಟ್ ಪ್ರತಿ ಓದಿದರು. ಪ್ರಮುಖವಾಗಿ ಎಲ್ಲರ ಕೇಂದ್ರ ಬಿಂದುವಾಗಿದ್ದ ರೈತರ ಸಾಲಮನ್ನಾ ಘೋಷಣೆ ಮಾಡಿದ ಸಿಎಂ ಕುಮಾರಸ್ವಾಮಿ, ರೈತರ 2 ಲಕ್ಷ ರೂ ವರೆಗಿನ ಸಾಲ ಮನ್ನಾ ಮಾಡುವುದಾಗಿ ಹೇಳಿದರು. 
ರೈತರ ಸಾಲಮನ್ನಾ ಘೋಷಣೆಗೂ ಮುನ್ನಾ ಮಾತನಾಡಿದ ಸಿಎಂ ಕುಮಾರಸ್ವಾಮಿ ಅವರು, ನಿಮ್ಮದೇ ನೆಲ ನಿಮ್ಮದೇ ಬೆಳೆ ಎಂಬ ರಾಷ್ಟ್ರಕವಿ ಕುವೆಂಪು ಅವರ ರಚನೆಯ ಸಾಲುಗಳನ್ನು ಪ್ರಸ್ತಾಪಿಸಿ ಸಿಎಂ ಕುಮಾರಸ್ವಾಮಿ ಸಾಲಮನ್ನಾ ಘೋಷಣೆ ಮಾಡಿದರು. ಅಂತೆಯೇ ಸಾಲ ಪಾವತಿ ಮಾಡಿದ ರೈತರಿಗೆ ಸಾಲದ ಹಣ ವಾಪಸ್ ನೀಡುವುದಾಗಿ ಮಾತ್ರವಲ್ಲದೇ 25 ಸಾವಿರ ಹೆಚ್ಚುವರಿ ಹಣವನ್ನು ಉತ್ತೇಜನ ಧನವಾಗಿ ನೀಡುವುದಾಗಿ ಘೋಷಣೆ ಮಾಡಿದರು. 
ಸುಮಾರು 2 ಲಕ್ಷದ 25 ಸಾವಿರ ಕೋಟಿ ಗಾತ್ರದ ಬಜೆಟ್ ನಲ್ಲಿ ಕಂದಾಯ ಇಲಾಖೆಗೆ 7,180 ಕೋಟಿ ರೂ ಅನುದಾನ ನೀಡಲಾಗಿದೆ. ಅಂತೆಯೇ ಲೋಕೋಪಯೋಗಿ ಇಲಾಖೆಗೆ ಶೇ 4ರಂತೆ 10,200 ಕೋಟಿ ರೂ, ಪ್ರಾಥಮಿಕ ಶಿಕ್ಷಣ ಇಲಾಖೆಗೆ 150 ಕೋಟಿ ರೂಪಾಯಿ ಸೇರಿದಂತೆ  ಶಿಕ್ಷಣ ಕ್ಷೇತ್ರಕ್ಕೆ ಶೇ 11ರಷ್ಟು ಅಂದರೆ 26,581 ಕೋಟಿ ರೂ ಅನುದಾನ ನೀಡಲಾಗಿದೆ.
ಜಲ ಸಂಪನ್ಮೂಲ ಇಲಾಖೆಗೆ 18,142 ಕೋಟಿ ರೂ ಅನುದಾನ, ಕೃಷಿ ಮತ್ತು ತೋಟಗಾರಿಕಾ ಇಲಾಖೆಗೆ 7642 ಕೋಟಿ ರೂ. ಹಣ ಮೀಸಲಿಡಲಾಗಿದೆ. ಇದಲ್ಲದೆ ಜಲಸಂಪನ್ಮೂಲ ಇಲಾಖೆಗೆ 18,142 ಕೋಟಿ ರೂ, ನಗರಾಭಿವೃದ್ಧಿ - 17,727 ಕೋಟಿ ರೂ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ - 14,449 ಕೋಟಿ ರೂ. ಹಣ ಮೀಸಲಿಡಲಾಗಿದೆ.
ಅಂತೆಯೇ ವಿದ್ಯುತ್ - 14,123 ಕೋಟಿ ರೂ, ಸಮಾಜ ಕಲ್ಯಾಣ - 11,788 ಕೋಟಿ ರೂ, ಲೋಕೋಪಯೋಗಿ - 10,200 ಕೋಟಿ ರೂ, ಒಳಾಡಳಿತ ಮತ್ತು ಸಾರಿಗೆ ಇಲಾಖೆಗೆ - 7,953 ಕೋಟಿ ರೂ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ -9,317 ಕೋಟಿ ರೂ, ಕೃಷಿ ಮತ್ತು ತೋಟಗಾರಿಕೆ - 7,642 ಕೋಟಿ ರೂ, ಕಂದಾಯ - 7,180 ಕೋಟಿ ರೂ, ಮಹಿಳಾ ಮತ್ತು ಮಕ್ಕಳ ಕಲ್ಯಾಣ - 5,725 ಕೋಟಿ ರೂ ಮತ್ತು ವಸತಿ - 3,942 ಕೋಟಿ ರೂ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಗೆ  3,866 ಕೋಟಿ ರೂ. ಮೀಸಲಿಡಲಾಗಿದೆ. ಇತರೆ ಇಲಾಖೆಗಳಿಗೆ 82,196 ಕೋಟಿ ರೂ. ಮೀಸಲಿಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT